ಬೈ ಎಲೆಕ್ಷನ್- ಅ. 17 ರಿಂದ ಸಿಎಂ ಬೊಮ್ಮಾಯಿ, ಅ. 20ರ ನಂತರ ಮಾಜಿ ಸಿಎಂ ಯಡಿಯೂರಪ್ಪ ಪ್ರಚಾರ

ಬೆಂಗಳೂರು: ವಿಜಯಪುರ ಜಿಲ್ಲೆಯ ಸಿಂದಗಿ ಮತ್ತು ಹಾವೇರಿ ಜಿಲ್ಲೆಯ ಹಾನಗಲ ಬೈ ಎಲೆಕ್ಷನ್ ಪ್ರಚಾರಕ್ಕೆ ತೆರಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಸಿದ್ಧತೆ ನಡೆಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಅ. 17 ರಂದು ಹಾನಗಲ್ ನಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡುವುದಾಗಿ ತಿಳಿಸಿದರು.  ನಂತರ ಎರಡು ದಿನ ಸಿಂದಗಿಯಲ್ಲಿ ಪ್ರಚಾರ ಕೈಗೊಳ್ಳುವುದಾಗಿ ಅವರು ಮಾಹಿತಿ ನೀಡಿದರು.

ಇದೇ ವೇಳೆ ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಪ್ರಚಾರ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಯಡಿಯೂರಪ್ಪ ಅವರ ಜೊತೆ ಮಾತನಾಡಿದ್ದೇವೆ.  ಅವರು ಅ. 20ರ ನಂತರ ಹಾನಗಲ್ ಮತ್ತು ಸಿಂದಗಿಯಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಬಿಜೆಪಿ ಶಾಸಕ ಮಸಾಲೆ ಜಯರಾಂ ಒಳ್ಳೆಯ ನಿಗಮ ಬೇಕು ಎಂದು ಗಡುವು ನೀಡಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಅವರ ಬಗ್ಗೆ ಮಾತನಾಡುವುದಿಲ್ಲ.  ಅವರು ನಮ್ಮ ಒಳ್ಳೆಯ ಸ್ನೇಹಿತರು ಎಂದಷ್ಟೇ ಉತ್ತರಿಸಿದರು.

ಮಾಜಿ ಮುಖ್ಯಮಂತ್ರಿಗಳಾದ ಬಿ. ಎಸ್. ಯಡಿಯೂರಪ್ಪ ಮತ್ತು ಎಸ್. ಸಿದ್ಧರಾಮಯ್ಯ ಭೇಟಿ ಮಾಡಿರುವ ಕುರಿತು ರಾಜ್ಯದಲ್ಲಿ ನಡೆಯುತ್ತಿರುವ ಚರ್ಚೆ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಈ ಕುರಿತು ಈಗಾಗಲೇ ಯಡಿಯೂರಪ್ ಅವರು ಸ್ಪಷ್ಟಪಡಿಸಿದ್ದಾರೆ.  ಹೀಗಾಗಿ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಡಿನ ಜನತೆಗೆ ದಸರಾ ಮತ್ತು ವಿಜಯದಶಮಿ ಶುಭಾಷಯಗಳನ್ನು ಕೋರಿದರು.

Leave a Reply

ಹೊಸ ಪೋಸ್ಟ್‌