ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಅಂಗವಾಗಿ ಶಾಲಾವರಣ ಸ್ವಚ್ಛಗೊಳಿಸಿದ ಉಕ್ಕಲಿ ಯುವಕರು

ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಯುವಕರು ಶಾಲೆ ಆವರಣವನ್ನು ಸ್ವಚ್ಛಗೊಳಿಸುವ ಮೂಲಕ ವಿನೂತನವಾಗಿ ಪ್ರಧಾನಿಯ ಜನ್ಮದಿನ ಆಚರಿಸಿದ್ದಾರೆ. ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದಲ್ಲಿ ಗ್ರಾಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಸರಕಾರಿ ಕನ್ನಡ ಗಂಡು ಹಾಗೂ ಹೆಣ್ಣು ಮಕ್ಕಳ ಶಾಲೆ ಮತ್ತು ಉರ್ದು ಶಾಲೆಗಳ ಆವರಣವನ್ನು ಯುವಕರು ಕಸಗೂಡಿಸಿ ಸ್ವಚ್ಚಗೊಳಿಸಿದರು. ಈ ಸ್ವಚ್ಛತಾ ಅಭಿಯಾನದಲ್ಲಿ ಉಕ್ಕಲಿ ಗ್ರಾಮದ ಯುವಕರಾದ ಸಿದ್ದರಾಮ ಕಾಖಂಡಕಿ, ಪ್ರಶಾಂತ ಬಡಿಗೇರ, […]

ಗಲ್ಫ್ ರಾಷ್ಟ್ರಗಳಲ್ಲಿ ಕನ್ನಡ ಉಳಿಸಲು ಶ್ರಮಿಸುತ್ತಿರುವ ಮೊಹಮ್ಮದ್ ಮೀರಾನ್ ಸಾಹೇಬ್ ಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮೊಹಮ್ಮದ್ ಮೀರಾನ್ ಸಾಹೇಬ್ ಗಲ್ಫ್ ರಾಷ್ಟ್ರಗಳಲ್ಲಿ ಕನ್ನಡ ಉಳಿಸಿ ಬೆಳೆಸುವ ಮೂಲಕ ಕನ್ನಡ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಇವರಿಗೆ 2020ರಲ್ಲಿ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಮಾಡಲಾಗಿತ್ತು. ಆದರೆ, ಪ್ರಧಾನ ಮಾಡಲು ಸಾಧ್ಯವಾಗಿರಲಿಲ್ಲ. ಬೆಂಗಳೂರಿಗೆ ಆಗಮಿಸಿದ ಮೊಹಮ್ಮದ್ ಮೀರಾನ್ ಸಾಹೇಬ್ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈಗ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. ಈ ಸಂದರ್ಭದಲ್ಲಿ ಶಿವಮೊಗ್ಗ ಬಿಜೆಪಿ ಸಂಸದ ಬಿ. ವೈ. ರಾಘವೇಂದ್ರ ಸೇರಿದಂತೆ ನಾನಾ ಮುಖಂಡರು ಉಪಸ್ಥಿತರಿದ್ದರು.

ಮುಳುಗಡೆ ಜಮೀನು ಬೆಲೆ ಪರಿಷ್ಕರಣೆಗೆ ಆಗ್ರಹ- ಶಾಸಕ ಎಂ. ಬಿ. ಪಾಟೀಲ ನೇತೃತ್ವದಲ್ಲಿ ಕಂದಾಯ ಸಚಿವರನ್ನು ಭೇಟಿ ಮಾಡಿದ ಕೃಷ್ಣಾ ತೀರದ ರೈತರು

ಬೆಂಗಳೂರು: ಆಲಮಟ್ಟಿ ಜಲಾಷಯವನ್ನು 524.256 ಮೀ. ಎತ್ತರಿಸಿದಾಗ ಮುಳುಗಡೆಯಾಗುವ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ನಾನಾ ಗ್ರಾಮಗಳ ಜಮೀನಿಗೆ ನಿಗದಿ ಪಡಿಸಲಾಗಿರುವ ಪರಿಹಾರದ ಮಾರ್ಗಸೂಚಿ ಬೆಲೆಯನ್ನು ಪರಿಷ್ಕರಿಸುವಂತೆ ಆಗ್ರಹಿಸಿ ಈ ಭಾಗದ ರೈತರು ಮಾಜಿ ಸಚಿವ ಮತ್ತು ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ ಅವರ ನೇತೃತ್ವದಲ್ಲಿ ರೈತರ ನಿಯೋಗ ಕಂದಾಯ ಸಚಿವ ಆರ್. ಅಶೋಕ ಅವರನ್ನು ಭೇಟಿ ಮಾಡಿ ಆಗ್ರಹಿಸಿದರು. ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಆಲಮಟ್ಟಿ ಆಣೆಕಟ್ಟನ್ನು 524.256 ಮೀ. ಎತ್ತರಿಸುವುದರಿಂದ ಅಂದಾಜು […]