ಬಿ ಎಲ್ ಡಿ ಇ ಎಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ

ವಿಜಯಪುರ: ವಿಜಯಪುರದ ಪ್ರತಿಷ್ಠಿತ ಬಿ ರಲ್ ಡಿ ಇ ಸಂಸ್ಥೆಯ ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಗ್ರಂಥಾಲಯ ವಿಜ್ಞಾನ ಪಿತಾಮಹ ಪದ್ಮಶ್ರೀ ಪುರಸ್ಕೃತ ಡಾ. ಎಸ್. ಆರ್. ರಂಗನಾಥನ್ ಅವರ 129ನೇ ಜನ್ಮ ದಿನದ ಅಂಗವಾಗಿ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆಯನ್ನು ಆಚರಿಸಲಾಯಿತು.

ವಿದ್ಯಾರ್ಥಿಗಳಿಗೆ ಹಾಗೂ ಅಧ್ಯಾಪಕರಿಗೆ ಗ್ರಂಥಾಲಯದಲ್ಲಿನ ಚಟುವಟಿಕೆಗಳ ಕುರಿತು ನಾನಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಅತ್ಯುತ್ತಮ ಗ್ರಂಥಾಲಯ ಬಳಕೆದಾರರ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳ ವಿಭಾಗದಲ್ಲಿ ಗೌರಿ ಚಿಂಚೊಳ್ಳಿ ಪ್ರಥಮ ಮತ್ತು ನಿಸರ್ಗ ಪಾಟೀಲ ದ್ವಿತೀಯ, ಪ್ರಾಧ್ಯಾಪಕರ ವಿಭಾಗದಲ್ಲಿ ಪ್ರೊ. ವಿನೋದ ಎಸ್. ಜಿದ್ದಿ ಪ್ರಥಮ, ಡಾ. ರಮೇಶ ಎಸ್. ಮಲ್ಲಾಡ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಆನ್‍ಲೈನ್ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರೊ. ಶ್ರೀರಂಗ ಕುಲಕರ್ಣಿ ಪ್ರಥಮ ಮತ್ತು ಪ್ರೊ. ಸ್ವಸ್ತಿಕ ದಾಸ್ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಾಚಾರ್ಯ ಡಾ. ಅತುಲ್ ಆಯಿರೆ ಬಹುಮಾನವನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಪ್ರಾಧ್ಯಾಪಕರಾದ ಡಾ. ಮಲ್ಲಿಕಾರ್ಜುನ ಬಾಚಲಾಪುರ, ಡಾ. ಜಿ. ವಿ. ಪಾಟೀಲ, ಡಾ. ಮಹೇಶ ನಾಗರಾಳ, ಪಾಂಡುರಂಗ ಬಿರಾದಾರ, ಜಿ. ಬಿ..ಪಾಟೀಲ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌