ಎಂ ಎಲ್ ಸಿ ಅರುಣ ಶಹಾಪುರ, ಸಿ. ಟಿ. ರವಿ, ಅಪ್ಪು ಪಟ್ಟಣಶೆಟ್ಟಿ ಅವರಿಂದ ಸಿಂದಗಿ ಮತಕ್ಷೇತ್ರದಲ್ಲಿ ಬಿರುಸಿನ ಪ್ರಚಾರ

ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿ ಬೈ ಎಲೆಕ್ಷನ್ ಪ್ರಚಾರ ಬಿರುಸಿನಿಂದ ಸಾಗಿದ್ದು, ಬಿಜೆಪಿ ಮುಖಂಡರ ದಂಡು ಕ್ಷೇತ್ರಾದ್ಯಂತ ಬಿರುಸಿನ ಪ್ರಚಾರ ಕೈಗೊಂಡಿದೆ.

ಸಿಂದಗಿ ಪಟ್ಟಣದಲ್ಲಿ ನಡೆದ ಬೃಹತ್ ರೋಡ್ ಶೋ ನಲ್ಲಿ ವಿಧಾನ ಪರಿಷತ ಬಿಜೆಪಿ ಸದಸ್ಯ ಅರುಣ ಶಹಾಪುರ, ಮಾಜಿ ಸಚಿವ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ, ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿಸೇರಿದಂತೆ ನಾನಾ ಮುಖಂಡರು ತೆರೆದ ವಾಹನದಲ್ಲಿ ಭರ್ಜರಿ ಪ್ರಚಾರ ನಡೆಸಿದರು.

ಸಿಂದಗಿ ಪಟ್ಟಣದಲ್ಲಿರುವ ಶ್ರೀ ಸಂಗಮೇಶ್ವರ ದೇವಸ್ಥಾನದಿಂದ ಆರಂಭವಾದ ರೋಡ್ ಶೋ ಸಿಂದಗಿ ಪಟ್ಟಣದ ಪ್ರಮುಖ ರಸ್ತೆಗಲಲ್ಲಿ ಮತ್ತು ಮಾರುಕಟ್ಟೆಯಲ್ಲಿ ಸಂಚರಿಸಿತು.  ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು ಬಿಜೆಪಿ ಅಭಫ್ಯರ್ಥಿ ರಮೇಶ ಭೂಸನೂರ ಪರ ಮತ ಯಾಚಿಸಿದರು.

ಅರುಣ ಶಹಾಪುರ ಮತ್ತು ಅಪ್ಪು ಪಟ್ಟಣಶೆಟ್ಟಿ ಬೈ ಎಲೆಕ್ಷನ್ ಪ್ರಚಾರ ಆರಂಭವಾದಾಗಿನಿಂದ ಸಿಂದಗಿ ಕ್ಷೇತ್ರದಲ್ಲಿ ಪ್ರತಿನಿತ್ಯ ಪ್ರಚಾರ ಮುಂದುವರೆಸಿದ್ದು ಗಮನಾರ್ಹವಾಗಿದೆ.

ಈ ರೋಡ್ ಶೋ ನಲ್ಲಿ ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪುರ ಸೇರಿದಂತೆ ನಾನಾ ಮುಖಂಡರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌