ಕಾಂಗ್ರೆಸ್ ನಾಯಕರಾದ ಕಾಂತಾ ನಾಯಕ, ಬಾಪುಗೌಡ ಪಾಟೀಲ ಮುಂತಾದವರಿಂದ ಸಿಂದಗಿ ಮತಕ್ಷೇತ್ರದಲ್ಲಿ ಬಿರುಸಿನ ಪ್ರಚಾರ

ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿ ಬೈ ಎಲೆಕ್ಷನ್ ಪ್ರಚಾರ ಬಿರುಸಿನಿಂದ ಸಾಗಿದ್ದು, ಕಾಂಗ್ರೆಸ್ ನಾಯಕರು ಸಿಂದಗಿ ಮತಕ್ಷೇತ್ರಾದ್ಯಂತ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ.

ಮಾಜಿ ಸಚಿವ ಮತ್ತು ಹೂವಿನ ಹಡಗಲಿ ಶಾಸಕ ಪಿ. ಟಿ. ಪರಮೇಶ್ವರ ನಾಯಕ, ಹಗರಿಬೊಮ್ಮನಹಳ್ಳಿ ಶಾಸಕ ಭೀಮಾ ನಾಯಕ, ವಿಧಾನ ಪರಿಷತ ಸದಸ್ಯ ಪ್ರಕಾಶ ರಾಠೋಡ, ಶಿವಕಾಂತಮ್ಮ ನಾಯಕ ಸೇರಿದಂತೆ ನಾನಾ ಮುಖಂಡರು ಸಿಂದಗಿ.ತಾಂಡಾ ಮತ್ತು ದೇವರ ನಾವದಗಿ ತಾಂಡಾಗಳಲ್ಲಿ ಬಿರುಸಿನ ಪ್ರಚಾರ ಕೈಗೊಂಡರು.

ವಿಜಯಪುರ ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಬಾಪುಗೌಡ ಎಂ. ಪಾಟೀಲ(ವಡವಡಗಿ) ಅವರು ಸಿಂದಗಿ ತಾಲೂಕಿನ ಕೊಕಟನೂರ ಗ್ರಾಮದಲ್ಲಿ ಮನೆ ಮನೆಗೆ ತೆರಳಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಪರ ಮಾತ ಯಾಚಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯದರ್ಶಿ ಮಂಜುನಾಥ್ ಬುದ್ದಿ, ಶಾಂತವೀj, ಹೂವಿನ ಹಿಪ್ಪರಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಾಳಾಸಾಹೇಬಗೌಡ ಪಾಟೀಲ, ಸಿಂದಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇರ್ಫಾನ್ ಮುಲ್ಲಾ ಮುಂತಾದವರು ಉಪಸ್ಥಿತರಿದ್ದರು.

 

Leave a Reply

ಹೊಸ ಪೋಸ್ಟ್‌