ಅ.7ರಂದು ಮಾಜಿ ಸಚಿವ ಎಂ. ಬಿ. ಪಾಟೀಲ‌ ಜನ್ಮದಿನ- ಹೂವು, ಹಾರ, ಕೇಕ್, ಪಟಾಕಿ ಬಳಕೆ ಬೇಡ- ಎಂ. ಬಿ. ಪಾಟೀಲ ಫೌಂಡೇಶನ್ ಮನವಿ

ವಿಜಯಪುರ: ಮಾಜಿ ಸಚಿವ ಮತ್ತು ಬಬಲೇಶ್ವರ ಕಾಂಗ್ರೆಸ್ ಶಾಸಕ ಹಾಗೂ ಬಿ‌ ಎಲ್ ಡಿ ಇ ಸಂಸ್ಥೆಯ ಅಧ್ಯಕ್ಷರಾದ ಎಂ. ಬಿ. ಪಾಟೀಲ ಅವರ ಜನ್ಮ ದಿನ ಅ. 7ರಂದು ನಾಡಿನಾದ್ಯಂತ ಹಲವಾರು ಅಭಿಮಾನಿಗಳು ರಕ್ತದಾನ, ವೃದ್ಧಾಶ್ರಮಗಳಲ್ಲಿ, ಅನಾಥಾಶ್ರಮಗಳಲ್ಲಿ ಆಸ್ಪತ್ರೆಗಳಲ್ಲಿ, ಆಹಾರ ವಿತರಣೆ, ಸಸಿಗಳನ್ನು ಹಂಚುವುದು, ಸ್ವಚ್ಚತಾ ಕಾರ್ಯಕ್ರಮ, ದೇವಾಲಯಗಳಲ್ಲಿ ವಿಶೇಷ ಪೂಜೆಗಳ ಮೂಲಕ ನಾನಾ ಕಾರ್ಯಕ್ರಮಗಳ ಮೂಲಕ ಹುಟ್ಟುಹಬ್ಬ ಆಚರಣೆ ಮಾಡುತ್ತಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಕೇಕ್ ಕತ್ತರಿಸುವುದು, ಹೂ ಹಾರ ಹಾಕುವುದು ಇತ್ಯಾದಿ ಅದ್ದೂರಿ […]

ರಾಜ್ಯದ ಮೊದಲ‌ ಆಧುನಿಕ ನೋವು ನಿವಾರಣೆ ಕೇಂದ್ರ ಅ.7 ರಿಂದ ಬಿ ಎಲ್ ಡಿ ಇ ಆಸ್ಪತ್ರೆಯಲ್ಲಿ ಆರಂಭ- ಡಾ. ಆರ್. ಎಸ್. ಮುಧೋಳ

ವಿಜಯಪುರ: ತೀವ್ರ ತರವಾದ ನಾನಾ ನೋವಿನಿಂದ ಬಳಲುವ ರೋಗಿಗಳಿಗೆ ಉತ್ತರ ಕರ್ನಾಟಕದಲ್ಲಿಯೇ ಪ್ರಥಮ ಬಾರಿಗೆ ಆಧುನಿಕ ನೋವು ನಿರ್ವಹಣೆ ಕೇಂದ್ರ ವಿಜಯಪುರದಲ್ಲಿ ಆರಂಭವಾಗಲಿದೆ. ಮಾಜಿ ಸಚಿವ ಎಂ. ಬಿ. ಪಾಟೀಲ ಅವರ ಜನ್ಮದಿನದ ಅಂಗವಾಗಿ ಅ. 7 ರಂದು ಬಿ ಎಲ್ ಡಿ ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ್ ವೈದ್ಯಕೀಯ ಕಾಲೇಜು, ಆಸ್ಪತ್ರೆಯಲ್ಲಿ ಉದ್ಘಾಟನೆಯಾಗಲಿದೆ ವಿವಿ ಎಂದು ಉಪಕುಲಪತಿ ಡಾ. ಆರ್. ಎಸ್. ಮುಧೋಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ತಾತ್ಕಾಲಿಕ ಅನಾರೋಗ್ಯಕ್ಕೆ ಸಂಬಂಧಿಸಿದ ತೀವ್ರನೋವು, […]

ನಿನ್ನೆ ಮಸೂತಿ, ಇಂದು ಸಿಂದಗಿಯಲ್ಲಿ ಭೂಕಂಪ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪ ಉಂಟಾಗಿದೆ. ಬೆಳಗಿನ ಜಾವ 8.30ರ ಸುಮಾರಿಗೆ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಸಿಂದಗಿ ಪಟ್ಟಣದ ನಾಗೂರು ಬಡಾವಣೆ, ಶಿವಶಂಕರ ಬಡಾವಣೆ, ವಿದ್ಯಾನಗರ, ಜ್ಯೋತಿ ನಗರ ಸೇರಿದಂತೆ ಇಡೀ ಪಟ್ಟಣಾದ್ಯಂತ ಭೂಕಂಪದ ಅನುಭವವಾಗಿದೆ. ಇದರಿಂದಾಗಿ ಸಿಂದಗಿ ಪಟ್ಟಣದ ನಿವಾಸಿಗಳಲ್ಲಿ ಆತಂಕ ಮನೆ ಮಾಡಿದೆ. ಶಬ್ದದ ಬಳಿಕ ಭೂಮಿ ಕಂಪಿಸಿದ ಅನುಭವ ಉಂಟಾದ ಹಿನ್ನೆಲೆಯಲ್ಲಿ ಸಾರ್ವಜನಿಕರು ಮನೆಯಿಂದ ಹೊರ ಬಂದು ಅಕ್ಕಪಕ್ಕದ ಮನೆಯವರ ಜೊತೆ ತಮಗಾದ ಅನುಭವ ಹಂಚಿಕೊಂಡಿದ್ದಾರೆ. […]

ಆರ್ ಎಸ್ ಎಸ್ ಕುರಿತು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ನಗು ತರಿಸುತ್ತಿದೆ ಎಂದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ

ವಿಜಯಪುರ: ಆರ್ ಎಸ್ ಎಸ್ ಕುರಿತು ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ನೀಡಿರುವ ಹೇಳಿಕೆಗೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಗಹಗಹಿಸಿ ನಗುವ ಮೂಲಕ ಉತ್ತರ ನೀಡಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಮಾತನಾಡಿದ ಅವರು, ಸಿಂದಗಿ ಬೈ ಎಲೆಕ್ಷನ್ ನಲ್ಲಿ ನಮ್ಮ ಅಭ್ಯರ್ಥಿ ಹಿಂದಿನ ಚುನಾವಣೆಗಿಂತಲೂ ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಆರ್ ಎಸ್ ಎಸ್ ಐಎಎಸ್ ಐಪಿಎಸ್ ಟ್ರೇನಿಂಗ್ ನೀಡಿದೆ ಎಂದು ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ನೀಡಿರುವ […]

ಆರ್ ಎಸ್ ಎಸ್ ಬಗ್ಗೆ ಮಾಜಿ ಸಿಎಂ ಎಚ್ ಡಿ ಕೆ ಹೇಳಿಕೆಗೆ ಯತ್ನಾಳ ನೀಡಿದ ಪ್ರತ್ಯುತ್ತರ ಏನು ಗೊತ್ತಾ?

ವಿಜಯಪುರ: ಐಎಎಸ್ ಮತ್ತು ಐಪಿಎಸ್ ಗಳಿಗೆ ಆರ್ ಎಸ್ ಎಸ್ ತರಬೇತಿ ನೀಡುತ್ತದೆ ಎಂದು ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ನೀಡಿರುವ ಹೇಳಿಕೆಗೆ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಿಡಿ ಕಾರಿದ್ದಾರೆ.  ವಿಜಯಪುರ ಜಿಲ್ಲೆಯ ಕಗ್ಗೋಡದಲ್ಲಿ ಮಾತನಾಡಿದ ಅವರು, ಅನೇಕ ಅಧಿಕಾರಿಗಳು ಆರ್ ಎಸ್ ಎಸ್ ಸ್ವಯಂ ಸೇವಕರಾಗಿರಬಹುದು.  ತಾಲಿಬಾನಿಗಳಂತೂ ಆಗಿಲ್ಲವಲ್ಲ ಎಂದು ತಿರುಗೇಟು ನೀಡಿದ್ದಾರೆ. ಇವರೆಲ್ಲರ ಸರಕಾರ ಇದ್ದಿದ್ದರೆ ತಾಲಿಬಾನಿಗಳನ್ನೇ ಮಾಡುತ್ತಿದ್ದರು.  ಆರ್ ಎಸ್ ಎಸ್. ದೇಶ ಭಕ್ತಿ ಕಲಿಸುವ […]