ಅವರ ಅಪ್ಪನಿಗೆ ಹುಟ್ಟಿದ್ದರೆ, ತಾಕತ್ತಿದ್ದರೆ ಸಿಡಿ ಬಿಡುಗಡೆ ಮಾಡಲಿ- ಯತ್ನಾಳ ಸವಾಲು

ವಿಜಯಪುರ: ಅವರಪ್ಪನಿಗೆ ಹುಟ್ಟಿದ್ದರೆ ಅವರು ಯಾವ ಸಿಡಿ ಇವೆ ಎನ್ನುತ್ತಿದ್ದಾರೆ ಅವುಗಳನ್ನು ಬಿಡುಗಡೆ ಮಾಡಲಿ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸವಾಲು ಹಾಕಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿರುದ್ಧ ಸಿಡಿ ಬಿಡುಗಡೆ ಬೆದರಿಕೆ ಫೋಟೋ ವೈರಲ್ ವಿಚಾರ ವಿರುದ್ಧ ವಿಜಯಪುರ ನಗರ ಯತ್ನಾಳ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಇದರಲ್ಲಿ ಯಾರ‌್ಯಾರು ಇದ್ದಾರೆ ಎಲ್ಲವೂ ಗೊತ್ತಿದೆ. ದಾಖಲೆ ಸಮೇತ ನಮ್ಮ ಬಳಿ ಮಾಹಿತಿ ಇದೆ. ಅವರಿಗೆಲ್ಲ ಸರಿಯಾಗಿ ತಕ್ಕ ಶಾಸ್ತಿ ಆಗುತ್ತದೆ. ನಮ್ಮ […]

ಬೈ ಎಲೆಕ್ಷನ್- ಅ. 17 ರಿಂದ ಸಿಎಂ ಬೊಮ್ಮಾಯಿ, ಅ. 20ರ ನಂತರ ಮಾಜಿ ಸಿಎಂ ಯಡಿಯೂರಪ್ಪ ಪ್ರಚಾರ

ಬೆಂಗಳೂರು: ವಿಜಯಪುರ ಜಿಲ್ಲೆಯ ಸಿಂದಗಿ ಮತ್ತು ಹಾವೇರಿ ಜಿಲ್ಲೆಯ ಹಾನಗಲ ಬೈ ಎಲೆಕ್ಷನ್ ಪ್ರಚಾರಕ್ಕೆ ತೆರಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಸಿದ್ಧತೆ ನಡೆಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಅ. 17 ರಂದು ಹಾನಗಲ್ ನಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡುವುದಾಗಿ ತಿಳಿಸಿದರು.  ನಂತರ ಎರಡು ದಿನ ಸಿಂದಗಿಯಲ್ಲಿ ಪ್ರಚಾರ ಕೈಗೊಳ್ಳುವುದಾಗಿ ಅವರು ಮಾಹಿತಿ ನೀಡಿದರು. ಇದೇ ವೇಳೆ ಮಾಜಿ ಸಿಎಂ […]

ಮಾಜಿ ಸಿಎಂ ಬಿ ಎಸ್ ವೈ ಭೇಟಿಯಾಗಿ ದಸರಾ ಶುಭಾಷಯ ಕೋರಿದ ಸಿಎಂ ಬೊಮ್ಮಾಯಿ

ವಿಜಯಪುರ: ನಾಡಹಬ್ಬ ದಸರಾ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ದಸರಾ ಮತ್ತು ವಿಜಯ ದಶಮಿ ಶುಭಾಷಯ ಕೋರಿದ್ದಾರೆ.   ಬೆಳಿಗ್ಗೆ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ನಿವಾಸ ಕಾವೇರಿಗೆ ತೆರಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ದಿನ ತಮಗೆ ಶುಭ ತರಲಿ ದಸರಾ ಮತ್ತು ವಿಜಯ ದಶಮಿ ಶುಭಾಷಯ ಕೋರಿದರು.

ಸಿಂದಗಿ ಬೈ ಎಲೆಕ್ಷನ್- ಕಾಂಗ್ರೆಸ್ ಅಭ್ಯರ್ಥಿ ಪರ ಎಂ ಎಲ್ ಸಿ ಸುನೀಲಗೌಡ ಪಾಟೀಲ ಪ್ರಚಾರ

ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಕಾಂಗ್ರೆಸ್ ಬಿರುಸಿನ ಪ್ರಚಾರ ಆರಂಭಿಸಿದೆ. ವಿಧಾನ ಪರಿಷತ ಸದಸ್ಯ ಸುನೀಲಗೌಡ ಪಾಟೀಲ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಪರ ಬಿರುಸಿನ ಪ್ರಚಾರ ನಡೆಸಿದ್ದಾರೆ.   ಮೊದಲಿಗೆ ಸುರಗಿಹಳ್ಳಿ ಗ್ರಾಮದಲ್ಲಿ ಅವರು ಪ್ರಚಾರ ಕೈಗೊಂಡರು.   ನಂತರ ಬಳಗಾನೋ ಗ್ರಾಮಕ್ಕೆ ತೆರಳಿದ ಅವರು ಮತಯಾಚನೆ ನಡೆಸಿದರು.   ಬಳಿಕ‌.ನಾಗರಹಳ್ಳಿ ಗ್ರಾಮದದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅಶೋಕ ಮನಗೂಳಿ ಪರ ಸುನೀಲಗೌಡ ಪಾಟೀಲ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಸಂಚಾಲಕ ಮಲ್ಲನಗೌಡ ಬಿರದಾರ […]