ಸಿಂದಗಿ ಬೈ ಎಲೆಕ್ಷನ್- ಮಸ್ಟರಿಂಗ್, ಡಿ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ, ಇಂಡಿ ಉಪವಿಭಾಗಾಧಿಕಾರಿ ರಾಹುಲ್ ಸಿಂಧೆ, ಸಿಂದಗಿ ತಹಸೀಲ್ದಾರ ಸಂಜೀವಕುಮಾರ ದಾಸರ ಭೇಟಿ, ಪರಿಶೀಲನೆ

ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿ ಬೈ ಎಲೆಕ್ಷನ್ ಸಂಬಂಧಿಸಿದಂತೆ ಸಿಂದಗಿ ಪಟ್ಚಣದ ಆರ್. ಡಿ  ಪಾಟೀಲ ಕಾಲೇಜಿನ ಮಸ್ಟರಿಂಗ್ ಮತ್ತು ಡಿ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. 

ಈ ಚುನಾವಣೆಯಲ್ಲಿ ಸುವ್ಯವಸ್ಥಿತವಾಗಿ ಮತದಾನ ಪ್ರಕ್ರಿಯೆ ನಡೆಸಲು ಸಕಲ ರೀತಿಯಿಂದ ಸಿದ್ಧತೆ ಕೈಗೊಳ್ಳಲಾಗಿದ್ದು, ಕರ್ತವ್ಯಕ್ಕೆ ನಿಯೋಜಿಸಲಾಗಿರುವ ಮತಗಟ್ಟೆ ಸಿಬ್ಬಂದಿಗಳಿಗೆ ಕಲ್ಪಿಸಲಾಗಿರುವ ಊಟ ಮತ್ತು ಉಪಹಾರದ ವ್ಯವಸ್ಥೆ ಸೇರಿದಂತೆ ಇತರ ವ್ಯವಸ್ಥೆಗಳ ಬಗ್ಗೆ ಜಿಲ್ಲಾಧಿಕಾರಿಗಳು ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಚುನಾವಣೆಗೆ ನಿಯೋಜಿತ ಸಿಬ್ಬಂದಿಗಳಿಗೆ ಕಲ್ಪಿಸಲಾದ ವ್ಯವಸ್ಥೆಗಳು ಮತ್ತು ಉಪಹಾರದ ವ್ಯವಸ್ಥೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಪಿ. ಸುನೀಲಕುಮಾರ, ಚುನಾವಣೆ ವ್ಯವಸ್ಥಿತ ರೀತಿಯಲ್ಲಿ ನಡೆಯುವಂತೆ ನೋಡಿಕೊಳ್ಳಲು ಎಲ್ಲ ಸಿಬ್ಬಂದಿಗಳು ಸಿದ್ಧರಾಗಿದ್ದಾರೆ ಎಂದು ಅಲ್ಲಿ ಕಲ್ಪಿಸಿದ ವ್ಯವಸ್ಥೆಗಳನ್ನು ಶ್ಲಾಘಿಸಿದರು.

ಈ ಸಂದರ್ಭದಲ್ಲಿ ಚುನಾವಣಾಧಿಕಾರಿ ಮತ್ತು ಇಂಡಿ ಉಪವಿಭಾಗಾಧಿಕಾರಿ ರಾಹುಲ ಸಿಂಧೆ, ಸಿಂದಗಿ ತಹಸೀಲ್ದಾರ ಸಂಜೀವಕುಮಾರ ದಾಸರ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌