ಸೋಮದೇವರಹಟ್ಟಿ ಬಳಿ ಭೂಕಂಪದ ಕೇಂದ್ರಬಿಂದು- ಎರಡು ಬಾರಿ ಕಂಪಿಸಿದ ಭೂಮಿ

ವಿಜಯಪುರ: ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನಲ್ಲಿ ಸಂಜೆ ಉಂಟಾದ ಭೂಕಂಪನದ ಕೇಂದ್ರ ಬಿಂದು ಪತ್ತೆಯಾಗಿದೆ. ಸೋಮದೇವರಹಟ್ಟಿ ಗ್ರಾಮದಿಂದ ಆಗ್ನೆಯ ದಿಕ್ಕಿನಲ್ಲಿ 3.60 ಕಿ. ಮೀ. ದೂರದಲ್ಲಿ ಭೂಕಂಪದ ಕೇಂದ್ರ ಬಿಂದು ದೃಢಪಟ್ಟಿದೆ. ಸಂ. 6.47ಕ್ಕೆ 1.5 ತೀವ್ರತೆ ಮತ್ತು ಸಂ. 7.03ಕ್ಕೆ ಎರಡನೇ ಬಾರಿ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ ಅದರ ತೀವ್ರತೆ 1.2 ರಷ್ಟು ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣೆ ಕೇಂದ್ರದ ಮೂಲಗಳು ಬಸವ ನಾಡಿಗೆ ತಿಳಿಸಿವೆ.

ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನ- ಈ ಬಾರಿ ಮನೆಯಿಂದ ಹೊರಗೋಡಿ ಬಂದ ಜನತೆ- ಎಲ್ಲಿ ಗೊತ್ತಾ?

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಭೂಕಂಪನ ಮುಂದುವರೆದಿದೆ.  ಕಳೆದ ಹಲವು ದಿನಗಳಿಂದ ಜಿಲ್ಲೆಯ ಆಲ್ಲಲ್ಲಿ ಭಾರಿ ಶಬ್ದ ಮತ್ತು ಭೂಮಿ ಕಂಪಿಸಿದ ಅನುಭವವಾಗುತ್ತಿದ್ದು, ಜನತೆ ಭಯ ಬೀಳುವಂತಾಗಿದೆ. ಸಂ. 6.34ರ ಸುಮಾರಿಗೆ ತಿಕೋಟಾ ತಾಲೂಕಿನ ಕೆಲವು ಗ್ರಾಮಗಳಲ್ಲಿ ಭಾರಿ ಶಬ್ದದೊಂದಿಗೆ ಭೂಮಿ ಕಂಪಿಸಿದ ಅನುಭವವಾಗಿದೆ.  ಈ ತಿಂಗಳಲ್ಲಿ ಈ ಭಾಗದಲ್ಲಿ ಎರಡನೇ ಬಾರಿ ಭೂಮಿ ಕಂಪಿಸಿದೆ.  ತಿಕೋಟಾ ತಾಲೂಕಿನ ಕಳ್ಳಕವಟಗಿ, ಘೋಣಸiಗಿ, ಬಾಬಾನಗರ, ಬಿಜ್ಜರಗಿ, ಹುಬನೂರ, ಸಿದ್ದಾಪುರ ಕೆ., ಟಕ್ಕಳಕಿ, ಸೋಮದೇವರಹಟ್ಟಿ ಮತ್ತು ಮಲಕನದೇವರಹಟ್ಟಿ ಗ್ರಾಮಗಳಲ್ಲಿ ಭೂಕಂಪದ ಅನುಭವವಾಗಿದೆ […]

ರಾಜ್ಯದಲ್ಲಿ ಅನೈತಿಕ ಸರಕಾರ ಅಸ್ತಿತ್ವದಲ್ಲಿದೆ- ಸಬ್ ಜಾ ಸಾಥ್ ಸಬ್ ವಿಕಾಸ್ ಅಲ್ಲ ವಿನಾಶ್ ಆಗುತ್ತಿದೆ- ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

ವಿಜಯಪುರ: ರಾಜ್ಯದಲ್ಲಿ ಅನೈತಿಕ ಸರಕಾರ ಅಸ್ತಿತ್ವದಲ್ಲಿದೆ ಎಂದು ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಮೊರಟಗಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಪರ ಪ್ರಚಾರ ನಡೆಸಿದ ಅವರು, ಬಹಿರಂಗ ಸಭೆಯಲ್ಲಿ ಮಾತನಾಡಿದರು. ಈ ಚುನಾವಣೆ ಬಹಳ ಮಹತ್ಚದ ಚುನಾವಣೆಯಾಗಿದೆ. ‌ಕಾಂಗ್ರೆಸ್ ಪಕ್ಷದ ದೃಷ್ಟಿಯಿಂದ ಮತ್ತು ದೇಶದ ಹಿತದೃಷ್ಟಿಯಿಂದ ಈ ಚುನಾವಣೆ ಮಹತ್ವದ್ದಾಗಿದೆ‌. ರಾಜ್ಯದಲ್ಲಿ ಇವತ್ತು ಅನೈತಿಕ ಸರಕಾರ ಅಸ್ತಿತ್ವದಲ್ಲಿದೆ ಎಂದು ಆರೋಪಿಸಿದರು. ರಾಜ್ಯದಲ್ಲಿ ಈ ಸರಕಾರಕ್ಕೆ ಜನರು ಬಹುಮತ ಕೊಡದಿದ್ದರೂ […]

ಪೊಲೀಸ್ ಠಾಣೆ ಸಿಬ್ಬಂದಿ ಕೇಸರಿ ಬಟ್ಟೆ ಬಳಸಿದ ವಿಚಾರಕ್ಕೆ ಮತ್ತೋಮ್ಮೆ ಸಿದ್ಧರಾಮಯ್ಯ ವ್ಯಂಗ್ಯ

ವಿಜಯಪುರ: ಆಯುಧ ಪೂಜೆ ಸಂದರ್ಭದಲ್ಲಿ ಕರಾವಳಿಯ ರಾಜ್ಯದ ಕಾಪು ಮತ್ತು ವಿಜಯಪುರ ಜಿಲ್ಲೆಯ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯ ಸಿಬ್ಬಂದಿ ಕೇಸರಿ ಬಟ್ಟೆ ಧರಿಸಿರುವುದಕ್ಕೆ ಮಾಜಿ ಸಿಎಂ ಮತ್ತು ವಿಧಾಸಭೆ ಪ್ರತಿಒಕ್ಷದ ನಾಯಕ ಎಸ್. ಸಿದ್ಧರಾಮಯ್ಯ ಮತ್ತೋಮ್ಮೆ ಕಿಡಿ ಕಾರಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ಬೈ ಎಲೆಕ್ಷನ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿಬ ಪರ ಪ್ರಚಾರಕ್ಕಾಗಿ ಸಿಂದಗಿ ತಾಲೂಕಿನ ಮೊರಟಗಿ ಗ್ರಾಮಕ್ಕೆ ಆಗಮಿಸಿದ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಕಾಪು ಮತ್ತು ವಿಜಯಪುರ ಗ್ರಾಮೀಣ ಪೊಲೀಸ್ […]

ಬಿ ಎಸ್ ವೈ ಹಾಕಿಕೊಟ್ಟ ಮಾರ್ಗದರ್ಶನಲ್ಲಿ ಸಿಎಂ 2023ಕ್ಕೆ ಬಿಜೆಪಿ ಅಧಿಕಾರಕ್ಕೆ ತರಲು ಸ್ವಚ್ಛ ಆಡಳಿತ ನೀಡುತ್ತಿದ್ದಾರೆ- ಸಚಿವ ಹಾಲಪ್ಪ ಆಚಾರ

ವಿಜಯಪುರ: ಮಾಜಿ ಸಿಎಂ ಯಡಿಯೂರಪ್ಪ ಹಾಕಿಕೊಟ್ಟ ಮಾರ್ಗದರ್ಶನದಡಿ ಸಿಎಂ ಬಸವರಾಜ ಬೊಮ್ಮಾಯಿ ಸ್ವಚ್ಛ ಆಡಳಿತ ನೀಡುವ ಮೂಲಕ 2023ರಲ್ಲಿ ಮತ್ತೋಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಕಾರ್ಯೋನ್ಮುಖರಾಗಿದ್ದಾರೆ ಎಂದು ಗಣಿ ಮತ್ತು ಭೂವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ ತಿಳಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಸಿಂದಗಿಗೆ ಬಂದು ಪ್ರಚಾರ ಮಾಡಲಿದ್ದಾರೆ. ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿಯಾದ ತಕ್ಷಣ ರಾಜ್ಯಕ್ಕೆ ಅಭೂತಪೂರ್ವ ಕೊಡುಗೆ ಕೊಟ್ಟಿದ್ದಾರೆ. ರೈತರ ಮಕ್ಕಳಿಗೆ ವಿಶೇಷವಾಗಿ […]

ನಾನೇನು ಬೆಂಗಳೂರಿಂದ ದುಡ್ಡು ತಂದು ಇಲ್ಲಿ ಮುಚ್ಚಿ ಚುನಾವಣೆ ಮಾಡ್ತಿಲ್ಲ- ಅಂಬೇಡ್ಕರ್ ಮೊಮ್ಮಗ ಪ್ರಕಾಶ ಅಂಬೇಡ್ಕರ್ ಜೆಡಿಎಸ್ ಅಭ್ಯರ್ಥಿಗೆ ಸಹಾಯ ಮಾಡಲಿದ್ದಾರೆ- ಎಚ್. ಡಿ. ದೇವೇಗೌಡ

ವಿಜಯಪುರ: ಸಿಂದಗಿ ಜೆಡಿಎಸ್ ಅಭ್ಯರ್ಥಿಗೆ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ ಅವರ ಮೊಮ್ಮಗ ಪ್ರಕಾಶ ಅಂಬೇಡ್ಕರ್ ಬೆಂಬಲ ಸೂಚಿಸಿದ್ಸದಾರೆ ಎಂದು ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಜೆಡಿಎಸ್ ಅಭ್ಯರ್ಥಿ ನಾಜಿಯಾ ಶಕೀಲ ಅಂಗಡಿ ಪರ ಪ್ರಚಾರಕ್ಕೆ ಆಗಮಿಸಿದ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕಾಂಗ್ರೆಸ್ ಅಬ್ಬರದ ಪ್ರಚಾರ ಮಾಡುತ್ತಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು, ನಾವು ಅಬ್ಬರದ ಪ್ರಚಾರಕ್ಕೆ ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.  ಇದೇ […]