ಅಸ್ಪೃಶ್ಯತೆ ಆಚರಣೆಯಿದ್ದ ಸಂದರ್ಭದಲ್ಲಿ ಗೌಡರ ಮನೆಯಲ್ಲಿ ದಲಿತರಿಗೆ ಸ್ಥಾನ ಕೊಟ್ಟಿತ್ತು ತೊರವಿ ಗೌಡರ ಕುಟುಂಬ- ಡಿಎಸ್‌ಎಸ್ ಮುಖಂಡ ಅಡಿವೆಪ್ಪ ಸಾಲಗಲ

ವಿಜಯಪುರ: ಈ ಹಿಂದೆ ಅಸ್ಪೃಶ್ಯತೆ ಆಚರಣೆ ಜಾರಿಯಲ್ಲಿದ್ದ ಕಾಲದಲ್ಲಿಯೇ ಕೇರಿಯ ದಲಿತರನ್ನು ಊರ ಗೌಡರ ಮನೆಯಲ್ಲಿ ಸ್ಥಾನ ಕೊಟ್ಟ ಕುಟುಂಬ ತೊರವಿ ಗೌಡರ ಕುಟುಂಬ ಎಂದು ಡಿ ಎಸ್ ಎಸ್ ಮುಖಂಡ ಅಡಿವೆಪ್ಪ ಸಾಲಗಲ ಮಾಜಿ ಸಚಿವ ದಿ. ಬಿ. ಎಂ. ಪಾಟೀಲ ಮತ್ತು ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ ಅವರ ಕುಟುಂಬದ ಗುಣಗಾನ ಮಾಡಿದ್ದಾರೆ. ಬಿ ಎಲ್ ಡಿ ಇ ಸಂಸ್ಥೆಯ ಶ್ರೀ ಸಿದ್ದೇಶ್ವರ ಪಿಯು ಕಾಲೇಜಿನಲ್ಲಿ ಗುಮಾಸ್ತರಾಗಿ ಸೇವೆ ಸಲ್ಲಿಸಿ ನಿವೃತ್ತರಾದ […]

ಸಿಂದಗಿ ಬೈ ಎಲೆಕ್ಷನ್- ಚುನಾವಣೆ ವೆಚ್ಚಗಳ ಕರಡು ದರಪಟ್ಟಿ ಪ್ರಕಟಿಸಿ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಆದೇಶ

ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನಸಭೆ ಮತಕ್ಷೇತ್ರದ ಬೈ ಎಲೆಕ್ಷನ್ ಗೆ ಸಂಬಂಧಿಸಿದಂತೆ ಚುನಾವಣೆಗೆ ಮಾಡಬಹುದಾದ ನಾನಾ ವೆಚ್ಚಗಳ ಕರಡು ದರಪಟ್ಟಿ ಕುರಿತು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಆದೇಶ ಹೊರಡಿಸಿದ್ದಾರೆ. ಈ ದರಪಟ್ಟಿ ಕುರಿತು ನಾನಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಜೊತೆ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಸಭೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಈ ಚುನಾವಣೆ ಅಂಗವಾಗಿ ಅಭ್ಯರ್ಥಿಗಳು ಬಳಸುವ ನಾನಾ ವಾಹನಗಳು, ಪ್ರಚಾರ ಸಾಮಗ್ರಿ ಹಾಗೂ ಇತರ ವೆಚ್ಚಗಳಿಗೆ […]

ಸಿಂದಗಿ, ಹಾನಗಲ ಬೈ ಎಲೆಕ್ಷನ್ ಗೆ ಉಸ್ತುವಾರಿಗಳನ್ನು ನೇಮಕ ಮಾಡಿದ ಬಿಜೆಪಿ- ಯತ್ನಾಳಗೆ ಜವಾಬ್ದಾರಿ, ವಿಜಯೇಂದ್ರಗಿಲ್ಲ ಉಸ್ತುವಾರಿ

ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿ ಮತ್ತು ಹಾವೇರಿ ಜಿಲ್ಲೆಯ ಹಾನಗಲ ಬೈ ಎಲೆಕ್ಷನ್ ನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಜೆಪಿ ಎರಡೂ ಕ್ಷೇತ್ರಗಳಿಗೆ ಸಚಿವರನ್ನೊಳಗೊಂಡ ಉಸ್ತುವಾರಿಗಳನ್ನು ನೇಮಕ ಮಾಡಿದೆ. ಈ ಉಸ್ತುವಾರಿಗಳ ಪಟ್ಟಿಯಲ್ಲಿ ವಿಜಯಪುರ ನಗರ ಬಿಜೆಪಿ ಶಾಸಕ ಮತ್ತು ಬಿ. ಎಸ್. ಯಡಿಯೂರಪ್ಪ ಕಟ್ಟಾ ವಿರೋಧಿ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಜವಾಬ್ದಾರಿ ನೀಡಲಾಗಿದೆ. ಆದರೆ, ಈವರೆಗೆ ಬೈ ಎಲೆಕ್ಷನ್ ಗಳಲ್ಲಿ ಒಂದಿಲ್ಲೋಂದು ಕ್ಷೇತ್ರಗಳ ಉಸ್ತುವಾರಿ ನೀಡಲಾಗುತ್ತಿದ್ದ ಬಿಜೆಪಿ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರಿಗೆ ಯಾವುದೇ […]