ಸಿಂದಗಿ, ಹಾನಗಲ್ ಎರಡೂ ಬೈ ಎಲೆಕ್ಷನ್ ಗೆಲ್ಲುವ ವಿಶ್ವಾಸವಿದೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ದಾವಣಗೆರೆ: ವಿಜಯಪುರ ಜಿಲ್ಲೆಯ ಸಿಂಧಗಿ ಮತ್ತು ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಪ್ರಮುಖರೊಂದಿಗೆ ಚುನಾವಣಾ ಪ್ರಚಾರ ಮತ್ತು ಕಾರ್ಯತಂತ್ರಗಳ ಕುರಿತು ಚರ್ಚಿಸಲಾಗಿದೆ. ಈ ಎರಡೂ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ದಾವಣಗೆರೆ ಅಭಿವೃದ್ಧಿಯ ವಿಚಾರಗಳ ಬಗ್ಗೆಯೂ ಚರ್ಚೆ ನಡೆಸಲಾಗಿದೆ. ಹಾವೇರಿ ಜಿಲ್ಲೆಯ ಮುಖಂಡರಾದ ಬಳ್ಳಾರಿ ಅವರೊಂದಿಗೆ ನಮ್ಮದು 40 ವರ್ಷಗಳ ಸಂಬಂಧ. ಅವರೊಂದಿಗೆ ಸಹ ಚರ್ಚೆ ಮಾಡಲಾಗಿದೆ ಎಂದು ತಿಳಿಸಿದರು.

ಬೆಂಗಳೂರು ಜಿಲ್ಲಾ ಉಸ್ತುವಾರಿ ಕುರಿತು ನಡೆದಿರುವ ವಿದ್ಯಮಾನಗಳ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಕಾದು ನೋಡಿ ಎಂದಷ್ಟೇ ಹೇಳಿ ನಿರ್ಗಮಿಸಿದರು.
ಈ ಸಂದರ್ಭದಲ್ಲಿ ದಾವಣಗೆರೆ ಬಿಜೆಪಿ ಸಂಸದ ಜಿ. ಎಂ. ಸಿದ್ಧೇಶ್ವರ ಸೇರಿದಂತೆ ನಾನಾ ಮುಖಂಡರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌