ಮಾಜಿ ಶಾಸಕ ರಮೇಶ ಭೂಸನೂರ ಅವರಿಗೆ ಸಿಂದಗಿ ಬಿಜೆಪಿ ಟಿಕೆಟ್

ವಿಜಯಪುರ: ಸಿಂದಗಿ ಬೈ ಎಲೆಕ್ಷನ್ ಗೆ ನಿರೀಕ್ಷೆಯಂತೆ ಮಾಜಿ ಶಾಸಕ ರಮೇಶ ಭೂಸನೂರ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ.

ಬಿಜೆಪಿ ಹೈಕಮಾಂಡ್ ಸಿಂದಗಿಗೆ ರಮೇಶ ಭೂಸನೂರ ಮತ್ತು ಹಾನಗಲ ಗೆ ಶಿವರಾಜ ಸಜ್ಜನರ ಅವರನ್ಮು ಅಭ್ಯರ್ಥಿಯಾಗಿ ಘೋಷಣೆ ಮಾಡಿದೆ.

ರಮೇಶ ಭೂಸನೂ 2008 ಮತ್ತು 2013ರಲ್ಲಿ ಸತತವಾಗಿ ಎರಡು ಬಾರಿ ಬಿಜೆಪಿಯಿಂದ ಆಯ್ಜೆಯಾಗಿದ್ದರು. ಆದರೆ, 2018ರಲ್ಲಿ ಜೆಡಿಎಸ್ ಅಭ್ಯರ್ಥಿ ಮತ್ತು ಮಾಜಿ ಸಚಿವ ಎಂ. ಸಿ. ಮನಗೂಳಿ ವಿರುದ್ಧ ಪರಾಭವಗೊಂಡಿದ್ದರು.

ಈ ಮಧ್ಯೆ ಸಮ್ಮಿಶ್ರ ಸರಕಾರದಲ್ಲಿ ತೋಟಗಾರಿಕೆ ಸಚಿವರಾಗಿದ್ದ ಎಂ. ಸಿ. ಮನಗೂಳಿ ನಿಧನದ ಹಿನ್ನೆಲೆಯಲ್ಲಿ ಸಿಂದಗಿ ವಿಧಾನ ಸಭೆ ಕ್ಷೇತ್ರಕ್ಕೆ ಈಗ ಬೈ ಎಲೆಕ್ಷನ್ ನಡೆಯುತ್ತಿದೆ.

ಈಗ ಬಿಜೆಪಿ ರಮೇಶ ಭೂಸನೂರ ಅವರಿಗೆ ಟಿಕೆಟ್ ನೀಡಿದೆ. ಜೆಡಿಎಸ್ ನಿಂದ ನಾಜಿಯಾ ಶಕೀಲ್ ಅಂಗಡಿ ಮತ್ತು ಕಾಂಗ್ರೆಸ್ಸಿನಿಂದ ಅಶೋಕ ಮನಗೂಳಿ ಅಭ್ಯರ್ಥಿಗಳಾಗಿದ್ದಾರೆ.

ಆಡಳಿತಾರೂಢ ಬಿಜೆಪಿ, ಪ್ರತಿಪಕ್ಷವಾದ ಕಾಂಗ್ರೆಸ್ ಮತ್ತು ಜೆಡಿಎಸ್ ಪಾಲಿಗೆ ಈ ಬೈ ಎಲೆಕ್ಷನ್ ಪ್ರತಿಷ್ಠೆಯಾಗಿದ್ದು, 2023ರಲ್ಲಿ ನಡೆಯುವ ವಿಧಾನ ಸಭೆ ಸಾರ್ವತ್ರಿಕ ಚುನಾವಣೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.

Leave a Reply

ಹೊಸ ಪೋಸ್ಟ್‌