ಸಿಂದಗಿ ಬೈ ಎಲೆಕ್ಷನ್- ಕಾಂಗ್ರೆಸ್ ಅಭ್ಯರ್ಥಿ ಪರ ಎಂ ಎಲ್ ಸಿ ಸುನೀಲಗೌಡ ಪಾಟೀಲ ಪ್ರಚಾರ

ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಕಾಂಗ್ರೆಸ್ ಬಿರುಸಿನ ಪ್ರಚಾರ ಆರಂಭಿಸಿದೆ.

ವಿಧಾನ ಪರಿಷತ ಸದಸ್ಯ ಸುನೀಲಗೌಡ ಪಾಟೀಲ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಪರ ಬಿರುಸಿನ ಪ್ರಚಾರ ನಡೆಸಿದ್ದಾರೆ.

 

ಮೊದಲಿಗೆ ಸುರಗಿಹಳ್ಳಿ ಗ್ರಾಮದಲ್ಲಿ ಅವರು ಪ್ರಚಾರ ಕೈಗೊಂಡರು.

 

ನಂತರ ಬಳಗಾನೋ ಗ್ರಾಮಕ್ಕೆ ತೆರಳಿದ ಅವರು ಮತಯಾಚನೆ ನಡೆಸಿದರು.

 

ಬಳಿಕ‌.ನಾಗರಹಳ್ಳಿ ಗ್ರಾಮದದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅಶೋಕ ಮನಗೂಳಿ ಪರ ಸುನೀಲಗೌಡ ಪಾಟೀಲ ಮತಯಾಚನೆ ನಡೆಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಸಂಚಾಲಕ ಮಲ್ಲನಗೌಡ ಬಿರದಾರ ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌