ಮೈಸೂರು ಗ್ಯಾಂಗ್ ರೇಪ್ ಆರೋಪ ಪ್ರಕರಣ- ಆದಷ್ಟು ಬೇಗ ಆರೋಪಿಗಳ ಬಂಧನ- ಸಿಎಂ

ಬೆಂಗಳೂರು: ಮೈಸೂರು ನಡೆದ ಗ್ಯಾಂಗ್ ರೇಪ್ ಆರೋಪ ಪ್ರಕರಣವನ್ನು ಬಹಳ ಗಂಭೀರವಾಗಿ ಪರಿಗಣಿಸಲಾಗಿದೆ. ಅತೀ ಶೀಘ್ರದಲ್ಲಿ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ತಮ್ಮ ತವರು ಜಿಲ್ಲೆ ಹಾವೇರಿಗೆ ಪ್ರಯಾಣ ಬೆಳೆಸುವ ಮುನ್ನ ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಮ್ಮ ಪೊಲೀಸರು ಈ ಪ್ರಕರಣವನ್ನು ಬಹಳ ಗಂಭೀರವಾಗಿ ತೆಗೆದುಕೊಂಡಿದ್ದಾರೆ. ಆರೋಪಿಗಳ ಪತ್ತೆಗೆ ಐದು ತಂಡಗಳನ್ನು ರಚಿಸಲಾಗಿದೆ. ಆ ತಂಡಗಳು ತಮ್ಮ ಕೆಲಸವನ್ನು ಮಾಡುತ್ತಿವೆ ಎಂದು ತಿಳಿಸಿದರು.

ಆರೋಪಿಗಳನ್ನು ಬಂಧಿಸುವಂತೆ ನಾನು ಮೊನ್ನೆಯೇ ಪೊಲೀಸರಿಗೆ ಸೂಚನೆ ನೀಡಿದ್ದೇನೆ. ನಮ್ಮ ಪೊಲೀಸರು ಬಹಳ ದಕ್ಷತೆಯಿಂದ ಇಂಥ ಪ್ರಕರಣಗಳನ್ನು ಭೇದಿಸಿ ಶಿಕ್ಷೆಗೊಳಪಡಿಸಿದ ಸಾಕಷ್ಟು ಉದಾಹರಣೆಗಳಿವೆ. ಈ ಪ್ರಕರಣದಲ್ಲಿಯೂ ಕೂಡ ಅಪರಾಧಿಗಳನ್ನು ಆದಷ್ಟು ಬೇಗ ಬಂಧಿಸುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಈ ಸಂದರ್ಭದಲ್ಲಿ ನೀರಾವರಿ ಸಚಿವ ಗೋವಿಂದ ಕಾರಜೋಳ ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌