ವಿಜಯಪುರದಲ್ಲಿ ಬಿಜೆಪಿ ಓಬಿಸಿ ಮೋರ್ಚಾ ಕಾರ್ಯಕಾರಿಣಿ ಆರಂಭ

ವಿಜಯಪುರ: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಕಾರ್ಯಕಾರಣಿ ಬಸವ ನಾಡು ವಿಜಯಪುರದಲ್ಲಿ ಆರಂಭವಾಗಿದೆ.

ವಿಜಯಪುರ ನಗರದ ಬಳಮಕರ ಪಂಕ್ಷನ್ ಹಾಲ್ ನಲ್ಲಿ ನಡೆಯಿತ್ತಿರುವ ರಾಜ್ಯ ಕಾರ್ಯಕಾರಿಣಿಯಲ್ಲಿ ರಾಜ್ಯ ಬಿಜೆಪಿ ಹಿರಿಯ ಮುಖಂಡರು ಪಾಲ್ಹೊಂಡಿದ್ದಾರೆ.

ಕಾರ್ಯಕಾರಿಣಿ ಆರಂಭಕ್ಕೂ ಮುನ್ನ ಕಾರ್ಯಕ್ರಮ ಸ್ಥಳಕ್ಕೆ ಆಗಮಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ, ಸಚಿವ ಕೆ. ಎಸ್. ಈಶ್ವರಪ್ಪ ಮತ್ತು ಇರರರ ಮೇಲೆ ಬಿಜೆಪಿ ಕಾರ್ಯಕರ್ತರು ಹೂವಿನ ಪಕಳೆಗಳನ್ನು ಹಾಕಿ ಸ್ವಾಗತಿಸಿದರು.

)

ಬಳಿಕ ಆರಂಭವಾದ ಕಾರ್ಯಕಾರಿಣಿಯಲ್ಲಿ ಬಿಜೆಪಿಯ ಹಿರಿಯ ನಾಯಕರಿಗೆ ಪುಷ್ಪಾರ್ಚನೆ ಮೂಲಕ ಗೌರವ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಮೋರ್ಚಾ ರಾಜ್ಯಾಧ್ಯಕ್ಷ ನೆ. ಲ. ನರೇಂದ್ರಬಾಬು, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಸೋಮನಗೌಡ ಪಾಟೀಲ‌ ಯತ್ನಾಳ, ವಿಜಯಪುರ ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ, ಮಾಜಿ ಸಚಿವ ಸಂಗಣ್ಣ ಕೆ. ಬೆಳ್ಳುಬ್ಬಿ, ಚಂದ್ರಶೇಖರ ಕವಟಗಿ ಮುಂತಾದವರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌