ಬೆಳಗಾವಿ ಬಿಜೆಪಿ ಕಾರ್ಪೊರೇಟರ್ ಗಳಿಂದ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ

ಬೆಂಗಳೂರು: ಬೆಳಗಾವಿ ಮಹಾನಗರ ಪಾಲಿಕೆಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಜಯ ಗಳಿಸಿದ ಬಿಜೆಪಿಯ 35 ಜನ ನೂತನ ಕಾರ್ಪೊರೇಟರ್ ಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದಾರೆ.

ಬೆಂಗಳೂರಿಗೆ ಆಗಮಿಸಿರುವ ನೂತನ ಸದಸ್ಯರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ನೂತನ ಕಾರ್ಪೊರೇಟರ್ ಗಳನ್ನು ಸಿಎಂ ಈ ಸಂದರ್ಭದಲ್ಲಿ ಅಭಿನಂದಿಸಿದರರು.

ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಇದೇ ಮೊದಲ ಬಾರಿ ಬಿಜೆಪಿ ಅಧಿಕಾರದ ಗದ್ದುಗೆಗೆ ಏರಿರುವ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವದ್ದಾಗಿದೆ.

ಈ ಸಂದರ್ಭದಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಲೋಕೋಪಯೋಗಿ ಸಚಿವ ಸಿ.
‌ಸಿ. ಪಾಟೀಲ, ಕೃಷಿ ಸಚಿವ ಬಿ. ಸಿ. ಪಾಟೀಲ, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ, ಶಾಸಕ ಅಭಯ ಪಾಟೀಲ, ಅನಿಲ ಬೆನಕೆ, ವಿಧಾನ ಪರಿಷತ ಸದಸ್ಯ ಮಹಾಂತೇಶ ಕವಟಗಿಮಠ ಮತ್ತು ಇತರರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌