ವಿಜಯಪುರ: ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಹಾಗೂ ವಿದ್ಯಾರ್ಥಿಗಳ ಪಾತ್ರ ಬಹುಮುಖ್ಯವಾಗಿದೆ ಎಂದು ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಸಂಶೋಧನ ಕೇಂದ್ರದ ಕಾರ್ಯದರ್ಶಿ ಡಾ. ಎಂ. ಎಸ್. ಮಧಬಾವಿ ಹೇಳಿದ್ದಾರೆ.
ವಿಜಯಪುರ ನಗರದಲ್ಲಿ ಪ್ರತಿಷ್ಠಿತ ಬಿ ಎಲ್ ಡಿ ಇ ಸಂಸ್ಥೆಯ ಶ್ರೀ. ಸಂಗನ ಬಸವ ಕಾಲೇಜ್ ಆಫ್ ಫಾರ್ಮಸಿ ಮತ್ತು ಸಂಶೋಧನೆ ಕೇಂದ್ರದಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಮಾತನಾಡಿದರು.
![](https://basavanadu.com/wp-content/uploads/2021/09/IMG-20210901-WA0034-300x169.jpg)
ಸ್ವಾತಂತ್ರ್ಯ ಚಳವಳಿಯ ಇತಿಹಾಸವನ್ನು ಘಟನೆಗಳನ್ನು ಶಿಕ್ಷಕರು ಮಕ್ಕಳಿಗೆ ಪಾತ್ರಗಳ ಮೂಲಕ ಅವರ ಮನವರಿಕೆ ಮಾಡಿ ಕೊಡಬೇಕು. ಅಲ್ಲದೇ ಸ್ವಾತಂತ್ರ್ಯ ಚಳುವಳಿಯ ಸಮಯದಲ್ಲಿ ನಡೆದ ಪ್ರಮುಖ ಘಟನೆಗಳನ್ನು ಓದಿದರೆ ವ್ಯಕ್ತಿತ್ವದ ಬೆಳೆವಣಿಗೆಗೆ ಸಹಕಾರಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಡಾ. ಎಂ. ಎಸ್. ಮಾಧಬಾವಿ ಕನ್ನಡದಲ್ಲಿ ಹಾಗೂ ಸಂಸ್ಥೆಯ ಕಾನೂನು ಸಲಹೆಗಾರ ಸುರೇಶ ಹಕ್ಕಿ ಇಂಗ್ಲಿಷ್ನಲ್ಲಿ ಪ್ರತಿಜ್ಞೆಯನ್ನು ಬೋಧಿಸಿದರು.
![](https://basavanadu.com/wp-content/uploads/2021/09/IMG-20210901-WA0036-300x174.jpg)
ಕಾಲೇಜು ವತಿಯಿಂದ 75 ನಾನಾ ಕಾರ್ಯಕ್ರಮಗಳ ತಾತ್ಕಾಲಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಯಿತು.
ಈ ಸಂದರ್ಭದಲ್ಲಿ ಬಿಎಲ್ಡಿಇ ಸಂಸ್ಥೆಯ ಹಣಕಾಸು ಅಧಿಕಾರಿ ದೇವೆಂದ್ರ ಅಗರವಾಲ, ಪ್ರಾಚಾರ್ಯ ಡಾ. ಆರ್. ಬಿ. ಕೊಟ್ನಾಳ, ಎಂ. ಎಸ್. ಬಿರಾದಾರ, ಕಾಲೇಜು ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.