ನವದೆಹಲಿಯಲ್ಲಿ ಪೊಲೀಸ್ ಸ್ಮಾರಕ, ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡಿ ಸಂದರ್ಶಕರ ಪುಸ್ತಕದಲ್ಲಿ ಅಭಿಪ್ರಾಯ ದಾಖಲಿಸಿದ ಸಿಎಂ ಬಸವರಾಜ ಬೊಮ್ಮಾಯಿ

ನವದೆಹಲಿ: ರಾಷ್ಟ್ರ ರಾಜಧಾನಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನವದೆಹಲಿಯಲ್ಲಿ ಪೊಲೀಸ್ ಸ್ಮಾರಕ ಮತ್ತು ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಸಂದರ್ಶಕರ ಪುಸ್ತಕದಲ್ಲಿ ತಮ್ಮ ಅಭಿಪ್ರಾಯ ದಾಖಲಿಸಿದ ಸಿಎಂ, ಸ್ಮಾರಕಕ್ಕೆ ಭೇಟಿ ನೀಡಿರುವುದು ಅವಿಸ್ಮರಣೀಯ ಘಳಿಗೆ. ಈ ಮ್ಯೂಸಿಯಂ ಪೊಲೀಸರ ಕರ್ತವ್ಯಪರತೆ ಹಾಗೂ ಸಮರ್ಪಣಾ ಭಾವದ ಕುರಿತು ಒಳನೋಟ ನೀಡುತ್ತದೆ. ಪೊಲೀಸರು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುತ್ತಿರುವ ಕಾರಣ ಪ್ರಜಾಪ್ರಭುತ್ವ ಯಶಸ್ವಿಯಾಗಿದೆ. ಈ ಭೇಟಿಯು ನನ್ನಲ್ಲಿ ಸಮರ್ಪಣಾ ಭಾವ ಮತ್ತು ಕರ್ತವ್ಯಪ್ರಜ್ಞೆಯನ್ನು ಜಾಗೃತಗೊಳಿಸಿದೆ. ದೇಶದ ಎಲ್ಲ ಪೊಲೀಸರಿಗೆ ನನ್ನ ನಮನಗಳು ಎಂದು ತಮ್ಮ ಅಭಿಪ್ರಾಯ ದಾಖಲಿಸಿದರು

Leave a Reply

ಹೊಸ ಪೋಸ್ಟ್‌