ವಿಜಯಪುರ-ಬಾಗಲಕೋಟೆ ಜಿಲ್ಲೆಗಳಿಗೆ ಪ್ರತಿದಿನ 25 ಸಾವಿರ ಕೊರೊನಾ ಲಸಿಕೆ ನೀಡಲು ಕ್ರಮ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ

ವಿಜಯಪುರ: ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಿಗೆ ಮುಂದಿನ ದಿನಗಳಲ್ಲಿ ವಿಶೇಷವಾಗಿ ಪ್ರತಿ ದಿನಕ್ಕೆ ತಲಾ 25 ಸಾವಿರ ಕೊರೊನಾ ಲಸಿಕೆಗಳ ಪೂರೈಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ವಿಜಯಪುರ ಜಿಲ್ಲೆಯ ಆಲಮಟ್ಟಿ ಕೃಷ್ಣ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು,
ವಿಜಯಪುರ: ಕೋವಿಡ್- 19 3ನೇ ಅಲೆಯ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮತ್ತು ಕೇರಳ ಭಾಗಗಳಿಂದ ಬರುವವರ ಮೇಲೆ ತೀವ್ರ ನಿಗಾ ವಹಿಸಲು ಚೆಕ್ ಪೋಸ್ಟ್ ಗಳಿಗೆ ನಿರಂತರ ಭೇಟಿ ನೀಡಿ ಪರಿಶೀಲಿಸುವಂತೆ ಮುಖ್ಯಮಂತ್ರಿ ಬಸವರಾಜ ಬೋಮ್ಮಾಯಿ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಕೋವಿಡ್- 19 3ನೇ ಅಲೆಯ ಬಗ್ಗೆ ತಜ್ಞರು ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಬೇಕು. ಚೆಕ್ ಪೋಸ್ಟ್ ಗಳಲ್ಲಿ ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಿಂದ ಆಗಮಿಸುವ ನಾಗರಿಕರ ಬಗ್ಗೆ ತೀವ್ರ ನಿಗಾ ಇಟ್ಟು ಕೋವಿಡ್- 19 ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ಪೊಲೀಸ್ ಇಲಾಖೆ ಹಿರಿಯ ಅಧಿಕಾರಿಗಳು ನಿರಂತರ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ನಿಗಾ ಇಡುವಂತೆ ಸೂಚನೆ ನೀಡಿದರು.

ಆಲಮಟ್ಟಿಯಲ್ಲಿ ವಿಜಯಪುರ-ಬಾಗಲಕೋಟೆ ಜನಪ್ರತಿನಿಧಿಗಳು, ಅಧಿಕಾರಿಗಳ ಸಭೆ ನಡೆಸಿದ ಸಿಎಂ.

ಕೋವಿಡ್ – 19 3ನೇ ಅಲೆಯ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಗಳಲ್ಲಿ ವಿಶೇಷ ಗಮನ ನೀಡಬೇಕು. ಮಕ್ಕಳಿಗಾಗಿ ಜಿಲ್ಲಾಸ್ಪತ್ರೆಗಳಲ್ಲಿ ಹೆಚ್ಚಿನ ಐಸಿಯು ಬೆಡ್ ಗಳನ್ನು ಮೀಸಲಿಡಬೇಕು. ಮಕ್ಕಳ ಬೆಳವಣಿಗೆ ಸೇರಿದಂತೆ ಅಪೌಷ್ಟಿಕತೆ ನಿವಾರಣೆಗೆ ಗಮನವಿಟ್ಟು ಪ್ರತಿಯೊಂದು ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ನಗರಗಳ ವಾರ್ಡ್ ವ್ಯಾಪ್ತಿಯಲ್ಲಿ ಮಕ್ಕಳ ಚಿಕಿತ್ಸಾ ಶಿಬಿರಗಳನ್ನು ಏರ್ಪಡಿಸಬೇಕು. ಶಿಕ್ಷಣ, ಆರೋಗ್ಯ, ಕಂದಾಯ ಇಲಾಖೆ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಸಹಯೋಗದೊಂದಿಗೆ ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಕ್ರಮ ಕೈಗೊಳ್ಳಬೇಕು. ವಿಶೇಷವಾಗಿ ಮಾನಸಿಕ ಮತ್ತು ದೈಹಿಕ ಬೆಳವಣಿಗೆ ಹಾಗೂ ಅಪೌಷ್ಠಿಕತೆ ಕೊರತೆ ನೀಗಿಸಲು ಗಮನ ನೀಡಬೇಕು ಎಂದು ಸಿಎಂ ಸೂಚನೆ ನೀಡಿದರು.

 

ಬ್ಲಾಕ್ ಫಂಗಸ್ ಪ್ರಕರಣಗಳಿಗೆ ಸಂಬಂಧಿಸಿದಂತೆ ರೋಗಿಗಳ ಚಿಕಿತ್ಸೆ ವೆಚ್ಚ ಹೆಚ್ಚಾಗುತ್ತಿರುವ ಬಗ್ಗೆ ಗಮನಕ್ಕೆ ಬಂದಿದೆ. ಬ್ಲ್ಯಾಕ್ ಫಂಗಸ್ ಚಿಕಿತ್ಸೆ ಪಡೆಯುವ ರೋಗಿಗಳ ಚಿಕಿತ್ಸೆ ಔಷಧಿ ವೆಚ್ಚವನ್ನು ಸರಕಾರದಿಂದ ಭರಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ ಅವರು, ಕೋವಿಡ್- 19 ಮೊದಲ ಮತ್ತು 2ನೇ ಅಲೆಯಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸವಾಲನ್ನು ಎದುರಿಸಿ ಅತ್ಯುತ್ತಮ ಕಾರ್ಯ ನಿರ್ವಹಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಅವರು 3ನೇ ಅಲೆ ಹಿನ್ನೆಲೆಯಲ್ಲಿ ಸಕಲ ಸಿದ್ಧತೆಗಳೊಂದಿಗೆ ಸಜ್ಜುಗೊಳ್ಳುವಂತೆ ಸೂಚನೆ ನೀಡಿದರು.

ಆಲಮಟ್ಟಿಯಲ್ಲಿ ವಿಜಯಪುರ-ಬಾಗಲಕೋಟೆ ಜನಪ್ರತಿನಿಧಿಗಳು, ಅಧಿಕಾರಿಗಳ ಸಭೆ ನಡೆಸಿದ ಸಿಎಂ.

ಮಧ್ಯಮ ಹಾಗೂ ಬೃಹತ್ ಉದ್ಯಮಿದಾರರು ತಮ್ಮ ಸಿಬ್ಬಂದಿಗಳಿಗೆ ಅವರೇ ಪ್ರಥಮ ಹಾಗೂ 2ನೇ ಲಸಿಕೆ ದೊರಕಿಸಬೇಕು. ವಿಜಯಪುರದ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಉನ್ನತೀಕರಣಕ್ಕಾಗಿ ರೂ. 22 ಕೋ. ಅನುಮೋದನೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದೇ ಸಂದರ್ಭದಲ್ಲಿ ತಿಳಿಸಿದರು.

ಈ ಸಂದರ್ಭ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ, ವಿಜಯಪುರ ಸಂಸದ ರಮೇಶ ಜಿಗಜಿಣಗಿ, ಶಾಸಕಾರದ ಶಿವಾನಂದ ಪಾಟೀಲ, ಶಾಸಕ ಬಸನಗೌಡ ಪಾಟೀಲ ಯತ್ನಾಳ, ಎ. ಎಸ್. ಪಾಟೀಲ ನಡಹಳ್ಳಿ, ಯಶವಂತರಾಯಗೌಡ ಪಾಟೀಲ, ಸೋಮನಗೌಡ ಪಾಟೀಲ ಸಾಸನೂರ, ಸಚಿವರಾದ ಮುರುಗೇಶ ನಿರಾಣಿ, ಉಮೇಶ ಕತ್ತಿ, ಸಿ. ಸಿ. ಪಾಟೀಲ, ಬಾಗಲಕೋಟೆ ಸಂಸದ ಪಿ. ಸಿ. ಗದ್ದಿಗೌಡರ, ಶಾಸಕರಾದ ವೀರಣ್ಣ ಚರಂತಿಮಠ, ಸಿದ್ದು ಸವದಿ, ವಿಧಾನ ಪರಿಷತ್ ಸದಸ್ಯ ಅರುಣ ಶಹಾಪುರ, ಶಾಸಕ ದೊಡ್ಡನಗೌಡ ಪಾಟೀಲ, ಕೆ ಎಸ್ ಆರ್ ಟಿ ಸಿ ಎಂಡಿ ಶಿವಯೋಗಿ ಕಳಸದ, ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ, ಬಾಗಲಕೋಟೆ ಜಿಲ್ಲಾಧಿಕಾರಿ ಕ್ಯಾ.ರಾಜೇಂದ್ರ ಸೇರಿದಂತೆ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌