ಬಸವ ನಾಡಿನಲ್ಲಿ 7 ದಿನಗಳ ಕಾಲ ಗಣೇಶೋತ್ಸವಕ್ಕೆ ಅವಕಾಶ- ಡಿಸಿ ಪಿ. ಸುನೀಲ ಕುಮಾರ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಶ್ರೀ ಗಣೇಶೋತ್ಸವವನ್ನು ಗರಿಷ್ಠ ಏಳು ದಿನಗಳವರೆಗೆ ಕೋವಿಡ್ ಮಾರ್ಗಸೂಚಿಗಳೊಂದಿಗೆ ಆಚರಿಸಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾದಿಕಾರಿ ಪಿ. ಸುನೀಲ ಕುಮಾರ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಈ ಹಿಂದೆ ಗಣೇಶ ಹಬ್ಬದ ಆಚರಣೆಯನ್ನು ಗರಿಷ್ಠ ಐದು ದಿನಗಳ ವರೆಗೆ ಆಚರಿಸಲು ಆದೇಶ ಹೊರಡಿಸಲಾಗಿತ್ತು. ಈ ಮಧ್ಯೆ, ಗಣೇಶೋತ್ಸವ ಆಚರಣೆ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಗಣೇಶ ಹಬ್ಬದ ಆಚರಣೆಯನ್ನು ಐದು ದಿನಗಳ ಬದಲಾಗಿ ಏಳು ದಿನ ಆಚರಿಸಲು ಅನುಮತಿ […]

ಗುಜರಾತಿಗೆ ತೆರಳಿ ನೂತನ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರಿಗೆ ಶುಭ ಕೋರಿದ ಸಿಎಂ ಬಸವರಾಜ ಬೊಮ್ಮಾಯಿ

ಗಾಂಧಿನಗರ(ಗುಜರಾತ): ಗುಜರಾತಿನ 17ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಭೂಪೇಂದ್ರ ಪಟೇಲ ಅವರಿಗೆ‌ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಭ ಕೋರಿದ್ದಾರೆ. ಗಾಂಧಿನಗರದ ರಾಜಭವನದಲ್ಲಿ ನೂತನ ಸಿಎಂ ಪಟೇಲ್ ಅವರನ್ನು ಮಧ್ಯಾಹ್ನ ಭೇಟಿ ಮಾಡಿದರು. ವಿಶೇಷ ವಿಮಾನದ ಮೂಲಕ ಗಾಂಧಿನಗರಕ್ಕೆ ತೆರಳಿದ ಸಿಎಂ ಬೊಮ್ಮಾಯಿ, ಹೊಸ ಜವಾಬ್ದಾರಿಯನ್ನು ಸಮರ್ಥವಾಗಿ ಎದುರಿಸುವಂತೆ ಶುಭ ಕೋರಿದರು.   ಬೆಂಗಳೂರಿನಿಂದ ಮುಖ್ಯಮಂತ್ರಿಗಳೊಂದಿಗೆ ತೆರಳಿದ್ದ ಸಚಿವರಾದ ಆರ್. ಅಶೋಕ, ಮುರುಗೇಶ ನಿರಾಣಿ, ಡಾ. ಕೆ. ಸುಧಾಕರ ಅವರೂ ಕೂಡ ನೂತನ ಮುಖ್ಯಮಂತ್ರಿ ಭೂಪೇಂದ್ರ ಪಟೇಲ […]

ಪಿಓಪಿ, ಮಣ್ಣಿನ ಗಣೇಶ ಮೂರ್ತಿಗಳ ಕಡೆಗಣನೆ- ಸರಕಾರಿ ನಿಯಮಗಳ ಪಾಲನೆ- ಮಹಾಮಂಡಳದಿಂದ ಗಣೇಶೋತ್ಸವದ ವಿಶೇಷ

ವಿಜಯಪುರ: ಸಾರ್ವಜನಿಕ ಗಣೇಶೋತ್ಸವಗಳಿಗೆ ಅನುಮತಿ ವಿಚಾರದಲ್ಲಿ ಸರಕಾರದ ಮಟ್ಟದಲ್ಲಿ ನಡೆದ ವಿದ್ಯಮಾನಗಳು ಎಲ್ಲರಿಗೂ ಗೊತ್ತಿರುವ ವಿಚಾರ. ಇದರ ಜೊತೆ ಪಿಓಪಿ ಗಣೇಶ ನಿಷೇಧ ಬೃಹದಾಕಾರದ ಮೂರ್ತಿಗಳ ಪ್ರತಿಷ್ಠಾಪನೆಯ ಯುವಕರ ಕನಸಿಗೆ ತಣ್ಣೀರೆರಚಿತ್ತು. ಆದರೆ, ಸರಕಾರದ ಮಾರ್ಗಸೂಚಿ ಪಾಲಿಸುವುದರ ಜೊತೆಗೆ ಬಸವ ನಾಡಿನ ಶ್ರೀ ಗಜಾನನ ಮಹಾಮಂಡಳ ಯುವಕರು ಪಿಓಪಿ ಬೃಹತ್ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಬದಲಿಗೆ ಪರ್ಯಾಯ ಮಾರ್ಗ ಕಂಡುಕೊಂಡು ಹೊಸ ಟ್ರೆಂಡ್ ಹುಟ್ಟು ಹಾಕಿದ್ದಾರೆ. ಸರಕಾರ ಪಿಓಪಿ ಗಣೇಶ ಮೂರ್ತಿ ಬ್ಯಾನ್ ಮಾಡಿದ್ರನೂ ಕೂಡಾ ಜನರ […]

ಗುಜರಾತ ನೂತನ ಸಿಎಂ ಪ್ರಮಾಣ ವಚನ ಕಾರ್ಯಕ್ರಮಕ್ಕೆ ತೆರಳಿದ ಬೊಮ್ಮಾಯಿ

ಬೆಂಗಳೂರು: ಗುಜರಾತ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಅವರು ಮಧ್ಯಾಹ್ನ ಪ್ರಮಾಣ ವಚನ ಸ್ವೀಕಾರಿಸಲಿದ್ದಾರೆ. ‌ ಈ ಸಮಾರಂಭ ಗಾಂಧಿನಗರದಲ್ಲಿ ನಡೆಯಲಿದ್ದು,‌ ಈ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶೇಷ ವಿಮಾನದ ಮೂಲಕ ಅಹ್ಮದಾಬಾದಿಗೆ ತೆರಳಿದರು. ಈ ಸಂದರ್ಭದಲ್ಲಿ ಸಚಿವರಾದ ಆರ್. ಅಶೋಕ್, ಮುರುಗೇಶ ನಿರಾಣಿ, ಡಾ. ಸುಧಾಕರ ಕೂಡ ಸಿಎಂ ಜತೆ ತೆರಳಿದರು.

ಬೆಳಗಾವಿ ಬಿಜೆಪಿ ಕಾರ್ಪೊರೇಟರ್ ಗಳಿಂದ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ

ಬೆಂಗಳೂರು: ಬೆಳಗಾವಿ ಮಹಾನಗರ ಪಾಲಿಕೆಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಜಯ ಗಳಿಸಿದ ಬಿಜೆಪಿಯ 35 ಜನ ನೂತನ ಕಾರ್ಪೊರೇಟರ್ ಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿಗೆ ಆಗಮಿಸಿರುವ ನೂತನ ಸದಸ್ಯರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ನೂತನ ಕಾರ್ಪೊರೇಟರ್ ಗಳನ್ನು ಸಿಎಂ ಈ ಸಂದರ್ಭದಲ್ಲಿ ಅಭಿನಂದಿಸಿದರರು. ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಇದೇ ಮೊದಲ ಬಾರಿ ಬಿಜೆಪಿ ಅಧಿಕಾರದ ಗದ್ದುಗೆಗೆ ಏರಿರುವ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವದ್ದಾಗಿದೆ. ಈ […]

ಇಂದು ಅಹ್ಮದಾಬಾದಿಗೆ ಸಿಎಂ ಬೊಮ್ಮಾಯಿ- ಗುಜರಾತ ನೂತನ ಸಿಎಂ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಹ್ಮದಾಬಾದಿಗೆ ತೆರಳುತ್ತಿದ್ದ, ಗುಜರಾತ ನೂತನ ಸಿಎಂ ಭೂಪೇಂದ್ರ ಪಟೇಲ ಅವರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಪಾಲ್ಗೋಳ್ಳಲಿದ್ದಾರೆ. ಮಧ್ಯಾಹ್ನ 12ಕ್ಕೆ ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ತೆರಳಲಿರುವ ಸಿಎಂ ಮ. 1.50ಕ್ಕೆ ಅಹ್ಮದಾಬಾದ ತಲುಪಲಿದ್ದು, ಮ. 2.20ಕ್ಕೆ ಗಾಂಧಿನಗರದಲ್ಲಿರುವ ರಾಜಭವನದಲ್ಲಿ ನಡೆಯಲಿರುವ ಗುಜರಾತ ನೂತನ ಸಿಎಂ ಭೂಪೇಂದ್ರ ಪಟೇಲ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಪಾಲ್ಗೋಳ್ಳಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ ಶಾ ಸೇರಿದಂತೆ ನಾನಾ ರಾಜ್ಯಗಳ ಬಿಜೆಪಿ ಮುಖ್ಯಮಂತ್ರಿಗಳು ಪಾಲ್ಗೋಳ್ಳುವ ನಿರೀಕ್ಷೆಯಿದೆ. […]