ಶ್ರೀ ಗಜಾನನ ಉತ್ಸವ ಮಹಾಮಂಡಳದ ಆಶ್ರಯದಲ್ಲಿ ಕೊರೊನಾ ಲಸಿಕೆ ಅಭಿಯಾನ

ವಿಜಯಪುರ: ವಿಜಯಪುರ ನಗರ ಛತ್ರಪತಿ ಶಿವಾಜಿ ಸರ್ಕಲ್ ನಲ್ಲಿ ಪ್ರತಿಷ್ಠಾಪಿಸಲಾಗಿರುವ ಶ್ರೀ ಗಜಾನನ ಉತ್ಸವ ಮಹಾಮಂಡಳದಲ್ಲಿ ಕೊರೊನಾ ಲಸಿಕೆ ಅಭಿಯಾನ ನಡೆಯಿತು.

ಗಣೇಶೋತ್ಸವಕ್ಕೆ ಷರತ್ತು ಬದ್ಧ ಅನುಮತಿ ನೀಡಿರುವ ರಾಜ್ಯ ಸರಕಾರ ಸಾರ್ವಜನಿಕ ಗಣೇಶ ಉತ್ಸವ ಸ್ಥಳಗಳಲ್ಲಿ ಕೊರೊನಾ ಲಸಿಕೆ ಅಭಿಯಾನವನ್ನೂ ನಡೆಸುವಂತೆ ಸೂಚನೆ ನೀಡಿದೆ. ಅದರಂತೆ ವಿಜಯಪುರದ ಶ್ರೀ ಗಜಾನನ ಉತ್ಸವ ಮಹಾಮಂಡಳದ ಸ್ಥಳದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಿಬ್ಬಂದಿ ಆಗಮಿಸಿ ಕೊರೊನಾ ಲಸಿಕೆ ಅಭಿಯಾನ ಕೈಗೊಂಡರು. ಈ ಸಂದರ್ಭದಲ್ಲಿ 60 ಜನರಿಗೆ ಕೊರೊನಾ ಲಸಿಕೆಯೆನ್ನು ಹಾಕಲಾಯಿತು.

ಈ ಸಂದರ್ಭದಲ್ಲಿ ಶ್ರೀ ಗಜಾನನ ಉತ್ಸವ ಮಹಾಮಂಡಳದ ಸಂಸ್ಥಾಪಕ ಅಧ್ಯಕ್ಷ ಮತ್ತು ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ಶ್ರೀ ಗಜಾನನ ಉತ್ಸವ ಮಹಾಮಂಡಳ ಅಧ್ಯಕ್ಷ ಸತೀಶ ಪಾಟೀಲ, ಪದಾಧಿಕಾರಿಗಳಾದ ಪ್ರಭಾಕರ ಭೋಸಲೆ, ಕಲ್ಲುಗೌಡ ಹರನಾಳ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಭೀಮಾಶಂಕರ ಹದನೂರಸ, ಸಿದ್ದು ಮಲ್ಲಿಕಾರ್ಜುನಮಠ ಮತ್ತು ಇತರರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌