ಸಿಂದಗಿಯಲ್ಲಿ ಜೆಡಿಎಸ್ ಅಭ್ಯರ್ಥಿ ನಾಜಿಯಾ ಶಕೀಲ ಅಂಗಡಿ ಬಿರುಸಿನ ಪ್ರಚಾರ

ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿ ಬೈ ಎಲೆಕ್ಷನ್ ಜೆಡಿಎಸ್ ಅಭ್ಯರ್ಥಿ ನಾಜಿಯಾ ಶಕೀಲ ಅಂಗಡಿ ಅವರು ಮತಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಸಿಂದಗಿ ಮತಕ್ಷೇತ್ರದ ಚಿಕ್ಕಸಿಂದಗಿ ಗ್ರಾಮಕ್ಕೆ ತೆರಳಿದ ಅವರು, ತಮಗೆ ಮತ ನೀಡುವಂತೆ ಮನೆಮನೆಗೆ ತೆರಳಿ ಮತಯಾಚಿಸಿದರು. ಬಳಿಕ ಕೊಕಟನೂರ ಗ್ರಾಮಕ್ಕೆ ತೆರಳಿದ ನಾಜಿಯಾ ಶಕೀಲ ಅಂಗಡಿ ಪಾದಯಾತ್ರೆ ನಡೆಸಿ ಮತ ಹಾಕುವಂತೆ ಮತದಾರರಲ್ಲಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಜಿಡಿಎಸ್ ಮುಖಂಡರಾದ ಝಹೀರುದ್ದೀನ್, ಇಮಾಮ ನದಾಫ್, ಜಟ್ಟೆಪ್ಪ ಮುಂತಾದವರು ಕೂಡ ನಾಜಿಯಾ ಶಕೀಲ ಅಂಗಡಿ […]

ಸಂಸದ ರಮೇಶ ಜಿಗಜಿಣಗಿ, ಶಾಸಕ ನಡಹಳ್ಳಿ ಅವರಿಂದ ಬಿಜೆಪಿ ಅಭ್ಯರ್ಥಿ ಪರ ಭರ್ಜರಿ ಪ್ರಚಾರ

ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನ ಸಭೆ ಕ್ಷೇತ್ರಕ್ಕೆ ನಡೆಯುತ್ತಿರುವ ಬೈ ಎಲೆಕ್ಷನ್ ಪ್ರಚಾರ ಚುರುಕು ಪಡೆದುಕೊಂಡಿದ್ದು, ಬಿಜೆಪಿ ಅಭ್ಯರ್ಥಿ ಮತ್ತು ಮಾಜಿ ಶಾಸಕ ರಮೇಶ ಭೂಸನೂರ ಪರ ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಮತ್ತು ಮುದ್ದೇಬಿಹಾಳ ಬಿಜೆಪಿ ಶಾಸಕ ಮತ್ತು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಎ. ಎಸ್. ಪಾಟೀಲ ನಡಹಳ್ಳಿ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಸಂಸದ ರಮೇಶ ಜಿಗಜಿಣಗಿ ಬಿಜೆಪಿ ಮುಖಂಡರ ಜೊತೆ ಸೇರಿಕೊಂಡು ಬನಹಟ್ಟಿ ಗ್ರಾಮಕ್ಕೆ ಭೇಟಿ […]

ಮುಖಂಡರು, ಕಾರ್ಯಕರ್ತರ ಒತ್ತಾಯದ ಹಿನ್ನೆಲೆ ಸಿಂದಗಿ ಬೈ ಎಲೆಕ್ಷನ್ ಗೆ ಅಭ್ಯರ್ಥಿ ಹಾಕಿದ್ದೇವೆ- ನಾಜಿಯಾ ಶಕೀಲ ಅಂಗಡಿ ಗೆಲ್ಲಲಿದ್ದಾರೆ- ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ವಿಶ್ವಾಸ

ವಿಜಯಪುರ: ಕ್ಷೇತ್ರದ ಮುಖಂಡರು ಮತ್ತು ಕಾರ್ಯಕರ್ತರ ಒತ್ತಾಯದ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ಸಿಂದಗಿ ಬೈ ಎಲೆಕ್ಷನ್‍ಗೆ ಅಭ್ಯರ್ಥಿಯನ್ನು ಹಾಕಿದ್ದೇವೆ ಎಂದು ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಸಿಂದಗಿ ಬೈ ಎಲೆಕ್ಷನ್‍ನಲ್ಲಿ ಮೊದಲು ಅಭ್ಯರ್ಥಿ ಹಾಕಬಾರದು ಎಂದುಕೊಂಡಿದ್ದೇವು. ರಾಯಚೂರ ಬೈ ಎಲೆಕ್ಷನ್‍ನಲ್ಲಿಪಕ್ಷಕ್ಕೆ ಹಿನ್ನೆಡೆಯಾದಾಗ ಸಿಂದಗಿಯಲ್ಲಿ ಅಭ್ಯರ್ಥಿ ಹಾಕಬಾರದು ಎಂದು ತೀರ್ಮಾನಿಸಲಾಗಿತ್ತು ಆದರೆ ಕ್ಷೇತ್ರದ ಮುಖಂಡರು ಮತ್ತು ಕಾರ್ಯಕರ್ತರ ಒತ್ತಾಯದ ಮೆರೆಗೆ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೇವೆ ಎಂದು ಸ್ಪಷ್ಟಪಡಿಸಿದರು. ಮಾಜಿ ಸಚಿವ ಎಂ. ಸಿ. […]

ಅಪ್ರಾಪ್ತ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿಗೆ 2 ವರ್ಷ ಜೈಲು ಶಿಕ್ಷೆ, ರೂ. 10 ಸಾವಿರ ದಂಡ ವಿಧಿಸಿದ ವಿಜಯಪುರ ಪೋಕ್ಸೋ ನ್ಯಾಯಾಲಯ

ವಿಜಯಪುರ: ಸೋದರ ಸಂಬಂಧಿ ಅಪ್ರಾಪ್ತ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಪೊಕ್ಸೊ ನ್ಯಾಯಾಲಯ 2 ವರ್ಷ ಜೈಲು ಶಿಕ್ಷೆ ಮತ್ತು ರೂ. 20 ಸಾವಿರ ದಂಡ ವಿಧಿಸಿ ಆದೇಶ ನೀಡಿದೆ. ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಗ್ರಾಮವೊಂದರಲ್ಲಿ ಜಟ್ಟೆಪ್ಪ ದೇವೇಂದ್ರಪ್ಪ ಚಲವಾದಿ(22) ಎಂಬ ಯುವಕ ತನ್ನ ಸೋದರ ಸಂಬಂಧಿ 17 ವರ್ಷದ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವುದಾಗಿ ಪೀಡಿಸುತ್ತಿದ್ದ.  ಈ ಕುರಿತು ಬಾಲಕಿಯ ಸಂಬಂಧಿಕರು ಹಲವಾರು ಬಾರಿ ಎಚ್ಚರಿಕೆ ನೀಡಿದ್ದರೂ ಆತ ತನ್ನ ದುರ್ವರ್ತನೆ ಮುಂದುವರೆಸಿದ್ದ.  […]

ಪೋಲಂಡನಲ್ಲಿ ಶಕ್ತಿ ಕೋಯ್ಲು ಅಂತಾರಾಷ್ಟ್ರೀಯ ಕಾರ್ಯಾಗಾರ- ಬಿ ಎಲ್ ಡಿ ಎಂಜಿನಿಯರಿಂಗ್ ಕಾಲೇಜಿಗೆ ಅಧಿವೇಶನದ ನಡೆಸುವ ಗೌರವ

ವಿಜಯಪುರ: ಪೋಲಂಡ ದೇಶದ ಲುಬ್ಲಿನ್ ಯುನಿವರ್ಸಿಟಿ ಆಫ್ ಟೆಕ್ನಾಲಜಿ ಅ. 14 ಮತ್ತು 15 ರಂದು ಎರಡು ದಿನಗಳ ಕಾಲ ಶಕ್ತಿ ಕೋಯ್ಲು‌ ಕುರಿತು ಎರಡು ದಿನಗಳ ಕಾರ್ಯಾಗಾರ ಆಯೋಜಿಸಿದೆ.  ಆನಲೈನ್ ಮೂಲಕ ನಡೆಯುತ್ತಿರುವ ಈ ಕಾರ್ಯಾಗಾರದಲ್ಲಿ‌ ಒಂದು ಅಧಿವೇಶನ(ಸೆಷನ್) ಜಂಟಿಯಾಗಿ ನಡೆಸಲು ಪ್ರತಿಷ್ಠಿತ ಬಿ ಎಲ್ ಡಿ‌ ಇ ಸಂಸ್ಥೆಯ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಕಾಲೇಜ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ ಯ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗ ಮತ್ತು ಚನ್ನೈನ ಐಐಟಿ ಮದ್ರಾಸ್ […]