ಲಘು ಭೂಕಂಪನದ ಬಗ್ಗೆ ಆತಂಕಪಡುವ ಅಗತ್ಯವಿಲ್ಲ- ಹೈದರಾಬಾದ ಭೂವಿಜ್ಞಾನ ತಜ್ಞರ ಹೇಳಿಕೆ

ವಿಜಯಪುರ : ವಿಜಯಪುರ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಆಗಾಗ ಅಲ್ಲಲ್ಲಿ ಭೂಮಿ ಕಂಪಿಸಿದ ಹಾಗೂ ಭೂಮಿಯೊಳಗಿನಿಂದ ಶಬ್ಧ ಕೇಳಿದ ನಂತರ ಲಘು ಭೂಕಂಪನದ ಅನುಭವವಾಗುತ್ತಿರುವ ಹಿನ್ನೆಲೆಯಲ್ಲಿ ಹೈದರಾಬಾದಿನ ಗಣಿ ಮತ್ತು ಭೂವಿಜ್ಞಾನಿಗಳ ತಂಡ ವಿಜಯಪುರ ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಹಿರಿಯ ಭೂವಿಜ್ಞಾನಿ ಶಶಿಧರ್ ಡಿ. ನೇತೃತ್ವದ ತಜ್ಞರ ತಂಡ ಕೊಲ್ಹಾರ ತಾಲೂಕಿನ ಮಸೂತಿ ಗ್ರಾಮಕ್ಕೆ ಆಗಮಿಸಿದ ಈ ತಂಡ ಮಸೂತಿ ಬಳಿ ಸಿಸ್ಮೋಮೀಟರ್(ಭೂಕಂಪನ ಮಾಪನ ಯಂತ್ರ) ಅಳವಡಿಸಿತು.  ಈ ಸಂದರ್ಭದಲ್ಲಿ ಮಾತನಾಡಿದ ಅವರು, […]

ಅಡುಗೆ ಮಾಡುವ ಹೆಣ್ಣು ಮಗಳು ಮಂತ್ರಿಯಾಗಲು ಬಿಜೆಪಿಯಲ್ಲಿ ಮಾತ್ರ ಅವಕಾಶ- ಸಚಿವೆ ಶಶಿಕಲಾ ಜೊಲ್ಲೆ

ವಿಜಯಪುರ: ಮನೆಯಲ್ಲಿ ಅಡುಗೆ ಮಾಡುವ ಹೆಣ್ಣು ಮಗಳು ರಾಜ್ಯದ ಮಂತ್ರಿಯಾಗಲು ಬಿಜೆಪಿ ಯಲ್ಲಿ ಮಾತ್ರ ಸಾಧ್ಯ ಎಂದು ಮುಜರಾಯಿ ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆಯವರು ಹೇಳಿದ್ದಾರೆ.   ವಿಜಯಪುರ ಜಿಲ್ಲೆಯ ಸಿಂದಗಿ ಬೈ ಎಲೆಕ್ಷನ್ ಚುನಾವಣೆ ಅಂಗವಾಗಿ ಆಲಮೇಲ ತಾಲೂಕಿನ ಭೀಮಾ ತೀರದ ಕಡಣಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಮತ ಯಾಚಸಿ ಅವರು ಮಾತನಾಡಿದರು. ಬಿಜೆಪಿಯಲ್ಲಿ ಮಹಿಳೆಯರಿಗೆ ಸಾಕಷ್ಟು ಸ್ವಾಂತಂತ್ರ್ಯ ಇದೆ.  ದೇಶದ ಜನಸಂಖ್ಯೆಯ ಅರ್ಧದಷ್ಟು ಮಹಿಳೆಯರಿದ್ದೇವೆ.  ಮೊದಲು ತವರು ಮಹಿಳೆಯರು […]

ಸಿದ್ಧರಾಮಯ್ಯ, ಕುಮಾರಸ್ವಾಮಿ ಭ್ರಮೆಯಲ್ಲಿದ್ದಾರೆ- ಕಟೀಲು ಅಗೌರವ ತರುವ ಮಾತನಾಡಬಾರದು- ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ .

ವಿಜಯಪುರ: ಮಾಜಿ ಮುಖ್ಯಮಂತ್ತಿ ಗಳಾದ ಎಚ್. ಡಿ. ಕುಮಾರಸ್ವಾಮಿ ಮತ್ತು ಎಸ್. ಸಿದ್ಧರಾಮಯ್ಯ ಭ್ರಮೆಯಲ್ಲಿ ಇದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಆರೋಪಿಸಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಮೊರಟಗಿಯಲ್ಲಿ ಅವರು ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಪರ ಪ್ರಚಾರಕ್ಕೆ ಆಗಿಮಿಸಿದ್ದಾರೆ. ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆರ್ ಎಸ್ ಎಸ್ ಕುರಿತು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಮತ್ತು ಎಸ್. ಸಿದ್ಧರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ಇಬ್ಬರೂ ಮಾಜಿ […]

ಬಸವ ನಾಡಿನಲ್ಲಿ ಮತ್ತೆ ಭೂಕಂಪನ- ರಿಕ್ಟರ್ ಮಾಪಕದಲ್ಲಿ 3.6 ತೀವ್ರತೆ ದಾಖಲು

ವಿಜಯಪುರ: ಬಸವ ನಾಡು ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನ ಉಂಟಾಗಿದೆ.  ಬೆಳಿಗ್ಗೆ ಭಾರಿ ಶಬ್ದದೊಂದಿಗೆ ಉಂಟಾದ ಈ ಭೂಕಂಪನದಿಂದ ನಾನಾ ಗ್ರಾಮಸ್ಥರು ತೀವ್ರ ಆಂತಕಗೊಂಡಿದ್ದಾರೆ. ಸೋಮವಾರ ಸಂಜೆಯಷ್ಟೇ ಭೂಕಂಪನ ಉಂಟಾಗಿದ್ದ ತಿಕೋಟಾ ತಾಲೂಕಿನ ನಾನಾ ಗ್ರಾಮಗಳಲ್ಲಿ ಈಗ ಮತ್ತೆ ಭೂಮಿ ಕಂಪಿಸಿದೆ.  ಭಾರಿ ಶಬ್ದದೊಂದಿಗೆ ಭೂಮಿ ಕಂಪಿಸಿದ್ದರಿಂದ ಜನರು ಹೊರಗೆ ಓಡಿ ಬಂದಿದ್ದಾರೆ.  ಈ ಹಿಂದೆಯೂ ಹಲವಾರು ಬಾರಿ ಈ ಭಾಗದಲ್ಲಿ ಭೂಕಂಪನ ಅನುಭವಕ್ಕೆ ಬಂದಿದ್ದರೂ ಬೆಳಿಗ್ಗೆ 10.29ರ ಸುಮಾರಿಗೆ ಕೇಳಿ ಬಂದ ಭಾರಿ ಶಬ್ದ ಈ […]

ಕಲಾಪದಲ್ಲಿ ಕುಳಿತು ನೀಲಿ ಚಿತ್ರ ನೋಡುವುದನ್ನು ತಾನೆ ಆರ್ ಎಸ್ ಎಸ್ ಕಲಿಸಿದ್ದು- ನನ್ನ ಕಂಡರೆ ಸಿದ್ಧರಾಮಯ್ಯಗೆ ಭಯ- ಮಾಜಿ ಸಿಎಂ ಎಚ್. ಡಿ.ಕುಮಾರಸ್ವಾಮಿ ವಾಗ್ದಾಳಿ.

ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿ ಬೈ ಎಲೆಕ್ಷನ್ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ರಾಜಕೀಯ ನಾಯಕ ಆರೋಪ, ಪ್ರತ್ಯಾರೋಪ, ಟೀಕೆಗಳೂ ಮುಂದುವರೆದಿವೆ.  ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಬೊಮ್ಮನಳ್ಳಿಯಲ್ಲಿ ಜೆಡಿಎಸ್ ಅಭ್ಯರ್ಥಿ ನಾಜಿಯಾ ಶಕೀಲ ಅಂಗಡಿ ಪರ ಪ್ರಚಾರಕ್ಕೆ ಆಗಮಿಸಿರುವ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ, ಬಿಜೆಪಿ ನಾಯಕರು ತಮಗೆ ಆರ್ ಎಸ್ ಎಸ್ ಗೆ ಆಹ್ವಾನ ನೀಡಿರುವುದಕ್ಕೆ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಆರ್ ಎಸ್ ಎಸ್ ಸಹವಾಸ ಬೇಡವೇ ಬೇಡ.  ಆರ್ ಎಸ್ […]

ಸೋಮಣ್ಣಗೆ ಬೆಂಗಳೂರು ಉಸ್ತುವಾರಿ ಕೊಡಿ- ವಿಜಯಪುರ ಜಿಲ್ಲೆಗೆ ಸಚಿವ ಸ್ಥಾನ ಕೊಡಿ ಇಲ್ಲಾಂದ್ರೆ…-ಯತ್ನಾಳ

ವಿಜಯಪುರ: ವಿಜಯಪುರಕ್ಕೆ ಮಂತ್ರಿ ಸ್ಥಾನ ಕೊಡದೆ ಅನ್ಯಾಯ ಮಾಡಿದ್ದೀರಿ. ಮುಂದಿನ ಬಾರಿ ಮಂತ್ರಿ‌ ಕೊಡಲಿಲ್ಲ ಅಂದ್ರೆ ಮತ್ತೆ ಬೇರೆ ಆಗುತ್ತದೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಒತ್ತಾಯಿಸಿದ್ದಾರೆ. ವಿಜಯಪುರ ಜಿಲ್ಲೆಯ ಆಲಮೇಲ ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಸಚಿವ ವಿ. ಸೋಮಣ್ಣ ಅವರಿಗೆ ಬೆಂಗಳೂರಿ ಉಸ್ತುವಾರಿ ಕೊಡಬೇಕು.  ಅವರು ಸಮರ್ಥರಿದ್ದಾರಿದ್ದಾರೆ.  ಅವರ ಬದಲು ನಿಮ್ಮ ಸುತ್ತಮುತ್ತ ತಿರುಗಾಡುವವರಿಗೆ […]