ಇಂದು ಅಹ್ಮದಾಬಾದಿಗೆ ಸಿಎಂ ಬೊಮ್ಮಾಯಿ- ಗುಜರಾತ ನೂತನ ಸಿಎಂ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಹ್ಮದಾಬಾದಿಗೆ ತೆರಳುತ್ತಿದ್ದ, ಗುಜರಾತ ನೂತನ ಸಿಎಂ ಭೂಪೇಂದ್ರ ಪಟೇಲ ಅವರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಪಾಲ್ಗೋಳ್ಳಲಿದ್ದಾರೆ.

ಮಧ್ಯಾಹ್ನ 12ಕ್ಕೆ ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ತೆರಳಲಿರುವ ಸಿಎಂ ಮ. 1.50ಕ್ಕೆ ಅಹ್ಮದಾಬಾದ ತಲುಪಲಿದ್ದು, ಮ. 2.20ಕ್ಕೆ ಗಾಂಧಿನಗರದಲ್ಲಿರುವ ರಾಜಭವನದಲ್ಲಿ ನಡೆಯಲಿರುವ ಗುಜರಾತ ನೂತನ ಸಿಎಂ ಭೂಪೇಂದ್ರ ಪಟೇಲ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಪಾಲ್ಗೋಳ್ಳಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ ಶಾ ಸೇರಿದಂತೆ ನಾನಾ ರಾಜ್ಯಗಳ ಬಿಜೆಪಿ ಮುಖ್ಯಮಂತ್ರಿಗಳು ಪಾಲ್ಗೋಳ್ಳುವ ನಿರೀಕ್ಷೆಯಿದೆ.

ನಂತರ ಮ. 3.30ಕ್ಕೆ ಅಹ್ಮದಾಬಾದಿನಿಂದ ಹೊರಟು ಸಂ. 5.30ಕ್ಕೆ ಬೆಂಗಳೂರು ತಲುಪಲಿದ್ದಾರೆ.

Leave a Reply

ಹೊಸ ಪೋಸ್ಟ್‌