ಲೋಕಾಯುಕ್ತ ಅಧಿಕಾರಿಗಳಿಂದ ಶಾಲಾ ಕಾಲೇಜುಗಳಲ್ಲಿ ಕೋವಿಡ್-19 ಎಸ್ಓಪಿ ಪಾಲನೆ ಪರಿಶೀಲನೆ

ವಿಜಯಪುರ: ಸರಕಾರ ಪ್ರಸಕ್ತ ವರ್ಷದ ಶಾಲೆ-ಕಾಲೇಜುಗಳನ್ನು ಆರಂಬಿಸಲು ನಿರ್ದೇಶಿಸಿರುವ ಹಿನ್ನೆಲೆಯಲ್ಲಿ ಕೊರೊನಾ ನಿಯಮಾವಳಿ ಪಾಲನೆ ಅಂದರೆ ಎಸ್ಓಪಿ ಪಾಲನೆ ಕುರಿತು ವಿಜಯಪುರ ಲೋಕಾಯುಕ್ತ ಡಿವೈಎಸ್ಪಿ ಬಸವರಾಜ ಯಲಿಗಾರ ಮತ್ತು ಲೋಕಾಯುಕ್ತ ಸಿಪಿಐ ಆನಂದ ಠಕ್ಕನ್ನವರ ನಾನಾ ಶಾಲೆ-ಕಾಲೇಜುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಲೋಕಾಯುಕ್ತರ ಆದೇಶದ ಹಿನ್ನೆಲೆಯಲ್ಲಿ ಈ ಭೇಟಿ ನೀಡಿದ ಲೋಕಾಯುಕ್ತ ಅಧಿಕಾರಿಗಳು ಸರಕಾರಿ ಶಾಲೆ- ಕಾಲೇಜುಗಳಲ್ಲಿ ಸರಕಾರ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ನೀಡಿರುವ ಮಾರ್ಗಸೂಚಿಗಳನ್ನು ಪಾಲನೆಯಾಗುತ್ತಿರುವ ಕುರಿತು ಪರಿಶೀಲನೆ ನಡೆಸಿದರು. ಅಲ್ಲದೇ, ಲೋಪದೋಷವಾದರೆ […]

ವಿಶ್ವ ಹೃದಯ ದಿನ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಜ್ಞೆ- ಏನು ಗೊತ್ತಾ?

ಬೆಂಗಳೂರು: ವಿಶ್ವ ಹೃದಯ ದಿನದಂದು‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಜ್ಞೆಯೊಂದನ್ನು ಕೈಗೊಂಡಿದ್ದಾರೆ. ಆ ಪ್ರತಿಜ್ಞೆ ಏನು ಎಂದು ತಿಳಿಯುವ ಮುಂಚೆ ಬೆಂಗಳೂರಿನಲ್ಲಿ ನಡೆದ ವಿಶ್ವ ಹೃದಯ ದಿನದ ಕಾರ್ಯಕ್ರಮದ ಮಾಹಿತಿ ಇಲ್ಲಿದೆ ನೋಡಿ.   ಶಕ್ತಿಯುತ ದೇಹ ಮತ್ತು ಮನಸ್ಸು ಆರೋಗ್ಯಕರ ಜೀವನಕ್ಕೆ ಸಹಕಾರಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ವಿಶ್ವ ಹೃದಯ ದಿನಾಚರಣೆ ಅಂಗವಾಗಿ ಬೆಂಗಳೂರಿನಲ್ಲಿ ವಿಧಾನಸೌಧದಿಂದ ಕಂಠೀರವ ಕ್ರೀಡಾಂಗಣದವರೆಗೆ ಆಯೋಜಿಸಿದ್ದ *ಹೃದಯದಿಂದ ಬಾಂಧವ್ಯ ಬೆಳೆಸೋಣ*; ವಾಕಥಾನ್ ಗೆ ಚಾಲನೆ ನೀಡಿ ಅವರು […]

ಗುಮ್ಮಟ ನಗರಿಯಲ್ಲಿ 2014ರ ಕೋಮು ಗಲಭೆ ಪ್ರಕರಣ- ಯತ್ನಾಳ ಸೇರಿ ಎಲ್ಲ ಆರೋಪಿಗಳ ಖುಲಾಸೆ

ವಿಜಯಪುರ: ವಿಜಯಪುರ ನಗರದಲ್ಲಿ 2014 ಮೇ 26 ರಂದು ನಡೆದಿದ್ದ ಕೋಮು ಗಲಭೆ ಪ್ರಕರಣದ ತೀರ್ಪು ಪ್ರಕಟವಾಗಿದ್ದು ಎಲ್ಲ ಆರೋಪಿಗಳನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಖುಲಾಸೆ ಮಾಡಿ ತೀರ್ತು ನೀಡಿದೆ. 2014ರ ಮೇ 26 ರಂದು ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಸಮಯದಲ್ಲಿ ಬಸನಗೌಡ ಪಾಟೀಲ ಯತ್ನಾಳ ವಿಜಯಪುರ ಮಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ನಗರದ ಪ್ರಮುಖ ರಸ್ತೆಗಳಲ್ಲಿ ವಿಜಯೋತ್ಸವ ಮೆರವಣಿಗೆ ನಡೆಸಿದ್ದರು. ಈ ಮೆರವಣಿಗೆ ಗಾಂಧಿಚೌಕಿಗೆ ಬರುತ್ತಿದ್ದಂತೆ ಕಲ್ಲು ತೂರಾಟ ಮತ್ತು […]

ಇಂದು ವಿಶ್ವ ಹೃದಯ ದಿನ- ನಿಮ್ಮ ಹೃದಯದ ಆರೋಗ್ಯ ನಿಮ್ಮ ಕೈಯಲ್ಲಿದೆ

ಡಾ. ರವಿ ಎಸ್. ಕೋಟೆಣ್ಣವರ, ಹೋಮಿಯೋಪಥಿ ಖ್ಯಾತ ವೈದ್ಯರು ವಿಜಯಪುರ: ಜನ ಸಾಮಾನ್ಯರಲ್ಲಿ ಹೃದಯ ರೋಗಗಳ ಕುರಿತು ಅರಿವು ಮೂಡಿಸಲು ಸೆಪ್ಟೆಂಬರ 29 1999ರಲ್ಲಿ ವರ್ಲ್ಡ್ ಹಾಟ೯ ಫೆಡರೇಶನ್(WHF) ಹಾಗೂ ವಿಶ್ವ ಆರೋಗ್ಯ ಸಂಸ್ಥೆಗಳ (WHO) ಸಂಯುಕ್ತ ಆಶ್ರಯದಲ್ಲಿ ಆಗಿನ WHF ನ ಅಧ್ಯಕ್ಷರಾಗಿದ್ದ ಅಂಟೋನಿ ಬೆಯ್ಸ ಅವರ ನೇತೃತ್ವದಲ್ಲಿ ಮೊದಲ ಬಾರಿಗೆ ವಿಶ್ವ ಹೃದಯ ದಿನ ಆಚರಣೆ ಆರಂಭವಾಯಿತು.  ಈ ದಿನ ವಿಶ್ವಾದ್ಯಂತ ಎಲ್ಲ ಸರಕಾರಿ, ಅರೆ ಸರಕಾರಿ ಆರೋಗ್ಯ ಸಂಘ ಸಂಸ್ಥೆಗಳು ಜನರಲ್ಲಿ ಹೃದಯ […]

ಬಿಜೆಪಿ ಸರಕಾರ ಅನೈತಿಕ- ಗೋವಿಂದ ಕಾರಜೋಳ ಪಾಪದ ಮಂತ್ರಿ- ಮಾಜಿ ಸಚಿವ ಎಂ. ಬಿ. ಪಾಟೀಲ ವಾಗ್ದಾಳಿ

ವಿಜಯಪುರ: ಹಾಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ವಿರುದ್ಧ ಮಾಜಿ ಜಲಸಂಫನ್ಮೂಲ ಸಚಿವ ಎಂ. ಬಿ. ಪಾಟೀಲ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯುಕೆಪಿ ಕಾಂಗ್ರೆಸ್ಸಿನ ಪಾಪದ ಕೂಸು ಎಂದು ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ಆದರೆ, ಬಿಜೆಪಿ ಸರಕಾರ ಪಾಪದ ಕೂಸು. ಅನೈತಿಕ ಸರಕಾರದಲ್ಲಿ ಗೋವಿಂದ ಕಾರಜೋಳ ಪಾಪದ ನೀರಾವರಿ ಮಂತ್ರಿಯಾಗಿದ್ದಾರೆ ಎಂದು ಎಂ. ಬಿ. ಪಾಟೀಲ ಹರಿಹಾಯ್ದರು. ಕಾರಜೋಳ ಅವರಿಗೆ ಈ ವಯಸ್ಸಿನಲ್ಲಿ ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ. […]

ಕೆ ಬಿ ಜೆ ಎನ್ ಎಲ್ ಕಚೇರಿ ಆಲಮಟ್ಟಿಗೆ ಸ್ಥಳಾಂತರ – ಭೂಸ್ವಾಧೀನ ಪರಿಹಾರ ಪಾವತಿಗೆ ರೂ. 2500 ಕೋ ರೂ. ಬಿಡುಗಡೆಗೆ ಕ್ರಮ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದ ಅನುಷ್ಠಾನಕ್ಕೆ ಭೂಸ್ವಾಧೀನ ಪ್ರಕ್ರಿಯೆ ಕೊನೆಯ ಹಂತದಲ್ಲಿರುವ ಪ್ರಕರಣಗಳಿಗೆ ಕೂಡಲೇ ಪರಿಹಾರ ಪಾವತಿಸಲು, ಪುನರ್ವಸತಿ ಕೇಂದ್ರಗಳ ಸ್ಥಾಪನೆ ಹಾಗೂ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 2500 ಕೋ. ಬಿಡುಗಡೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು. ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹಿನ್ನೀರಿನಿಂದ ಮುಳುಗಡೆಯಾಗುವ 20 ಗ್ರಾಮಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆಗೆ, ಪುನರ್ವಸತಿ ಕೇಂದ್ರಗಳ ಸ್ಥಾಪನೆಗೆ ಹಾಗೂ ಮೂಲ ಸೌಕರ್ಯ […]