ಬಸವರಾಜ ಬೊಮ್ಮಾಯಿ ನೀವೇನಾದರೂ ಕುರಿ ಕಾಯ್ದಿದ್ದೀರಾ ಎಂದು ಪ್ರಶ್ನಿಸಿದ ಮಾಜಿ ಸಿಎಂ ಸಿದ್ಧರಾಮಯ್ಯ

ವಿಜಯಪುರ: ಕಂಬಳಿ ಹಾಕಿಕೊಳ್ಳಲು ಯೋಗ್ಯತೆ ಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಅವರು ಬಸವರಾಜ ಬೊಮ್ಮಾಯಿ ನೀವೇನಾದರೂ ಕುರಿ ಕಾಯ್ದಿದ್ದೀರಾ ಎಂದು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಮಾತನಾಡಿದ ಅವರು, ಹೇ ಬಸವರಾಜ ಬೊಮ್ಮಾಯಿ ನೀನೇವಾಗಾದ್ರೂ ಕುರಿ ಕಾದಿದ್ದಿಯಾ? ನಾನು ಕುರಿ ಕಾಯ್ದಿದ್ದೇನೆ.  ಬಸವರಾಜ್ ಬೊಮ್ಮಾಯ್ ಯಾವಾತ್ತಾದ್ರೂ ಕರಿ ಕಂಬಳಿ ಹೊತ್ತಿದ್ದೀಯೇನಯ್ಯ? ಅದನ್ನು ಹೊತ್ಕೊಳ್ಳೊಕೆ ಯೋಗ್ಯತೆ ಬೇಕು ನಿನಗೆ ಎಂದು ವಾಗ್ದಾಳಿ ನಡೆಸಿದರು.  ಈ ಸಂದರ್ಭದಲ್ಲಿ […]

ಸುಳ್ಳು ಹೇಳುವುದರಲ್ಲಿ ಕಾಂಗ್ರೆಸ್ ನಂಬರ್ ಒನ್- ಪ್ರಧಾನಿ ನರೇಂದ್ರ ಮೋದಿ ಸಂಗೊಳ್ಳಿ ರಾಯಣ್ಣನ ಪ್ರತಿರೂಪ- ಸಚಿವ ಕೆ. ಎಸ್. ಈಶ್ವರಪ್ಪ

ವಿಜಯಪುರ: ಕಾಂಗ್ರೆಸ್ ಸುಳ್ಳು ಹೇಳುವುದರಲ್ಲಿ ನಂಬರ್ ಒನ್.  ಪ್ರಧಾನಿ ನರೇಂದ್ರ ಮೋದಿ ಅವರು ಸಂಗೊಳ್ಳಿ ರಾಯಣ್ಣನ ಪ್ರತಿರೂಪವಾಗಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ಬೈ ಎಲೆಕ್ಷನ್ ಪ್ರಚಾರದಲ್ಲಿರುವ ಅವರು ಭೀಮಾ ತೀರದ ಬಗಲೂರು ಗ್ರಾಮದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿದರು. ಸುಳ್ಳು ಹೇಳುವುದರಲ್ಲಿ ಕಾಂಗ್ರೆಸ್ ನಂಬರ್ ಒನ್ ಸ್ಥಾನದಲ್ಲಿದೆ.  ಗೋಣಿ ಚೀಲದಲ್ಲಿ ಯಾರಾದರೂ ದುಡ್ಡು ಹಂಚಿದ್ದಾರೆ ಎಂದು ಸಿದ್ಧರಾಮಯ್ಯ ಮತ್ತು ಡಿ. ಕೆ. ಶಿವಕುಮಾರ […]

ಕಣ್ಣೀರಿಟ್ಟು ಮತ ಕೇಳಿದ ಜೆಡಿಎಸ್ ಅಭ್ಯರ್ಥಿ ನಾಜಿಯಾ, ಅತ್ತೆ ನಸೀಮಾ ಅಂಗಡಿ- ಸಿಂದಗಿಯಲ್ಲಿ ದೇವೆಗೌಡರ ಸಮ್ಮುಖದಲ್ಲಿ ನಡೆದ ಘಟನೆ

ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿ ಬೈ ಎಲೆಕ್ಷನ್ ಚುನಾವಣೆ ಪ್ರಚಾರ ಜೋರಾಗಿದ್ದು, ರಾಜಕೀಯ ಆರೋಪಗಳಿಂದ ನೊಂದ ಜೆಡಿಎಸ್ ಅಭ್ಯರ್ಥಿ ನಾಜಿಯಾ ಶಕೀಲ ಅಂಗಡಿ ಮತ್ತು ಅವರ ಅತ್ತೆ ನಸೀಮಾ ಅಂಗಡಿ ಕಣ್ಣೀರು ಹಾಕಿ ಮತ ಕೆಳಿದ ಪ್ರಸಂಗ ಸಿಂದಗಿಯಲ್ಲಿ ನಡೆದಿದೆ. ಸಿಂದಗಿ ಪಟ್ಟಣದಲ್ಲಿರುವ ರಾಜರಾಜೇಶ್ವರ ಕಲ್ಯಾಣ ಮಂಟಪದಲ್ಲಿ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಅವರ ನೇತೃತ್ವದಲ್ಲಿ ಜೆಡಿಎಸ್ ಮಹಿಳಾ ಸಮಾವೇಶ ಆಯೋಜಿಸಿತ್ತು.  ಈ ಕಾರ್ಯಕ್ರಮದಲ್ಲಿ ನಾನಾ ಸಮುದಾಯಗಳ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಈ ಸಮಾವೇಶದಲ್ಲಿ […]

ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಮುಸ್ಲಿಮರು, ಸಿದ್ಧರಾಮಯ್ಯರನ್ನು ಮಾತ್ರ ಟಾರ್ಗೆಟ್ ಮಾಡುತ್ತಿದ್ದಾರೆ- ಮಾಜಿ ಸಚಿವ ಜಮೀರ್ ಅಹ್ಮದಖಾನ್ ವಾಗ್ದಾಳಿ

ವಿಜಯಪುರ: ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಅವರ ಒಂದು ಕಾಲದ ಶಿಷ್ಯ ಮತ್ತು ಮಾಜಿ ಸಚಿವ ಜಮೀರ್ ಅಹ್ಮದಖಾನ ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಕೇವಲ ಮುಸ್ಲಿಮ್ ಮಾತ್ರವಲ್ಲ ಸಿದ್ಧರಾಮಯ್ಯ ಅವರ ವಿರೋಧಿಯೂ ಆಗಿದ್ದಾರೆ.  ಕುಮಾರಸ್ವಾಮಿಗೆ ಅಲ್ಪ ಸಂಖ್ಯಾತರನ್ನು ಬಲಿ ಮಾಡುವುದೊಂದೆ ಟಾರ್ಗೆಟ್ ಆಗಿದೆ.  ಮುಸ್ಲಿಮರನ್ನು ಮುಗಿಸುವುದು ಅವರ ದುರುದ್ದೇಶವಾಗಿದೆ ಎಂದು ಆರೋಪಿಸಿದರು. ಅಲ್ಪ ಸಂಖ್ಯಾತರ ಜೊತೆ ಸಿದ್ದರಾಮಯ್ಯ ಅವರಿಗೂ ಕುಮಾರಸ್ವಾಮಿ ಟಾರ್ಗೆಟ್ ಮಾಡುತ್ತಿದ್ದಾರೆ.  […]

ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ಸಿಂದಗಿ ತಾಲೂಕಿನಲ್ಲಿ ಭರ್ಜರಿ ರೋಡ್ ಶೋ ಮೂಲಕ ಮತಯಾಚನೆ- ಕಾಂಗ್ರೆಸ್ ವಿರುದ್ಧ ವಾಗ್ದಾಳಿ

ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿ ಬೈ ಎಲೆಕ್ಷನ್ ನಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಪರ ಪ್ರಚಾರಕ್ಕಾಗಿ ಎರಡನೇ ಬಾರಿ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮೊದಲಿಗೆ ಕನ್ನೊಳ್ಳಿ, ನಂತರ ಕೊಕಟನೂರ ಗ್ರಾಮಗಳಲ್ಲಿ ಭರ್ಜರಿ ರೋಡ್ ಶೋ ಮೂಲಕ ಪ್ರಚಾರ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಜೆಡಿಬಿಗಳ ಮೇಲೆ ನಿಂತು ಸಿಎಂ ರೋಡ್ ಶೋ ನಡೆಸುತ್ತಿದ್ದ ವಾಹನಗಳ ಮೇಲೆ ಹೂಮಳೆ ಸುರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ಸಿನವರು ಸೋಲಿನ ಹತಾಶೆಯಲ್ಲಿ ಸುಳ್ಳು […]