ಶೇ. 2ಕ್ಕಿಂತ ಕಡಿಮೆ ಕೊರೊನಾ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ 9, 10, ಪಿಯುಸಿ ತರಗತಿ ಪ್ರಾರಂಭ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಶೇ. 2ಕ್ಕಿಂತ ಕಡಿಮೆ ಕೊರೊನಾ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ 9, 10 ಮತ್ತು ಪಿಯುಸಿ ತರಗತಿ ಪ್ರಾರಂಭಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ತಜ್ಞರು ಮತ್ತು ಹಿರಿಯ ಅಧಿಕಾರಿಗಳ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಬೆಂಗಳೂರಿನಲ್ಲಿ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಶೇ. 2ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ ಹಾಗೂ ಗಡಿ ಭಾಗದ ತಾಲೂಕುಗಳಲ್ಲಿ ಪರಿಸ್ಥಿತಿ ಅವಲೋಕಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿಎಂ ಬಸವರಾಜ ಬೊಮ್ಮಾಯಿ.

ಶಾಲೆಗಳಲ್ಲಿ ಶೇ. 2ಕ್ಕಿಂತ ಹೆಚ್ಚು ಪ್ರಕರಣ ವರದಿಯಾದರೆ, ಒಂದು ವಾರ ಕಾಲ ಶಾಲೆ ಮುಚ್ಚಿ ಸ್ವಚ್ಛಗೊಳಿಸಿದ ನಂತರ ತೆರೆಯಲು ಕ್ರಮ ವಹಿಸಲಾಗುವುದು. ಶಾಲಾ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ಪೋಷಕರು ಆದ್ಯತೆ ಮೇರೆಗೆ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.

ಕೋವಿಡ್ ನಿರ್ವಹಣೆಗೆ ಜಿಲ್ಲಾವಾರು ಯೋಜನೆ ರೂಪಿಸಲು ಸೂಚಿಸಲಾಗಿದೆ. ಆಯಾ ಜಿಲ್ಲೆಗಳ ಪರಿಸ್ಥಿತಿಗೆ ಅನುಗುಣವಾಗಿ ಜಿಲ್ಲೆಯ ಅಗತ್ಯಕ್ಕೆ ತಕ್ಕಂತೆ ಯೋಜನೆ ರೂಪಿಸಲಾಗುವುದು. ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ಹಾಕಿಸಲು ಹಾಗೂ ಪರೀಕ್ಷಾ ಪ್ರಮಾಣ ಹೆಚ್ಚಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಅವರು ತಿಳಿಸಿದರು.

ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿಎಂ ಬಸವರಾಜ ಬೊಮ್ಮಾಯಿ.

ಕೇರಳ ಮತ್ತು ಮಹಾರಾಷ್ಟ್ರ ಗಡಿ ಭಾಗದಿಂದ 10 ಕಿ. ಮೀ. ವ್ಯಾಪ್ತಿಯಲ್ಲಿರುವ ರಾಜ್ಯದ ಹಳ್ಳಿಗಳಲ್ಲಿ ಲಸಿಕೆ ನೀಡುವುದನ್ನು ತೀವ್ರಗೊಳಿಸಲು ಹಾಗೂ ಪರೀಕ್ಷಾ ಪ್ರಮಾಣ ಹೆಚ್ಚಿಸಲು ತೀರ್ಮಾನಿಸಲಾಯಿತು. ರಾಯಚೂರು, ಕಲಬುರಗಿ, ಬಳ್ಳಾರಿ, ಬೀದರ, ಕೊಪ್ಪಳ, ಹಾವೇರಿ, ವಿಜಯಪುರ, ತುಮಕೂರು, ಚಿಕ್ಕಮಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಪರಿಕ್ಷಾ ಪ್ರಮಾಣ ಹೆಚ್ಚಿಸಲು ನಿರ್ಧರಿಸಲಾಯಿತು ಎಂದು ಸಿಎಂ ತಿಳಿಸಿದರು.

ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿಎಂ ಬಸವರಾಜ ಬೊಮ್ಮಾಯಿ.

ಮುಂದಿನ ಎರಡು ವಾರಗಳಲ್ಲಿ ರಾಜ್ಯದಲ್ಲಿ ಬೆಂಗಳೂರು, ಮೈಸೂರು, ಶಿವಮೊಗ್ಗ, ಕಲಬುರಗಿ, ಬೆಳಗಾವಿ, ಹುಬ್ಬಳ್ಳಿಗಳಲ್ಲಿ ಆರು ಜಿನೋಮ್ ಪರೀಕ್ಷಾ ಪ್ರಯೋಗಾಲಯಗಳನ್ನು ಸ್ಥಾಪಿಸಲು ಸೂಚನೆ ನೀಡಲಾಗಿದೆ. ಡೆಲ್ಟಾ ವೇರಿಯೆಂಟ್ ವೈರಸ್ ಅಧ್ಯಯನ ಹಾಗೂ ಇತರ ವೇರಿಯೆಂಟ್ ಗಳನ್ನು ಪತ್ತೆ ಹಚ್ಚಲು ಇದರಿಂದ ಅನುಕೂಲವಾಗಲಿದೆ ಎಂದು ಸಿಎಂ ತಿಳಿಸಿದರು.

ಕೊರೊನಾ ನಿಯಂತ್ರಣ ಪರಿಶೀಲನಾ ಸಭೆ ಬಳಿಕ ಸಿಎಂ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ರಾಜ್ಯದಲ್ಲಿ ಇಂದಿನವರೆಗೆ ಸುಮಾರು 4 ಕೋಟಿ ಲಸಿಕೆ ಹಾಕಲಾಗಿದೆ. 14.89 ಲಕ್ಷ ಡೋಸ್ ಲಸಿಕೆ ಲಭ್ಯವಿದೆ. ಮುಂದಿನ ವಾರ ದೆಹಲಿಗೆ ತೆರಳಿ ಕೇಂದ್ರ ಆರೋಗ್ಯ ಸಚಿವರನ್ನು ಭೇಟಿಯಾಗಿ ರಾಜ್ಯಕ್ಕೆ ಹಂಚಿಕೆಯಾಗುವ ಲಸಿಕೆ ಡೋಸ್ ಗಳನ್ನು 65 ಲಕ್ಷದಿಂದ 1 ಕೋಟಿಗೆ ಹೆಚ್ಚಿಸುವಂತೆ ಮನವಿ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕೊರೊನಾ ನಿಯಂತ್ರಣ ಪರಿಶೀಲನಾ ಸಭೆ ಬಳಿಕ ಸಿಎಂ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಬೆಂಗಳೂರು ನಗರದಲ್ಲಿ ಕೋವಿಡ್ ನಿರ್ವಹಣೆ ಕುರಿತಂತೆ ಮಕ್ಕಳ ಐಸಿಯು ಬೆಡ್ ಗಳನ್ನು ಮೀಸಲಿರಿಸಲು ಸೂಚಿಸಲಾಗಿದೆ. ಬೆಂಗಳೂರಿನಲ್ಲಿ ಸದ್ಯ ಶೇ. 0.75 ಪಾಸಿಟಿವಿಟಿ ದರ ಇದೆ. ಶೇ. 2 ರಷ್ಟು ಪಾಸಿಟಿವಿಟಿ ದರ ಹಾಗೂ ಶೆ. 40 ರಷ್ಟು ಆಕ್ಸಿಜನೇಟೆಡ್ ಬೆಡ್ ಗೆ ಸೋಂಕಿತರಾದರೆ ದಾಖಲಾದರೆ, ಮುಂದಿನ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಅಧಿಕಾರ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

 

Leave a Reply

ಹೊಸ ಪೋಸ್ಟ್‌