ಬಸವ ನಾಡಿನ ಶ್ರೀ ನರಸಿಂಹ ದೇವಸ್ಥಾನ ಕಂದಕ ಸ್ವಚ್ಛಗೊಳಿಸಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು

ವಿಜಯಪುರ: ಪೂಜೆಯ ತ್ಯಾಜ್ಯ ವಸ್ತುಗಳಿಂದ ತುಂಬಿಕೊಂಡಿದ್ದ ವಿಜಯಪುರ ನಗರದ ಶ್ರೀ ನರಸಿಂಹ ದೇವಸ್ಥಾನದ ಕಂದಕದಲ್ಲಿದ್ದ ಕಸಕಡ್ಡಿಗಳನ್ನು ಸ್ವಚ್ಛಗೊಳಿಸುವ ಮೂಲಕ ಬಿಜೆಪಿ ಯುವ ಮೋರ್ಚಾ ನಗರ ಮಂಡಲ ಕಾರ್ಯಕರ್ತರು ಗಮನ ಸೆಳೆದಿದ್ದಾರೆ. ಬೆಳಿಗ್ಗೆ 11ಕ್ಕೆ ಆರಂಭವಾದ ಈ ಸ್ವಚ್ಛತಾ ಅಭಿಯಾನ ಸತತ ಐದು ಗಂಟೆಗಳ ಕಾಲ ನಡೆಯಿತು.  ಸ್ಥಳೀಯವಾಗಿ ತಯಾರಿಸಲಾಗಿದ್ದ ಬೋಟಿನಲ್ಲಿ ಕೆಳಗಿಳಿದ ಕೆಲವು ಜನ ಯುವಕರು ಅಲ್ಲಿ ನೀರಿನಲ್ಲಿ ತೇಲಾಡುತ್ತಿದ್ದ ಕಸಕಡ್ಡಿಗಳನ್ನು ಒಂದೆಡೆ ಸೇರಿಸಿದರು.  ನಂತರ ಈ ಕಂದಕಕ್ಕೆ ಅಂಟಿಕೊಂಡಿರುವ ಗೋಡೆಯ ಮೇಲ್ಭಾಗದಲ್ಲಿರುವ ಇತರರು ಬಟ್ಟೆಯಿಂದ ಮತ್ತು […]

ಉತ್ತರ ಕರ್ನಾಟಕದ ಪ್ರಥಮ ನೋವು ನಿರ್ವಹಣೆ ಕೇಂದ್ರಕ್ಕೆ ಚಾಲನೆ ನೀಡಿ ಹೆಲ್ತ್ ಕಾರ್ಡ್ ಬಿಡುಗಡೆ ಮಾಡಿದ ಮಾಜಿ ಸಚಿವ ಎಂ. ಬಿ. ಪಾಟೀಲ

ವಿಜಯಪುರ: ವಿಜಯಪುರ ಸೇರಿದಂತೆ ಸುತ್ತಮುತ್ತಲಿನ ಏಳೆಂಟು ಜಿಲ್ಲೆಗಳ ಬಡವರಿಗೆ ಕಡಿಮೆ ದರದಲ್ಲಿ ಉತ್ತಮ ಆರೋಗ್ಯ ಸೇವೆ ಒದಗಿಸಲು ಬಿ ಎಲ್ ಡಿ ಇ ಆರೋಗ್ಯ ಕವಚ ಹೆಲ್ತ್ ಕಾರ್ಡ್ ಬಹಳ ಉಪಯೋಗವಾಗಲಿದೆ ಎಂದು ಮಾಜಿ ಸಚಿವ, ಬಬಲೇಶ್ವರ ಕಾಂಗ್ರೆಸ್ ಶಾಸಕ ಮತ್ತು ಬಿ ಎಲ್ ಡಿ ಇ ಸಂಸ್ಥೆಯ ಅಧ್ಯಕ್ಷ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ವಿಜಯಪುರದಲ್ಲಿ ಬಿ ಎಲ್ ಡಿ ಇ ಡೀಮ್ಡ್ ವಿಶ್ವವಿದ್ಯಾಲಯ ಬಿ. ಎಂ. ಪಾಟೀಲ ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆಯಲ್ಲಿ ಎಂ. […]

ಮಾಜಿ ಶಾಸಕ ರಮೇಶ ಭೂಸನೂರ ಅವರಿಗೆ ಸಿಂದಗಿ ಬಿಜೆಪಿ ಟಿಕೆಟ್

ವಿಜಯಪುರ: ಸಿಂದಗಿ ಬೈ ಎಲೆಕ್ಷನ್ ಗೆ ನಿರೀಕ್ಷೆಯಂತೆ ಮಾಜಿ ಶಾಸಕ ರಮೇಶ ಭೂಸನೂರ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಬಿಜೆಪಿ ಹೈಕಮಾಂಡ್ ಸಿಂದಗಿಗೆ ರಮೇಶ ಭೂಸನೂರ ಮತ್ತು ಹಾನಗಲ ಗೆ ಶಿವರಾಜ ಸಜ್ಜನರ ಅವರನ್ಮು ಅಭ್ಯರ್ಥಿಯಾಗಿ ಘೋಷಣೆ ಮಾಡಿದೆ. ರಮೇಶ ಭೂಸನೂ 2008 ಮತ್ತು 2013ರಲ್ಲಿ ಸತತವಾಗಿ ಎರಡು ಬಾರಿ ಬಿಜೆಪಿಯಿಂದ ಆಯ್ಜೆಯಾಗಿದ್ದರು. ಆದರೆ, 2018ರಲ್ಲಿ ಜೆಡಿಎಸ್ ಅಭ್ಯರ್ಥಿ ಮತ್ತು ಮಾಜಿ ಸಚಿವ ಎಂ. ಸಿ. ಮನಗೂಳಿ ವಿರುದ್ಧ ಪರಾಭವಗೊಂಡಿದ್ದರು. ಈ ಮಧ್ಯೆ ಸಮ್ಮಿಶ್ರ ಸರಕಾರದಲ್ಲಿ ತೋಟಗಾರಿಕೆ […]

ಕೆ ಆರ್ ಎಸ್ ಬಳಿ ಕಾವೇರಿ ತಾಯಿಗೆ ಪತ್ನಿ ಸಮೇತ ವಿಶೇಷ ಪೂಜೆ ಸಲ್ಲಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಮೈಸೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೃಷ್ಣರಾಜ ಸಾಗರ ಡ್ಯಾಮ್ ಬಳಿ ಕಾವೇರಿ ತಾಯಿಗೆ ಪತ್ನಿ ಸಮೇತ ವಿಶೇಷ ಪೂಜೆ ಸಲ್ಲಿಸಿದರು.     ಪತ್ನಿ ಚನ್ನಮ್ಮ ಜೊತೆ ಸಾಂಪ್ರದಾಯಿಕ ಉಡುಗೆಯಾದ ರೇಷ್ಮೆ ಪಂಚೆ ಹಾಗೂ ಶರ್ಟ್ ತೊಟ್ಟು ಪೂಜೆ ಸಲ್ಲಿಸಿದರು. ಸಕಲ ಧಾರ್ಮಿಕ ಸಂಪ್ರದಾಯದೊಂದಿಗೆ ದಂಪತಿಗಳು ಪೂಜೆ ಸಲ್ಲಿಸಿದರು. ನಂತರ ದಸರಾ ಉದ್ಘಾಟನೆಗಾಗಿ ಚಾಮುಂಡಿ ಬೆಟ್ಟಕ್ಕೆ ತೆರಳಿದರು. ಈ ಸಂದರ್ಭದಲ್ಲಿ ಸಚಿವರಾದ ಆರ್ ಅಶೋಕ ಬೈರತಿ ಬಸವರಾಜ, ಸುನಿಲಕುಮಾರ, ಶಾಸಕ ಅರವಿಂದ ಬೆಲ್ಲದ ಮತ್ತು ಇತರರು ಉಪಸ್ಥಿತರಿದ್ದರು.