ಜೀವನದುದ್ದಕ್ಕೂ ಕನ್ನಡವನ್ನು ಪ್ರೀತಿಸುತ್ತ ಕನ್ನಡಾಂಬೆಯ ಸೇವೆ ಮಾಡೋಣ- ಸಚಿವೆ ಶಶಿಕಲಾ ಜೊಲ್ಲೆ

ವಿಜಯಪುರ: ಎಲ್ಲರೂ ನಮ್ಮ ದೀವನದುದ್ದಕ್ಕೂ ಕನ್ನವನ್ನು ಪ್ರೀತಿಸೋಣ.  ಕನ್ನಡಾಂಬೆಯ ಸೇವೆ ಮಾಡೋಣ ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಕರೆ ನೀಡಿದ್ದಾರೆ. ವಿಜಯಪುರದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ 66ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿದ ಅವರು, ನಂತರ ನಾನಾ ಪದಾತಿ ದಳಗಳನ್ನು ವೀಕ್ಷಿಸಿ ಗೌರವ ವಂದನೆ ಸ್ವೀಕರಿಸಿದರು. ಬಳಿಕ ಮಾತನಾಡಿದ ಅವರು, ಕನ್ನಡ ಬರೀ ಭಾಷೆ ಅಲ್ಲ. ಅದು ನಮ್ಮ ಬದುಕು, ಸಂಸ್ಕೃತಿ, ಪರಂಪರೆ. ವಿವಿಧ ಸಂಸ್ಕೃತಿಗಳ ತವರೂರು ನಮ್ಮ ಕರುನಾಡು. […]

ವಿಜಯಪುರದ ಕಾಲೇಜಿಗೆ ಪ್ಲಾಸ್ಚಿಕ್ ಮುಕ್ತ ಕ್ಯಾಂಪಸ್ ಗರಿ- ಆ ಕಾಲೇಜು ಯಾವುದು ಗೊತ್ತಾ?

ವಿಜಯಪುರ: ಬಸವ ನಾಡಿನ ವಿಜಯಪುರ ನಗರದ ಕಾಲೇಜಿಗೆ ಈ ಬಾರಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಪ್ಲಾಸ್ಟಿಕ್ ಮುಕ್ತ ಆವರಣ ಪ್ರಶಸ್ತಿ ಲಭಿಸಿದೆ. ವಿಜಯಪುರ ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಮತ್ತು ಅತಿ ಹೆಚ್ಚು ವಿದ್ಯಾರ್ಥಿಗಳ ಸಂಖ್ಯೆ ಹೊಂದಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಛತ್ರಪತಿ ಶಿವಾಜಿ ಮಹಾರಾಜರ ಎಜ್ಯುಕೇಷನ್ ಸೊಸೈಟಿಯ ಶ್ರೀ ರವೀಂದ್ರನಾಥ ಠಾಗೋರ್ ಶಾಲೆ ಮತ್ತು ಕಾಲೇಜಿಗೆ ಕರ್ನಾಟಕ ರಾಜ್ಯೋತ್ಸವವದ ‌ಅಂಗವಾಗಿ ಪ್ಲಾಸ್ಟಿಕ್ ಮುಕ್ತ ಶಾಲೆ ಆವರಣ ಪ್ರಶಸ್ತಿ ಲಭಿಸಿದೆ. ‌ವಿಜಯಪುರ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು […]

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಮುಂದಿನ ಬಜೆಟ್ ನಲ್ಲಿ ರೂ. 3000 ಕೋ. ವಿಶೇಷ ಅನುದಾನ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಮುಂದಿನ ಬಜೆಟ್ನಲ್ಲಿ 3 ಸಾವಿರ ಕೋಟಿ ರೂಪಾಯಿ ವಿಶೇಷ ಅನುದಾನ ಒದಗಿಸಲಾಗುವುದು, ಕಿತ್ತೂರು ಕರ್ನಾಟಕದ ಅಭಿವೃದ್ಧಿ ಹಾಗೂ ಹಳೆಯ ಮೈಸೂರು ಭಾಗದ ನೀರಾವರಿ  ಯೋಜನೆಗಳನ್ನು ಪೂರ್ಣಗೊಳಿಸಲು ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಕಂಠೀರವ ಕ್ರೀಡಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ ಇವರ ವತಿಯಿಂದ ಆಯೋಜಿಸಿದ್ದ 66 ನೇ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ತಾಯಿ ಭುವನೇಶ್ವರಿಗೆ ಪುಷ್ಪ ನಮನ ಸಲ್ಲಿಸಿ ಮತ್ತು ಧ್ವಜಾರೋಹಣ […]

ಸಿಂದಗಿ ಬೈ ಎಲೆಕ್ಷನ್: ಮಂಗಳವಾರ ನಡೆಯುವ ಮತ ಎಣಿಕೆಗೆ ಎಲ್ಲ ಸಿದ್ಧತೆ- ಸೈನಿಕ ಶಾಲೆ ಕೇಂದ್ರಕ್ಕೆ ವಿಜಯಪುರ ಡಿಸಿ, ಎಸ್ಪಿ, ಜಿಪಂ ಸಿಇಓ ಭೇಟಿ, ಪರಿಶೀಲನೆ

ವಿಜಯಪುರ: ತೀವ್ರ ಕುತೂಹಲ ಕೆರಳಿಸಿರುವ ವಿಜಯಪುರ ಜಿಲ್ಲೆಯ ಸಿಂದಗಿ ಬೈ ಎಲೆಕ್ಷನ್ ಮತ ಎಣಿಗೆಕೆ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಕೈಗೊಂಡಿದೆ.  ಈಗಾಗಲೇ ಮತಪೆಟ್ಟಿಗೆಗೆಳನ್ನು ವಿಜಯಪುರ ನಗರದ ಸೈನಿಕ ಶಾಲೆಯ ಅವರಣದಲ್ಲಿರುವ ಮತ ಎಣಿಕೆ ಕೇಂದ್ರಕ್ಕೆ ತರಲಾಗಿದ್ದು, ಕೊಠಡಿಗಳಲ್ಲಿ ಭದ್ರವಾಗಿ ಇಡಲಾಗಿದೆ.  ವಿಜಯಪುರ ನಗರದ ಸೈನಿಕ ಶಾಲೆಯ ಒಡೆಯರ ಸದನದಲ್ಲಿ ಮತ ಎಣಿಕೆ ನಡೆಯಲಿದೆ.  ಈ ಹಿನ್ನೆಲೆಯಲ್ಲಿ ಮತ ಎಣಿಕೆ ಕೇಂದ್ರ ಸುತ್ತಮುತ್ತ ಬಿಗೀ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.  ಮಂಗಳವಾರ ಮತಎಣಿಕೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲಾಧಿಕಾರಿ […]