ನಿರ್ಬಂಧ ಹೇರದೆ ಲಸಿಕೆ ಹಾಕಲು ಜಿಲ್ಲಾಧಿಕಾರಿಗಳಿಗೆ ರಾಜ್ಯ ಮುಖ್ಯ ಕಾರ್ಯದರ್ಶಿ ಸೂಚನೆ

ಬೆಂಗಳೂರು: ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಅಭಿಯಾನವನ್ನು ಕೈಗೊಂಡು ಲಸಿಕೆ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸುವಂತೆ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಆದೇಶ ನೀಡಿದ್ದಾರೆ.

ಕೋವಿಡ್ ಲಸಿಕೆ ಪಡೆಯದ ಸಾರ್ವಜನಿಕರಿಗೆ ಪಿಂಚಣಿ ಮತ್ತು ಪಡಿತರವನ್ನು ನೀಡುವುದಿಲ್ಲವೆಂಬ ವರದಿಗಳು ಪತ್ರಿಕೆಗಳಲ್ಲಿ ವರದಿಯಾಗಿದ್ದು ಸರಕಾರದ ಗಮನಕ್ಕೆ ಬಂದಿದೆ. ಪಿಂಚಣಿ ಹಾಗೂ ಪಡಿತರವನ್ನು ಯಾವುದೇ ಕಾರ್ಯಕ್ರಮ ಮತ್ತು ಯೋಜನೆಗಳಿಗೆ ಜೋಡಿಸಿರುವುದಿಲ್ಲ. ಲಸಿಕಾ ಕಾರ್ಯವನ್ನು ತಪ್ಪಾಗಿ ಜೋಡಿಸಿದ್ದಲ್ಲಿ ಕೂಡಲೇ ಕೈಬಿಡಬೇಕು ಎಂದು ಅವರು ಇಂದು ಹೊರಡಿಸಿರುವ ಸುತ್ತೋಲೆಯಲ್ಲಿ ಸೂಚಿನೆ ನೀಡಿದ್ದಾರೆ.

Leave a Reply

ಹೊಸ ಪೋಸ್ಟ್‌