ಸಿಂದಗಿ ಬೈ ಎಲೆಕ್ಷನ್- ಬಿಜೆಪಿ ಅಭ್ಯರ್ಥಿ ಪರ ಸಚಿವ ಕಾರಜೋಳ, ಸಿ ಸಿ ಪಾಟೀಲ, ಮಾಜಿ ಸಚಿವ ಲಕ್ಷ್ಮಣ ಸವದಿ, ಶಾಸಕ ನಡಹಳ್ಳಿ ಬಿರುಸಿನ‌ ಪ್ರಚಾರ

ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನ ಸಭೆ ಕ್ಷೇತ್ರದ ಬೈ ಎಲೆಕ್ಷನ್ ಕಾವು ಏರುತ್ತಿದ್ದು, ಬಿಜೆಪಿ ಮುಖಂಡರು ಬಿರುಸಿನ ಪ್ರಚಾರ ನಡೆಸಿದ್ದಾರೆ.

ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಪರ ಸಚಿವರಾದ ಗೋವಿಂದ ಕಾರಜೋಳ, ಸಿ. ಸಿ. ಪಾಟೀಲ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಶಾಸಕ ಎ. ಎಸ್. ಪಾಟೀನಲ ನಡಹಳ್ಳಿ ಸೇರಿದಂತೆ ನಾನಾ ಮುಖಂಡರು ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ.

ಗೋವಿಂದ ಕಾರಜೋಳ‌ ಪ್ರಚಾರ

ಜಲಸಂಪಂನ್ಮೂಲ ಸಚಿವ ಗೋವಿಂದ ಕಾರಜೋಳ ಅವರು‌ ಯಂಕಂಚಿ ಮತ್ತು ಮುರಡಿ ಗ್ರಾಮಗಳಲ್ಲಿ ಬಿಜೆಪಿ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರ ಪರ ಮತಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಮುಖಂಡರಾದ ದಯಾಸಾಗರ ಪಾಟೀಲಹಾಗೂ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

ಶಾಸಕ ಎ. ಎಸ್. ಪಾಟೀಲ ನಡಹಳ್ಳಿ ಪ್ರಚಾರ

ಪುರದಾಳ ಗ್ರಾಮದಲ್ಲಿ ಮುದ್ದೇಬಿಹಾಳ ಬಿಜೆಪಿ ಶಾಸಕ ಮತ್ತು‌ ಕೆ ಎಪ್ ಸಿ ಎಸ್ ಸಿ ಅಧ್ಯಕ್ಷ ಎ.‌ ಎಸ್. ಪಾಟೀಲ ನಡಹಳ್ಳಿ ಪ್ರಚಾರ ನಡೆಸಿದರು.

)
ಸಚಿವ ಸಿ. ಸಿ. ಪಾಟೀಲ ಪ್ರಚಾರ

ಲೋಕೋಪಯೋಗಿ ಸಚಿವ ಸಿ. ಸಿ. ಪಾಟೀಲ ಅವರು ಕೊರಳ್ಳಿ ಗ್ರಾಮದಲ್ಲಿ ಪ್ರಚಾರ ಸಭೆಯಲ್ಲಿ ಪಾಲ್ಗೊಂಡ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಪರ ಮತ ಯಾಚಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಸಂತೋಷ ಪಾಟೀಲ(ಡಂಬಳ), ಶ್ರೀಶೈಲ ಚಳ್ಳಗಿ, ಸಿದ್ದರಾಮ ಪಾಟೀಲ, ಹಾಗೂ ಪಕ್ಷದ ಪದಾಧಿಕಾರಿಗಳು, ಗ್ರಾಮದ‌ ಮುಖಂಡ ಕಾಶಿನಾಥ ಶುಂಠಿ ಮುಂತಾದವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ನಾನಾ ಪಕ್ಷಗಳ ಮುಖಂಡರು ಬಿಜೆಪಿಗೆ ಸೇರ್ಪಡೆಯಾದರು.

ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಪ್ರಚಾರ

ದೇವರ ನಾವದಗಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಪರ ಮಾಜಿ ಡಿಸಿಎಂ ಲಕ್ಷಣ ಸವದಿ ಮತ ಯಾಚಿಸಿದರು. ಬಿಜೆಪಿ‌ ಅಭ್ಯರ್ಥಿ ರಮೇಶ ಭುಸುನೂರ ಅವರು ತಮ್ಮ 10 ವರ್ಷದ ಅವಧಿಯಲ್ಲಿ ಹಲವಾರು ಅಭಿವೃದ್ಧಿ ಕೆಲಸಗಳ್ಳನ್ನು ಮಾಡಿದ್ದಾರೆ. ಅವರಿಗೆ ಮತ್ತೋಂದು ಅವಕಾಶ ನೀಡಿ ಗೆಲ್ಲಿಸಬೇಕು ಎಂದು ಮತದಾರರಲ್ಲಿ ಮನವಿ‌ ಮಾಡಿದರು.

Leave a Reply

ಹೊಸ ಪೋಸ್ಟ್‌