ಮುಖಂಡರು, ಕಾರ್ಯಕರ್ತರ ಒತ್ತಾಯದ ಹಿನ್ನೆಲೆ ಸಿಂದಗಿ ಬೈ ಎಲೆಕ್ಷನ್ ಗೆ ಅಭ್ಯರ್ಥಿ ಹಾಕಿದ್ದೇವೆ- ನಾಜಿಯಾ ಶಕೀಲ ಅಂಗಡಿ ಗೆಲ್ಲಲಿದ್ದಾರೆ- ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ವಿಶ್ವಾಸ

ವಿಜಯಪುರ: ಕ್ಷೇತ್ರದ ಮುಖಂಡರು ಮತ್ತು ಕಾರ್ಯಕರ್ತರ ಒತ್ತಾಯದ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ಸಿಂದಗಿ ಬೈ ಎಲೆಕ್ಷನ್‍ಗೆ ಅಭ್ಯರ್ಥಿಯನ್ನು ಹಾಕಿದ್ದೇವೆ ಎಂದು ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಸ್ಪಷ್ಟಪಡಿಸಿದ್ದಾರೆ.

ವಿಜಯಪುರದಲ್ಲಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಸಿಂದಗಿ ಬೈ ಎಲೆಕ್ಷನ್‍ನಲ್ಲಿ ಮೊದಲು ಅಭ್ಯರ್ಥಿ ಹಾಕಬಾರದು ಎಂದುಕೊಂಡಿದ್ದೇವು. ರಾಯಚೂರ ಬೈ ಎಲೆಕ್ಷನ್‍ನಲ್ಲಿಪಕ್ಷಕ್ಕೆ ಹಿನ್ನೆಡೆಯಾದಾಗ ಸಿಂದಗಿಯಲ್ಲಿ ಅಭ್ಯರ್ಥಿ ಹಾಕಬಾರದು ಎಂದು ತೀರ್ಮಾನಿಸಲಾಗಿತ್ತು ಆದರೆ ಕ್ಷೇತ್ರದ ಮುಖಂಡರು ಮತ್ತು ಕಾರ್ಯಕರ್ತರ ಒತ್ತಾಯದ ಮೆರೆಗೆ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಮಾಜಿ ಸಚಿವ ಎಂ. ಸಿ. ಮನಗೂಳಿ ಅವರನ್ನು ನೆನೆದ ಎಚ್. ಡಿ. ದೇವೇಗೌಡ ಮನಗೂಳಿ ನನ್ನ ಸಹಪಾಠಿಯಾಗಿ ಕೆಲಸ ಮಾಡಿದ್ದರು. 1994ರಿಂದ ಜೊತೆಗಿದ್ದರು. ಸಿಂದಗಿ ಕ್ಷೇತ್ರದ ಅಭಿವೃದ್ಧಿ ಮಾಡಿದ್ದರು. ಈಗ ನಮ್ಮನ್ನು ಅಗಲಿದ್ದಾರೆ. ಸಿಂದಗಿ ಕ್ಷೇತ್ರದಲ್ಲಿ ಅಳಿಲು ಸೇವೆ ಮಾಡಿದ್ದೇವೆ. ಸಿಂದಗಿ ಮತಕ್ಷೇತ್ರ ಉಳಿಸಿಕೊಳ್ಳಲು ಪ್ರಯತ್ನ ಮಾಡುತ್ತಿದ್ದೇವೆ ಎಂದು ಅವರು ತಿಳಿಸಿದರು.

ಸಿಂದಗಿ ಬೈ ಎಲೆಕ್ಷನ್‍ಗೆ ಜೆಡಿಎಸ್ ನಿಂದ ಸ್ಪರ್ಧೆ ಬಯಸಿ 9 ಜನ ಅರ್ಜಿ ಸಲ್ಲಿಸಿದ್ದರು. ನಾನು ಮತ್ತು ಕುಮಾರಸ್ವಾಮಿ ಎಲ್ಲರೊಂದಿಗೆ ಚರ್ಚೆ ಮಾಡಿದ್ದೇವು. ನಂತರ ಒಮ್ಮತದಿಂದ ನಾಜೀಯಾ ಶಕೀಲ ಅಂಗಡಿಯವರನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದ್ದೇವೆ ಎಂದು ತಿಳಿಸಿದ ಅವರು ರಾಜಕೀಯ ಜೀವನದಲ್ಲಿ ಪ್ರತಿಪಕ್ಷದ ನಾಯಕನಾಗಿ, ಸಚಿವನಾಗಿ, ಮುಖ್ಯಮಂತ್ರಿಯಾಗಿ, ಪ್ರಧಾನಮಂತ್ರಿಯಾಗಿ ಸೇವೆ ಮಾಡಿದ್ದೇನೆ. ಇಂಥ ಇಳಿ ವಯಸ್ಸಿನಲ್ಲಿ ಪ್ರಚಾರ ಮಾಡುತ್ತಿದ್ದೇನೆ. ಜಯ ಗಳಿಸುವ ದೃಢವಾದ ಸಂಕಲ್ಪದಿಂದ ಚುನಾವಣೆ ಎದುರಿಸುತ್ತಿದ್ದೇವೆ. ಕೇವಲ ಸಭೆ ಮತ್ತು ಸಮಾರಂಭಗಳನ್ನು ಮಾಡದೇ ಗ್ರಾಮಗಳಿಗೆ ಮತ್ತು ಜನರ ಮನೆ ಬಾಗಿಲಿಗೆ ತೆರಳಿ ಮತಯಾಚನೆ ಮಾಡುತ್ತೇವೆ. ಬೈ ಎಲೆಕ್ಷನಲ್ಲಿ ಜೆಡಿಎಸ್ ಗೆ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದರು.

ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸಿಂದಗಿ ಬೈ ಎಲೆಕ್ಷನ್ ಪ್ರಚಾರಕ್ಕೆ ಬರುತ್ತಾರೆ. ಮತದಾರರು ತೀರ್ಪು ಅಂತಿಮ. ನಮ್ಮ ಕರ್ತವ್ಯ ನಾವು ಮಾಡುತ್ತೇವೆ. ನಾನು ಯಾರ ಬಗ್ಗೆಯೂ ಆಪಾದನೆ ಮಾಡಲ್ಲ. ಬೈ ಎಲೆಕ್ಷನ್ ಫಲಿತಾಂಶ ಮುಂದಿನ ಚುನಾವಣೆಗಳಿಗೆ ದಿಕ್ಶೂಚಿ ಅಲ್ಲ. ಈ ಫಲಿತಾಂಶ ಒಂದು ಪಕ್ಷದ ಅಳಿವು-ಉಳಿವಿಗೆ ಕಾರಣವಾಗುವುದಿಲ್ಲ ಎಂದು ಮಾಜಿ ಪ್ರಧಾನಿ ತಿಳಿಸಿದರು.

ಜೆಡಿಎಸ್ ಪಕ್ಷವನ್ನು ಮುಗಿಸಲು ಎರಡು ರಾಷ್ಟ್ರೀಯ ಪಕ್ಷಗಳು ಪ್ರಯತ್ನಪಟ್ಟವು ಆದರೆ ಅದು ಯಾರಿಂದಲೂ ಸಾಧ್ಯವಿಲ್ಲ. 2023ರ ಚುನಾವಣೆಗೆ ಇಡೀ ರಾಜ್ಯ ಸುತ್ತುತ್ತೇನೆ. ಜೆಡಿಎಸ್ ಅಧಿಕಾರಕ್ಕೆ ತರಲು ಹೋರಾಟ ಮಾಡುತ್ತೇನೆ. ಯಾವ ಪಕ್ಷದ ಜೊತೆಗೂ ಚುನಾವಣೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಸ್ಪಷ್ಟಪಡಿಸಿದರು.

ಈ ಸಂದರ್ಭದಲ್ಲಿ ಸಿಂದಗಿ ಜೆಡಿಎಸ್ ಅಭ್ಯರ್ಥಿ ನಾಜಿಯಾ ಶಕೀಲ ಅಂಗಡಿ, ಮಾಜಿ ಸಚಿವ ಬಂಡೆಪ್ಪ ಕಾಶೆಂಪುರ, ಶಾಸಕ ದೇವಾನಂದ ಚವ್ಹಾಣ, ಜಿಡಿಎಸ್ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಯಂಡಿಗೇರಿ, ಖಾದ್ರಿ ಇನಾಮದಾರ ಮುಂತಾದವರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌