ಭರ್ತಿಯಾದ ಯಕ್ಕುಂಡಿ ಕೆರೆ ಗಂಗಾಪೂಜೆ ಸಲ್ಲಿಸಿ ಬಾಗೀನ ಅರ್ಪಿಸಿದ ಶಾಸಕ ಎಂ. ಬಿ. ಪಾಟೀಲ

ವಿಜಯಪುರ: ವಿಜಯಪುರ ಬಬಲೇಶ್ವರ ತಾಲೂಕಿನ ಯಕ್ಕುಂಡಿ ಕೆರೆ ಸಂಪೂರ್ಣ ಭರ್ತಿಯಾಗಿದ್ದು, ಮಾಜಿ ಸಚಿವ, ಶಾಸಕ ಎಂ. ಬಿ. ಪಾಟೀಲ ಗಂಗಾಪೂಜೆ ಸಲ್ಲಿಸಿ, ಬಾಗೀನ ಅರ್ಪಿಸಿದರು.

ಭರ್ತಿಯಾಗಿರುವ ಯಕ್ಕುಂಡಿ ಕೆರೆಗೆ ಮಾಜಿ ಸಚಿವ, ಶಾಸಕ ಎಂ. ಬಿ. ಪಾಟೀಲ ಗಂಗಾಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.

ಶಾಸಕ ಎಂ. ಬಿ. ಪಾಟೀಲ ಅವರು ಜಲಸಂಪನ್ಮೂಲ ಸಚಿವರಾಗಿದ್ದಾಗ ಜಾರಿಗೆ ತಂದ ಕೆರೆಗೆ ನೀರು ತುಂಬಿಸುವ ಯೋಜನೆಯಡಿ ಬಬಲೇಶ್ವರ ತಾಲೂಕಿನ ಯಕ್ಕುಂಡಿ ಗ್ರಾಮದ ಕೆರೆಗೆ ಕೃಷ್ಣಾ ನದಿಯಿಂದ ಮುಳವಾಡ ಏತ ನೀರಾವರಿ ಯೋಜನೆಯ ಮಲಘಾಣ ಪಶ್ಚಿಮ ಕಾಲುವೆಯಿಂದ ನೀರು ಹರಿಸಲಾಗಿದೆ. ಇದರಿಂದಾಗಿ ಈಗ ಯಕ್ಕುಂಡಿ ಹಾಗೂ ಸುತ್ತಲಿನ ಪ್ರದೇಶ ಹಚ್ಚ-ಹಸಿರಿನಿಂದ ಕಂಗೊಳಿಸುತ್ತಿದೆ. ಇದು ರೈತರ ಮೊಗದಲ್ಲಿ ಹರ್ಷ ಮೂಡಲು ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಗಂಗಾಪೂಜೆ ಮತ್ತು ಬಾಗೀನ ಅರ್ಪಣೆ ಕಾರ್ಯಕ್ರಮ ಆಯೋಜಿಸಿದ್ದರು.

ಈ ಸಂದರ್ಭದಲ್ಲಿ ನಂದಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಶಶಿಕಾಂತಗೌಡ ಪಾಟೀಲ, ಚನ್ನಪ್ಪ ಕೊಪ್ಪದ, ಧರ್ಮಣ್ಣ ಬೀಳೂರ, ಅಪ್ಪುಗೌಡ ಪಾಟೀಲ ಶೇಗುಣಶಿ, ರಮೇಶ ಬಡ್ರಿ ಮುಂತಾದವರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌