ಶನಿವಾರ ಸಿಎಂ ಬಸವರಾಜ ಬೊಮ್ಮಾಯಿ ಬಸವ ನಾಡು ಪ್ರವಾಸ- ಆಲಮಟ್ಟಿ ಜಲಾಷಯಕ್ಕೆ ಬಾಗೀನ ಅರ್ಪಣೆ

ವಿಜಯಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಆ. 21ರಂದು ಬಸವ ನಾಡು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಆ. 21 ರಂದು ಬೆ. 11ಕ್ಕೆ ಹೆಲಿಕಾಪ್ಟರ್ ಮೂಲಕ ನಿಡಗುಂದಿ ತಾಲೂಕಿನ ಆಲಮಟ್ಟಿಗೆ ಆಗಮಿಸಲಿದ್ದಾರೆ. ಬಳಿಕ ಭರ್ತಿಯಯಾಗಿರುವ ಲಾಲ್ ಬಹಾದ್ದೂರ ಶಾಸ್ತ್ರಿ ಸಾಗರಕ್ಕೆ ಗಂಗಾಪೂಜೆ ಸಲ್ಲಿಸಿ ಬಾಗೀನ ಅರ್ಪಿಸಲಿದ್ದಾರೆ.

ನಂತರ ಜನಪ್ರತಿನಿಧಿಗಳೊಂದಿಗೆ ಭೇಟಿ ನಡೆಸಲಿದ್ದಾರೆ.

ಮ. 1ಕ್ಕೆ ಆಲಮಟ್ಟಿಯಿಂದ ಹೆಲಿಕಾಪ್ಟರ್ ಮೂಲಕ ಬೆಳಗಾವಿ ಸುವರ್ಣ ವಿಧಾನಸೌಧಕ್ಕೆ ತೆರಳಿದ್ದಾರೆ.

Leave a Reply

ಹೊಸ ಪೋಸ್ಟ್‌