ಭೀಮಾ ತೀರದ ಉಮರಾಣಿ ಬ್ರಿಡ್ಜ್ ಕಂ‌ ಬ್ಯಾರೇಜ್ ಕಾಮಗಾರಿ ವೀಕ್ಷಿಸಿದ ಸಂಸದ ರಮೇಶ ಜಿಗಜಿಣಗಿ

ವಿಜಯಪುರ: ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಭೀಮಾ ತೀರದ ಉಮರಾಣಿ ಬಳಿ ನಿರ್ಮಿಸಲಾಗುತ್ತಿರುವ ಬ್ರಿಡ್ಜ್ ಬ್ಯಾರೇಜ್ ಕಾಮಗಾರಿಯನ್ನು ಬಿಜೆಪಿ ಸಂಸದ ರಮೇಶ ಜಿಗಜಿಣಗಿ ವೀಕ್ಷಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಕಾಮಗಾರಿಯಿಂದ ಈ ಭಾಗದ ಜನರಿಗೆ ಬಹಳ ಅನುಕೂಲವಾಗಲಿದೆ ಎಂದು ತಿಳಿಸಿದರು.

ರೂ. 110 ಕೋ. ವೆಚ್ಚದಲ್ಲಿ ಭೀಮಾ ನದಿಗೆ ನಿರ್ಮಿಸಲಾಗುತ್ತಿರಿವ ಈ ಬ್ರಿಜ್ ಕಾಂ ಬ್ಯಾರೇಜ್ ಕಾಮಗಾರಿಯಿಂದ ಕರ್ನಾಟಕ ಮತ್ತು ಮಹಾರಾಷ್ಟ್ರಗಳ ಗಡಿ ಭಾಗದ ಜನರಿಗೆ ಅದರಲ್ಲೂ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ತಿಳಿಸಿದರು.

ಈ ಕಾಮಗಾರಿಗೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮತ್ತಿ ತಾವು ಮೂರು ತಿಂಗಳ ಹಿಂದೆ ಚಾಲನೆ ನೀಡಿದ್ದು ಕೆಲಸ ಪ್ರಗತಿಯಲ್ಲಿದೆ. ಆದಷ್ಟು ಬೇಗನೆ ಇದನ್ನು ಪೂರ್ಣಗೊಳಿಸಲಾಗುವದು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮಸ್ಥರು ಹಾಗೂ ಮುಖಂಡರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌