ಬಸವ ಕಲ್ಯಾಣ ಮಾದರಿಯಲ್ಲಿ ಸಿಂದಗಿ ಬೈ ಎಲೆಕ್ಷನ್ ನಲ್ಲಿಯೂ 20 ಸಾವಿರ ಮತಗಳ ಅಂತರದಿಂದ ಬಿಜೆಪಿ ಗೆಲ್ಲಲಿದೆ- ಮಾಜಿ ಡಿಸಿಎಂ ಲಕ್ಷ್ಮಣ ಸವದಿ

ವಿಜಯಪುರು: ಬಸವ ಕಲ್ಯಾಣ ಮಾದರಿಯಲ್ಲಿ ವಿಜಯಪುರ ಜಿಲ್ಲೆಯ ಸಿಂದಗಿ ಬೈ ಎಲೆಕ್ಷನ್ ನಲ್ಲಿಯೂ ಬಿಜೆಪಿ ಅಭ್ಯರ್ಥಿ 20 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಎಂದು ಮಾಜಿ ಡಿಸಿಎಂ ಮತ್ತು ಸಿಂದಗಿ ಬಿಜೆಪಿ ಉಸ್ತುವಾರಿ ಲಕ್ಷ್ಮಣ ಸವದಿ ಭವಿಷ್ಯ ನುಡಿದಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಮಾತನಾಡಿದ ಅವರು, ಚುನಾವಣಾ ಪ್ರಚಾರಕ್ಕೆ ಬಿಜೆಪಿ ಏಳು ತಂಡಗಳನ್ನ ರಚನೆ ಮಾಡಿದೆ.  ನಾನಾ ಸಚಿವರು, ವಿಜಯಪುರ ಸಂಸದ ರಮೇಶ ಜಿಗಜಿಣಗಿ, […]

ಮಾಜಿ ಸಚಿವ ಎಂ. ಸಿ. ಮನಗೂಳಿ ಬದುಕಿದ್ದಾಗ ತಮ್ಮ ಮಗನನ್ನು ಕಾಂಗ್ರೆಸ್ಸಿಗೆ ಸೇರಿಸಿಕೊಳ್ಳಲು ಮನವಿ ಮಾಡಿದ್ದರು- ಮಾಜಿ ಸಿಎಂ ಎಸ್. ಸಿದ್ಧರಾಮಯ್ಯ

ವಿಜಯಪುರ: ಮಾಜಿ ಸಚಿವ ಎಂ. ಸಿ. ಮನಗೂಳಿ ಬದುಕಿದ್ದಾಗ ತಮ್ಮನ್ನು ಭೇಟಿ ಮಾಡಿ ತಮ್ಮ ಪತ್ರು ಅಶೋಕ ಮನಗೂಳಿ ಅವರನ್ನು ಕಾಂಗ್ರೆಸ್ಸಿಗೆ ಸೇರಿಕೊಳ್ಳುವಂತೆ ಹೇಳಿದ್ದರು.  ಈ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ಎಲ್ಲ ಕಾಂಗ್ರೆಸ್ ನಾಯಕರ ಅಭಿಪ್ರಾಯ ಪಡೆದು ಅವರನ್ನು ಪಕ್ಷಕ್ಕೆ ಸೇರಿಸಿಕೊಂಡು ಚುನಾವಣೆ ಕಣಕ್ಕಿಳಿಸಿದ್ದೇವೆ ಎಂದು ಮಾಜಿ ಸಿಎಂ ಎಸ್. ಸಿದ್ಧರಾಮಯ್ಯ ಸ್ಪಷ್ಟಪಡಿಸಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬೈ ಎಲೆಕ್ಷನ್ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಅವರ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಅವರು ಮಾತನಾಡಿದರು.  ಸಿಂದಗಿ ಮತ್ತು […]

ಗುಮ್ಮಟ ನಗರಿಯಲ್ಲಿ ಮಧ್ಯರಾತ್ರಿ ಮತ್ತೆ ಕಂಪಿಸಿದ ಭೂಮಿ- ಆತಂಕದಲ್ಲಿ ಜನತೆ

ವಿಜಯಪುರ: ಗುಮ್ಮಟ ನಗರಿ ವಿಜಯಪುರದಲ್ಲಿ ಗುರುವಾರ ಮಧ್ಯರಾತ್ರಿ ವೇಳೆಗೆ ಭೂಕಂಪದ ಅನುಭವವಾಗಿದೆ. ಮಧ್ಯರಾತ್ರಿ 12.20 ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಬಹುತೇಕ ಜನರು ಈ ಸಂದರ್ಭದಲ್ಲಿ ನಿದ್ದೆಯಲ್ಲಿದ್ದರು.  ಆದರೆ, ಎಚ್ಚರವಿದ್ದವರಿಗೆ ಮತ್ತು ಕಟ್ಟಡಗಳ ಮೊದಲ ಮತ್ತು ಎರಡನೇ ಮಹಡಿಯಲ್ಲಿದ್ದ ಬಹುತೇಕರಿಗೆ ಭೂಮಿ ಕಂಪಿಸಿದ ಅನುಭವ ಉಂಟಾಗಿದೆ. ಭೂಮಿ ಕಂಪಿಸಿದ ಕುರಿತು ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಅನುಭವ ಹಂಚಿಕೊಂಡಿದ್ದಾರೆ.  ಆದರೆ, ಈ ಕಂಪನದ ಕೇಂದ್ರ ಮತ್ತು ತೀವ್ರತೆ ಹಾಗೂ ಇದು ಭೂಕಂಪ ಹೌದು ಅಥವಾ ಅಲ್ಲ ಎಂಬುದರ […]