ಕಾಂಗ್ರೆಸ್ ಪಾಲಿಗೆ ಅಚ್ಛೇ ದಿನ್ ಬರುವುದೇ ಇಲ್ಲ- ಕಾಂಗ್ರೆಸ್ ಭಾಗ್ಯ ಯಾರ ಮನೆ ಬಾಗಿಲಿಗೂ ಬರಲಿಲ್ಲ- ಸಿಎಂ‌ ಬಸವರಾಜ ಬೊಮ್ಮಾಯಿ

ವಿಜಯಪುರ:  ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಬಗ್ಗೆ ಹಗುರವಾಗಿ ಮಾತನಾಡುವ ಕಾಂಗ್ರೆಸ್ ಪಕ್ಷಕ್ಕೆ ಮುಂದಿನ ದಿನಗಳಲ್ಲಿ ಅಚ್ಛೆದಿನ್ ಬರುವುದೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದರು. ಕರ್ನಾಟಕದಲ್ಲಿ ಕಾಂಗ್ರೆಸ್ ಕೊಟ್ಟಂತಹ ಭಾಗ್ಯ ಯಾರ ಮನೆ ಬಾಗಿಲಿಗೂ ತಲುಪಲಿಲ್ಲ. ಹೀಗಾಗಿ ಕಾಂಗ್ರೆಸ್ ಸರ್ಕಾರ ಕರ್ನಾಟಕದ ಪಾಲಿಗೆ ದೌರ್ಭಾಗ್ಯ ವಾಯಿತು. ಅದಕ್ಕಾಗಿಯೇ ರಾಜ್ಯದ ಜನ ಕಾಂಗ್ರೆಸ್ ಪಕ್ಷವನ್ನು ಕಳಿದ ಚುನಾವಣೆಯಲ್ಲಿ ತಿರಸ್ಕರಿಸಿದರು ಎಂದು ಅವರು ಲೇವಡಿ ಮಾಡಿದರು. ಸಿಂದಗಿ ಉಪ ಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರದ ಅಲಮೇಲ್ […]

ಕಾಂಗ್ರೆಸ್ ಪ್ರಚಾರ ವಾಹನ ಚುನಾವಣೆ ಅಧಿಕಾರಿಗಳ ವಶಕ್ಕೆ- ಯಾಕೆ ಗೊತ್ತಾ?

ವಿಜಯಪುರ: ಕಾಂಗ್ರೆಸ್ ಪ್ರಚಾರಕ್ಕೆ ತೆರಳುತ್ತಿದ್ದ ತೆರೆದ ವಾಹನವನ್ನು ಚುನಾವಣೆ ಅಧಿಕಾರಿಗಳು ವಶಕ್ಕೆ ಪಡೆದ ಘಟನೆ ವಿಜಯಪುರ ಜಿಲ್ಲೆಯ ಕನ್ನೊಳ್ಳಿ ಬಳಿ ನಡೆದಿದೆ. ಸಿಂದಗಿ ಮತಕ್ಷೇತ್ರ ವ್ಯಾಪ್ತಿಯ ಕನ್ನೊಳ್ಳಿ ಚುನಾವಣೆ ಚೆಕ್ ಪೋಸ್ಟ್ ನಲ್ಲಿ ಚುನಾವಣೆ ಅಧಿಕಾರಿಗಳು ಕಾಂಗ್ರೆಸ್ ಪ್ರಚಾರದ ತೆರೆದ ವಾಹನ‌ ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನಿಂದ ಈ ತೆರೆದ ವಾಹನ ಸಿಂದಗಿಗೆ ಪ್ರಚಾರಕ್ಕೆ ಹೊರಟಿತ್ತು. ಇದೇ ವಾಹನದಲ್ಲಿ ಸ್ವಲ್ಪ ಹೊತ್ತಿನಲ್ಲಿ ಕಾಂಗ್ರೆಸ್ ನಾಯಕರು ಭರ್ಜರಿ ಪ್ರಚಾರ ನಡಸಬೇಕಿದೆ. ಮಾಜಿ ಸಿಎಂ ಎಸ್. ಸಿದ್ಧರಾಮಯ್ಯ, ಡಿಕೆ ಶಿವಕುಮಾರ, ಎಐಸಿಸಿ […]

ಭೀಮಾ ತೀರದ ಮಹಿಳಾ ಮತದಾರರ ಓಲೈಕೆಯತ್ತ ಸಚಿವೆ ಶಶಿಕಲಾ ಜೊಲ್ಲೆ ಚಿತ್ತ- ಪ್ರತಿ ಮನೆಯ ಮುಂದೆ ಕಮಲದ ರಂಗೋಲಿ ಹಾಕಲು ಸಚಿವೆ ಮನವಿ

ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿ ಬೈ ಎಲೆಕ್ಷನ್ ಪ್ರಚಾರ ಚುರುಕು ಪಡೆದುಕೊಂಡಿದ್ದು, ಭೀಮಾ ತೀರದ ಮಹಿಳಾ ಮತದಾರರನ್ನು ಬಿಜೆಪಿಯತ್ತ ಸೆಳೆಯಲು ಸಚಿವೆ ಶಶಿಕಲಾ ಚಿತ್ತ ಹರಿಸಿದ್ದಾರೆ. ಸಿಂದಗಿ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಭೀಮಾ ತೀರದ ದೇವರ ನಾವಡಗಿ, ಕಮಸಗಿ, ಕಡ್ಲೆವಾಡ, ಶಂಬೇವಾಡ, ದೇವಣಗಾಂವ, ಬಮ್ಕನಹಳ್ಳಿ ಹಾಗೂ ಗುಂದಗಿ ಗ್ರಾಮಗಳಲ್ಲಿ ಮನೆ.ಮನೆಗೂ ತೆರಳಿ ಮಹಿಳೆಯರನ್ನು ಭೇಟಿ ಮಾಡಿ ಅವರು, ಬಿಜೆಪಿ ಅಭ್ಯರ್ಥಿ ರಮೇಶ ಬೂಸನೂರು ಪರ ಮತ ಹಾಕುವಂತೆ ಮನವಿ ಮಾಡಿದರು. ಈ ಸಂದರ್ಭಫದಲ್ಲಿ ಮಾತನಾಡಿದ ಅವರು, ಸಿಂದಗಿ […]

ಯಡಿಯೂರಪ್ಪ ಎಂದೂ ಮುಂಬಾಗಿಲಿನಿಂದ ಬಂದು ಮುಖ್ಯಮಂತ್ರಿ ಆಗಲೇ ಇಲ್ಲ- ಮಾಜಿ ಸಿಎಂ ಎಸ್.ಸಿದ್ಧರಾಮಯ್ಯ ವಾಗ್ದಾಳಿ

ವಿಜಯಪುರ: ಯಡಿಯೂರಪ್ಪ ಎಂದೂ ಮುಂಬಾಗಿಲಿನಿಂದ ಬಂದು ಮುಖ್ಯಮಂತ್ರಿ ಆಗಲೇ ಇಲ್ಲ.  ಕೋಟಿಗಟ್ಟಲೇ ಹಣ ಖರ್ಚು ಮಾಡಿ ಶಾಸಕರನ್ನು ಖರೀದಿಸಿ ಮುಖ್ಯಮಂತ್ರಿಯಾಗಿ ಎರಡೇ ವರ್ಷಗಳಲ್ಲಿ ಅವರನ್ನು ಬಿಜೆಪಿಯ ಹೈಕಮಾಂಡ ಕಿತ್ತು ಹಾಕಿದರು.  ಕಣ್ಣೀರು ಹಾಕಿಕೊಂಡು ಯಡಿಯೂರಪ್ಪ ರಾಜೀನಾಮೆ ಕೊಟ್ಟರು ಎಂದು ಮಾಜಿ ಮುಖ್ಯಮಂತ್ರಿ ಮತ್ತು ವಿಧಾನ ಸಭೆ ಪ್ರತಿಪಕ್ಷದ ನಾಯಕ ಎಸ್. ಸಿದ್ಧರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿಯ ಬೈ ಎಲೆಕ್ಷನ್ ಪ್ರಚಾರದಲ್ಲಿರುವ ಅವರು, ಸಿಂದಗಿ ತಾಲೂಕಿನ ಮೊರಟಗಿಯಲ್ಲಿ ಬಹಿರಂಗ ಸಭೆಯಲ್ಲಿ ಮಾತನಾಡಿದರು. ಯಡಿಯೂರಪ್ಪ […]