ನಮ್ಮ ಬಗ್ಗೆ ನಮಗೆ ಹೆಮ್ಮೆ ಇರಬೇಕೇ ಹೊರತು ಅತೀ ಸೊಕ್ಕು ಇರಬಾರದು ಶಾಸಕ ಯತ್ನಾಳ ವಿರುದ್ಧ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ವಾಗ್ದಾಳಿ

ವಿಜಯಪುರ: ನಮ್ಮ ಬಗ್ಗೆ ನಮಗೆ ಹೆಮ್ಮೆ ಇರಬೇಕೇ ಹೊರತು ಸೊಕ್ಕಿರಬಾರದು. ಸೊಕ್ಕಿಗೂ ಒಂದು ಮಿತಿ ಇರಬೇಕು ಎಂದು ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಅವರು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಲ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಇನ್ನೂ 20 ವರ್ಷಗಳ ಕಾಲ ರಾಜಕೀಯದಲ್ಲಿರುತ್ತೇನೆ. 2040 ರವರೆಗೂ ರಾಜಕೀಯದಲ್ಲಿಯೇ ಇರುತ್ತೇನೆ. ಈಗ ಕೆಲವರನ್ನು ಮಾಜಿ ಮಾಡಿದ್ದೇನೆ. ಇನ್ನೂ ಕೆಲವರನ್ನು ಮಾಜಿ ಮಾಡುತ್ತೇನೆ ಎಂದು ಯತ್ನಾಳ ಹೇಳಿದ್ದಾರೆ. ಆದರೆ, ಯಾರನ್ನು […]

ಕರ್ನಾಟಕ, ಕೇರಳದಲ್ಲಿ ಯೋಗ, ಆಯುರ್ವೇದ ಕಲಿಕೆಗೆ ಜಪಾನ್ ಜನರನ್ನು ಸೆಳೆಯಲು ಕ್ರಮ- ಜಪಾನ ರಾಯಭಾರ ಕಚೇರಿಯೆ ಡೆಪ್ಯೂಟಿ ಕೌನ್ಸುಲ್

ವಿಜಯಪುರ: ಭಾರತದ ಯೋಗ ಮತ್ತು ಆಯುರ್ವೇದ ವಿಶ್ವದ ಗಮನ ಸೆಳೆದಿದೆ. ಈ ಹಿನ್ನೆಲೆಯಲ್ಲಿ ಜಪಾನ ಪ್ರವಾಸಿಗರನ್ನು ಕರ್ನಾಟಕ ಮತ್ತು ಕೇರಳದಲ್ಲಿ ಯೋಗ ಮತ್ತು ಆಯುರ್ವೇದ ಕಲಿಕೆಗೆ ಆಕರ್ಷಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರಿನಲ್ಲಿರುವ ಜಪಾನ ರಾಯಭಾರ ಕಚೇರಿಯ ಡೆಪ್ಯೂಟಿ ಕೌನ್ಸುಲ್ ಕಟ್ಸುಮಸಾ ಮರುಓ ತಿಳಿಸಿದ್ದಾರೆ. ವಿಜಯಪುರದ ಬಿ ಎಲ್ ಡಿ ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗಾಗಿ ನಿರ್ಮಿಸಿರುವ ನೂತನ ಕ್ರೀಡಾ ಸಂಕೀರ್ಣ ಉದ್ಘಾಟಿಸಿ ಅವರು ಮಾತನಾಡಿದರು. ಭಾರತ-ಜಪಾನ ರಾಜತಾಂತ್ರಿಕ ಸಂಬಂಧಗಳ 70ನೇ ಸ್ಥಾಪನಾ ದಿನಾಚರಣೆ ಅಂಗವಾಗಿ ಉಪನ್ಯಾಸ […]

ಬಹುಗ್ರಾಮ ಯೋಜನೆಗಳ ಮೇಲ್ವಿಚಾರಣೆಗೆ ಸಮಿತಿ ರಚನೆ- ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಜಲಜೀವನ್ ಮಿಷನ್ ಯೋಜನೆಯ ಅನುಷ್ಠಾನ ಚುರುಕುಗೊಳಿಸುವ ಉದ್ದೇಶದಿಂದ ಈ ಯೋಜನೆಯಡಿ ಕೈಗೆತ್ತಿಕೊಂಡಿರುವ ಬಹುಗ್ರಾಮ ಕುಡಿಯುವ ನೀರು ಯೋಜನೆಗಳ ಮೇಲ್ವಿಚಾರಣೆಗೆ ಸಮಿತಿ ರಚನೆ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಜಲಜೀವನ್ ಮಿಷನ್ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿದ ಅವರು, ಇದು ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಇದನ್ನು ಪರಿಣಾಮಕಾರಿಯಾಗಿ ಹಾಗೂ ತ್ವರಿತವಾಗಿ ಅನುಷ್ಠಾನಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿನೆ ನೀಡಿದರು. ಪ್ರತಿ 15 ದಿನಕ್ಕೊಮ್ಮೆ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಬೇಕು. ಗ್ರಾಮೀಣಾಭಿವೃದ್ಧಿ ಇಲಾಖೆಯ ಹಿರಿಯ […]

ಕಾರ್ಯ ನಿರ್ವಹಣೆಗೆ ಅಭಿನಂದನಾ ಪತ್ರ- ವಾರದೊಳಗೆ ಜಾಗ ತೋರಿಸದೇ ವಿಜಯಪುರ ಕೆ ಕೆ ಆರ್ ಟಿ ಸಿ ಡಿಸಿ ನಾರಾಯಣಪ್ಪ ಕುರುಬರ ಎತ್ತಂಗಡಿ

ವಿಜಯಪುರ: ಒಂದೆಡೆ ಕೊರೊನಾ ಸಂದರ್ಭದಲ್ಲಿ ಕಾರ್ಯವೈಖರಿಗೆ ಅಭಿನಂದನಾ ಪತ್ರ.  ಮತ್ತೋಂದೆಡೆ ವಾರದೊಳಗೆ ಯಾವುದೇ ಜಾಗ ತೋರಿಸದೇ ಅಧಿಕಾರಿಯ ಎತ್ತಂಗಡಿ. ಇದು ವಿಜಯಪುರ ಕೆ ಕೆ ಆರ್ ಟಿ ಸಿ ಡಿಸಿ ನಾರಾಯಣಪ್ಪ ಕುರಬರ ಅವರ ಪರಿಸ್ಥಿತಿ. ಹೌದು. ಕೊರೊನಾ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ವಿಜಯಪುರ ವಿಭಾಗ ತೋರಿದ ಕಾರ್ಯ ನಿರ್ವಹಣೆಗೆ ನಿಗಮದ ಎಂ. ಡಿ. ಕೂರ್ಮರಾವ ಅಭಿನಂದನಾ ಪತ್ರವನ್ನು ಕಳುಹಿಸಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಕೊರೊನಾ ಲಾಕಡೌನ್ ಸಂದರ್ಭದಲ್ಲಿ ವಿಜಯಪುರ ವಿಭಾಗೀಯ ನಿಯಂತ್ರಣಾಧಿಕಾರಿಗಳು, ಅಧಿಕಾರಿಗಳು ಮತ್ತು […]

ಮಹಾ ಗಡಿಯಲ್ಲಿರುವ ಧೂಳಖೇಡ ಚೆಕ್ ಪೋಸ್ಟ್ ಗೆ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಭೇಟಿ, ಜಿ. ಪ. ಸಿಇಎ ಗೋವಿಂದ ರೆಡ್ಡಿ ಪರಿಸೀಲನೆ

ವಿಜಯಪುರ: ಕೊರೊನಾ 3ನೇ ಅಲೆ ತಡೆಗಟ್ಟಲು ಗಡಿ ಭಾಗದಲ್ಲಿ ಕೈಗೊಳ್ಳಲಾಗಿರುವ ತಪಾಸಣೆ ಕ್ರಮಗಳನ್ನು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಪರಿಶೀಲನೆ ನಡೆಸಿದ್ದಾರೆ. ರಾತ್ರಿ ವೇಳೆ ಇಂಡಿ ತಾಲೂಕಿ ಧೂಳಖೇಡ ಚೆಕ್ ಪೋಸ್ಟ್ ಗೆ ದಿಢೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ಹಾಗೂ ನಾನಾ ಇಲಾಖೆಗಳ ಹಿರಿಯ ಅಧಿಕಾರಿಗಳು, ಅಲ್ಲಿನ ಸಿಬ್ಬಂದಿಯ ಕಾರ್ಯವೈಖರಿ ಪರಿಶೀಲೆ ನಡೆಸಿದರು. ಚೆಕ್ ಪೋಸ್ಟ್ ನಲ್ಲಿ ಹೆಚ್ಚಿನ ಕಟ್ಟೆಚ್ಚರ […]

ಬಸವನ ಬಾಗೇವಾಡಿ ತಾಲೂಕಿನ ನಾನಾ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ಶಾಸಕ ಶಿವಾನಂದ ಪಾಟೀಲ, ಡಿಸಿ ಪಿ. ಸುನೀಲ ಕುಮಾರ

ವಿಜಯಪುರ: ವಿಜಯಪುರ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಮತ್ತು ಬಸವನ ಬಾಗೇವಾಡಿ ಕಾಂಗ್ರೆಸ್ ಶಾಸಕ ಶಿವಾನಂದ ಪಾಟೀಲ ಅವರು ಬಸವನ ಬಾಗೇವಾಡಿ ತಾಲೂಕಿನಲ್ಲಿ ಕೈಗೊಳ್ಳಲಾಗಿರುವ ನಾನಾ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು. ಮೊದಲಿಗೆ ಮನಗೂಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಸರಕಾರಿ ಪದವಿ ಪೂರ್ವ ಕಾಲೇಜು ಕಟ್ಟಡ ಕಾಮಗಾರಿಯನ್ನು ಪರಿಶೀಲಿಸಿದರು. ನಂತರ ಬಸವನ ಬಾಗೇವಾಡಿ ಪಟ್ಟಣದಲ್ಲಿರುವ ನಾನಾ ಕಾಮಗಾರಿಗಳನ್ನು ಪರಿಶೀಲನೆ ಮಾಡಿದರು. ರೂ. 4 ಕೋ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಪುರಸಭೆ ನೂತನ ಕಚೇರಿ ಕಟ್ಟಡ ಕಾಮಗಾರಿ ಪರಿಶೀಲಿಸಿದ ಅವರು, ಈ ಕಾಮಗಾರಿಯನ್ನು […]