ವಿಜಯಪುರದಲ್ಲಿ ಶಾಸಕ ಯತ್ನಾಳ ಅವರಿಂದ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ವಿಜಯಪುರ: ಶಾಸಕ ಬಸವಗೌಡ ಪಾಟೀಲ ಯತ್ನಾಳ ವಿಜಯಪುರ ನಗರದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ.

ವಾರ್ಡ್ ಸಂಖ್ಯೆ 21ರಲ್ಲಿ ಬರುವ ಸಿದ್ಧೇಶ್ವರ ಬಡಾವಣೆ, ಗಡಗಿ ಲೇಔಟ್ ದಲ್ಲಿ ಇರುವ ಶ್ರೀ ಜೈ ಹನುಮಾನ ದೇವಸ್ಥಾನ ಬಳಿ ಕಂಪೌಂಡ್ ಗೋಡೆ ಗಾರ್ಡನ್ ಮೇಸ್ ಅಳವಡಿಸುವ ಕಾಮಗಾರಿಗೆ ಯತ್ನಾಳ ಭೂಮಿ ಪೂಜೆ ನೆರವೇರಿಸಿದರು.

ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದಿಂದ ರೂ. 19.25 ಲಕ್ಷ ವೆಚ್ಚದ ಕಾಮಗಾರಿ ಇದಾಗಿದೆ. ಈ ಸಂದರ್ಭದಲ್ಲಿ ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ಸದಸ್ಯರಾದ ಲಕ್ಷ್ಮಣ ಜಾಧವ, ಆಯುಕ್ತ ವಿಜಕುಮಾರ ಆಜೂರ, ಮಹಾನಗರ ಪಾಲಿಕೆ ಮಾಜಿ ಸದಸ್ಯ ಪ್ರೇಮಾನಂದ ಬಿರಾದಾರ, ಮುಖಂಡರಾದ ಸಂತೋಷ ತಳಕೇರಿ, ರಾಜಶೇಖರ ಭಜಂತ್ರಿ ಸೇರಿದಂತೆ ನಾನಾ ಮುಖಂಡರು ಉಪಸ್ಥಿತರಿದ್ದರು.

ವಿಜಯಪುರದ ಮುಂಜಣ್ಣಿ ಗಲ್ಲಿ ಶ್ರೀ ಬಸವಣ್ಣನ ದೇವಸ್ಥಾನದ ಉದ್ಘಾಟನೆ ಕಾರ್ಯಕ್ರದಮಲ್ಲಿ ಪಾಲ್ಗೋಂಡ ಯತ್ನಾಳ.

ನಂತರ ಮುಂಜಣ್ಣಿ ಗಲ್ಲಿ ಶ್ರೀ ಬಸವಣ್ಣನ ದೇವಸ್ಥಾನದ ಉದ್ಘಾಟನೆ ಹಾಗೂ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಯತ್ನಾಳ ಪಾಲ್ಗೋಂಡರು. ಈ ದೇವಸ್ಥಾನ ನಿರ್ಮಾಣಕ್ಕೆ ಶಾಸಕರ ನಿಧಿಯಿಂದ ರೂ. 5 ಲಕ್ಷ ಮತ್ತು ವೈಯಕ್ತಿಕವಾಗಿ ರೂ. 2 ಲಕ್ಷ ಅನುದಾನವನ್ನು ಯತ್ನಾಳ ನೀಡಿದ್ದಾರೆ.

ಈ ಸಂದರ್ಭದಲ್ಲಿ ದೇವಸ್ಥಾನ ಆಡಳಿತ ಮಂಡಳಿ ಸದಸ್ಯರು, ಪದಾಧಿಕಾರಿಗಳು, ನಾನಾ ಮುಖಂಡರು ಉಪಸ್ಥಿತರಿದ್ದರು.

 

Leave a Reply

ಹೊಸ ಪೋಸ್ಟ್‌