ಬಿಜೆಪಿ ನಾಯಕರು, ಕಾರ್ಯಕರ್ತರು, ಪದಾಧಿಕಾರಿಗಳ ಶಿಸ್ತುಬದ್ಧ ಕೆಲಸದಿಂದಾಗಿ ಸಿಂದಗಿಯಲ್ಲಿ ನಿರೀಕ್ಷೆಗೂ ಮೀರಿ ಗೆಲುವು ಸಿಕ್ಕಿದೆ- ಸಚಿವೆ ಶಶಿಕಲಾ ಜೊಲ್ಲೆ

ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿ ಬೈ ಎಲೆಕ್ಷನ್ ನಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರು, ಪದಾಧಿಕಾರಿಗಳ ಶಿಸ್ತುಬದ್ಧ ಕೆಲಸದಿಂದಾಗಿ ನಿರೀಕ್ಷೆಗೂ ಮೀರಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಗೆಲುವು ಸಾಧಿಸಿದ್ದಾರೆ ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಸಿಂದಗಿ ಬೈ ಎಲೆಕ್ಷನ್ ನಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ 20 ರಿಂದ 25 ಸಾವಿರ ಮತಗಳಿಂದ ಗೆಲ್ಲುತ್ತಾರೆ ಎಂಬ ಅಂದಾಜಿತ್ತು.  ಸಿಂದಗಿ ಮತಕ್ಷೇತ್ರದ ಎಲ್ಲ ಮತದಾರ ಬಂಧು-ಭಗೀನಿಯರು ಬಹಳಷ್ಟು […]

ಕಾಂಗ್ರೆಸ್ ಮತದಾರರ ತೀರ್ಪನ್ನು ಗೌರವಿಸುತ್ತದೆ- ಕೆಪಿಸಿಸಿ ಸದಸ್ಯ ಸಂಗಮೇಶ ಬಬಲೇಶ್ವರ

ವಿಜಯಪುರ: ಕಾಂಗ್ರೆಸ್ ಪಕ್ಷ ಸದಾ ಜನರ ತೀರ್ಪನ್ನು ಗೌರವಿಸುತ್ತದೆ ಎಂದು ಕೆಪಿಸಿಸಿ ಸದಸ್ಯ ಸಂಗಮೇಶ ಬಬಲೇಶ್ವರ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಿಂದಗಿ ಬೈ ಎಲೆಕ್ಷನ್ ನಲ್ಲಿ ಗೆಲುವಿನ ನಿರೀಕ್ಷೆಯನ್ನು ಇಟ್ಟುಕೊಂಡಿದ್ದೇವು.  ಆದರೆ ಜನರು ವ್ಯತಿರಿಕ್ತ ತೀರ್ಪನ್ನು ನೀಡಿದ್ದಾರೆ.  ಕಾಂಗ್ರೆಸ್ ಪಕ್ಷ ಸದಾ ಜನರ ತೀರ್ಪನ್ನು ಗೌರವಿಸುತ್ತದೆ. ಸೋಲಿನ ಆತ್ಮಾವಲೋಕನ ಮಾಡಿಕೊಂಡು ಇಂದಿನಿಂದಲೇ ಪಕ್ಷ ದ ಸಂಘಟನೆಯಲ್ಲಿ ತೊಡಗುತ್ತೇವೆ ಎಂದು ತಿಳಿಸಿದ್ದಾರೆ. ಪಕ್ಷದ ಅಭ್ಯರ್ಥಿಯ ಪರವಾಗಿ ಹಗಲಿರುಳೆನ್ನದೇ ಶ್ರಮ ವಹಿಸಿ ಕೆಲಸ ಮಾಡಿದ […]

ಸಿಂದಗಿ ಬೈ ಎಲೆಕ್ಷನ್ ನಲ್ಲಿ ನಮ್ಮ ನಿರೀಕ್ಷೆ ಹುಸಿಯಾಗಿದೆ ದುಡ್ಡು ಪ್ರಭಾವ ಬೀರಿದೆ- ಶಾಸಕ ಶಿವಾನಂದ ಪಾಟೀಲ

ವಿಜಯಪುರ: ಸಿಂದಗಿ ಬೈ ಎಲೆಕ್ಷನ್ ಚುನಾವಣೆಯಲ್ಲಿ ನಮ್ಮ ನಿರೀಕ್ಷೆ ಹುಶಿಯಾಗಿದೆ ಎಂದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಕಾಂಗ್ರೆಸ್ ಶಾಸಕ ಮತ್ತು ಮಾಜಿ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ನಾವು ಈ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತೇವೆ ಎಂಬ ಆಶಾಭಾವನೆಯಿಂದ ಸಾಮೂಹಿಕ ಹೋರಾಟ ಮಾಡಿದ್ದೇವು.  ಆದರೆ, ನಾವು ನಿರೀಕ್ಷಿತ ಮಟ್ಟದಲ್ಲಿ ಮತ ಪಡೆಯಲಿಲ್ಲ.  ಆದರೆ, ಆ ಕ್ಷೇತ್ರದ ಜನ ಅಭೂತಪೂರ್ವ ಬೆಂಬಲ ಸೂಚಿಸಿದ್ದಾರೆ.  ಕಳೆದ ನಾಲ್ಕು ಚುನಾವಣೆಯಲ್ಲಿ ಕಾಂಗ್ರೆಸ್ 20 ರಿಂದ 25 ಸಾವಿರ […]

ಸಿಂದಗಿ ಬೈ ಎಲೆಕ್ಷನ್ 2023ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ 140 ಸ್ಥಾನ ಗೆಲ್ಲಲು ದಿಕ್ಸೂಚಿಯಾಗಲಿದೆ- ಮಾಜಿ ಡಿಸಿಎೞ ಲಕ್ಷ್ಮಣ ಸವದಿ

ವಿಜಯಪುರ: ಸಿಂದಗಿ ಬೈ ಎಲೆಕ್ಷನ್ ನಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಭರ್ಜರಿ ಗೆಲುವು ಸಾಧಿಸಿರುವುದಕ್ಕೆ ಮಾಡಿ ಡಿಸಿಎಂ ಮತ್ತು ಸಿಂದಗಿ ಬೈ ಎಲೆಕ್ಷನ್ ಬಿಜೆಪಿ ಉಸ್ತುವಾರಿ ಲಕ್ಷ್ಮಣ ಸವದಿ ಹರ್ಷ ವ್ಯಕ್ತಪಡಿಸಿದ್ದು, ಈ ಮತಕ್ಷೇತ್ರದ ಜನರ ಬೇಡಿಕೆಗಳನ್ನು ಈಡೇರಿಸುವುದಾಗಿ ತಿಳಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಸಿಂದಗಿ ಮತಕ್ಷೇತ್ರದ ಮತದಾರರನ್ನು ಖುಷಿ ಪಡಿಸುವ ಕೆಸಸವನ್ನು ಮಾಡುತ್ತೇವೆ.  2023ಕ್ಕೆ ಮತ್ತೆ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವಂಥ ಮನಸ್ಸನ್ನು ಪರಿವರ್ತನೆ ಮಾಡುವ ಕೆಲಸವನ್ನು ಮಾಡುತ್ತೇವೆ.  ಇದು 2023ರ ಸಾರ್ವತ್ರಿಕ ಚುನಾವಣೆಗೆ ದಿಕ್ಸೂಚಿಯಲ್ಲ.  […]

ಸೋಲನ್ನು ವಿನಮ್ರವಾಗಿ ಸ್ವೀಕರಿಸುತ್ತೇನೆ ಎಂದ ಸಿಂದಗಿ ಬೈ ಎಲೆಕ್ಷನ್ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ

ವಿಜಯಪುರ: ಸಿಂದಗಿ ಬೈ ಎಲೆಕ್ಷನ್ ಫಲಿತಾಂಶ ಹೊರ ಬಂದಿದೆ.  31 ಸಾವಿರ ಮತಗಳ ಅಂತರದಿಂದ ಸೋಲು ಕಂಡಿದ್ದೇನೆ.  ಈ ಸೋಲನ್ನು ನಮ್ರವಾಗಿ ಸ್ವೀಕರಿಸುತ್ತೇನೆ ಎಂದು ಈ ಚುನಾವಣೆಯಲ್ಲಿ ಸೋಲು ಅನುಭವಿಸಿದ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ತಮ್ಮ ಸೋಲನ್ನು ಸ್ವೀಕರಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಸಿಂದಗಿ ಮತಕ್ಷೇತ್ರದ ಮತದಾರ ಪ್ರಭುಗಳಿಗೆ ಹೃದಯ ಪೂರ್ವಕವಾಗಿ ಕೃತಜ್ಞತೆ ಸಲ್ಲಿಸುತ್ತೇನೆ.  ನನ್ನ ಪರವಾಗಿ ಮತ ಹಾಕಿದ 63 ಸಾವಿರ ಮತದಾರರು, ನನ್ನ ವಿರುದ್ಧವಾಗಿ ಮತ ಹಾಕಿದ 90 ಸಾವಿರ ಮತದಾರರಿಗೆ ಸೇರಿ […]

25 ಸಾವಿರ ಮತಗಳ ಅಂತರ ನಿರೀಕ್ಷಿಸಿದ್ದೆ- ಒಂದು ವಾರದಲ್ಲಿ ಎಲ್ಲ ನಾಯಕರನ್ನು ಕರೆಯಿಸಿ ವಿಜಯೋತ್ಸವ ಮಾಡುತ್ತೇವೆ ಎಂದ ಸಿಂದಗಿ ನೂತನ ಶಾಸಕ ರಮೇಶ ಭೂಸನೂರ

ವಿಜಯಪುರ: ಸಿಂದಗಿ ಬೈ ಎಲೆಕ್ಷನ್ ನಲ್ಲಿ 25 ಸಾವಿರ ಮತಗಳ ಅಂತರ ನಿರೀಕ್ಷೆ ಮಾಡಿದ್ದೆ.  ಆದರೆ, ನಿರೀಕ್ಷೆಗೂ ಮೀರಿ ಜನ ತಮಗೆ ಭಾರಿ ಅಂತರದಿಂದ ಗೆಲ್ಲಿಸಿದ್ದಾರೆ.  ಚುನಾವಣೆಯಲ್ಲಿ ಪ್ರಚಾರ ಕೈಗೊಂಡ ಎಲ್ಲ ಬಿಜೆಪಿ ನಾಯಕರನ್ನು ಕರೆಯಿಸಿ ವಿಜಯೋತ್ಸವ ಮಾಡುವುದಾಗಿ ಸಿಂದಗಿ ನೂತನ ಬಿಜೆಪಿ ಶಾಸಕ ರಮೇಶ ಭೂಸನೂರ ತಿಳಿಸಿದ್ದಾರೆ. ವಿಜಯಪುರದಲ್ಲಿ ಚುನಾವಣೆ ಗೆಲುವಿನ ಸಂದರ್ಭದಲ್ಲಿ ಮಾತನಾಡಿದ ಅವರು, ತಮ್ಮ ಗೆಲುವಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ ಕುಮಾರ ಕಟೀಲ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಉಸ್ತುವಾರಿ ಲಕ್ಷ್ಮಣ ಸವದಿ, ವಿ. […]

ಸಿಂದಗಿ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಗೆ 31085 ಮತಗಳ ಅಂತರದ ಭಾರಿ ಗೆಲುವು

ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿ ಬೈ ಎಲೆಕ್ಷನ್ ನಲ್ಲಿ ನಿರೀಕ್ಷೆಯಂತೆ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. 30 ಸಾವಿರ ಮತಗಳ ಭಾರಿ ಗೆಲುವು ಸಾಧಿಸಿರುವುದು ಅಚ್ಚರಿ ಮೂಡಿಸಿದೆ. ಬೆ. 8 ಗಂಟೆಗೆ ಆರಂಭವಾದ ಮತ ಎಣಿಕೆಯ ಮೊದಲ ಸುತ್ತಿನಿಂದಲೂ ಬಿಜೆಪಿ ಅಭ್ಯರ್ಥಿ ಭಾರಿ ಮುನ್ನಡೆ ಕಾಯ್ದುಕೊಂಡು ಭರ್ಜರಿ ಗೆಲುವು ಸಾಧಿಸಿದ್ದಾರೆ. ಮತ ಎಣಿಕೆ ಸುತ್ತುಗಳಲ್ಲಿ ಬಹುತೇಕ ಮುನ್ನಡೆ ಕಾಯ್ದುಕೊಂಡು ಗೆಲುವಿಮ ನಗೆ ಬೀರಿದರು. ಅಂತಿಮವಾಗಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಒಟ್ಟು ಚಲಾವಣೆಯಾದ ಮತಗಳಲ್ಲಿ ಶೇ. 50ಕ್ಕೂ […]

ಸಿಂದಗಿ ಬೈ ಎಲೆಕ್ಷನ್: 6ನೇ ಸುತ್ತು: ಬಿಜೆಪಿ ಮತಗಳಿಂದ ಭಾರಿ ಮುನ್ನಡೆ

ವಿಜಯಪುರ:ವಿಜಯಪುರ ಜಿಲ್ಲೆಯ ಸಿಂದಗಿ ಬೈ ಎಲೆಕ್ಷನ್ ನಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಭಾರಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ವಿಜಯಪುರ ಸೈನಿಕ ಶಾಲೆಯಲ್ಲಿ ಮತ ಎಣಿಕೆ ಕಾರ್ಯ ಭರದಿಂದ ಸಾಗಿದೆ. ವಿಜಯಪುರ ನಗರದ ಸೈನಿಕ ಶಾಲೆ ಆವರಣದ ಒಡೆಯರ್ ಹೌಸ್ ನಲ್ಲಿ ನಡೆಯುತ್ತಿರುವ ಮತ ಎಣಿಕೆಯಲ್ಲಿ ಮೊದಲನೆಯ ಸುತ್ತಿನಿಂದ ನಾಲ್ಕನೇ ಸುತ್ತಿನವರೆಗೂ ಬಿಜೆಪಿ ಅಭ್ಯರ್ಥಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ-27791, ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ- 16160 ಹಾಗೂ ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿ ಜೆಡಿಎಸ್-941 […]

ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಭಾರಿ ಮುನ್ನಡೆ

ವಿಜಯಪುರ:ವಿಜಯಪುರ ಜಿಲ್ಲೆಯ ಸಿಂದಗಿ ಬೈ ಎಲೆಕ್ಷನ್ ನಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಭಾರಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ವಿಜಯಪುರ ಸೈನಿಕ ಶಾಲೆಯಲ್ಲಿ ಮತ ಎಣಿಕೆ ಕಾರ್ಯ ಭರದಿಂದ ಸಾಗಿದೆ. ವಿಜಯಪುರ ನಗರದ ಸೈನಿಕ ಶಾಲೆ ಆವರಣದ ಒಡೆಯರ್ ಹೌಸ್ ನಲ್ಲಿ ನಡೆಯುತ್ತಿರುವ ಮತ ಎಣಿಕೆಯಲ್ಲಿ ಮೊದಲನೆಯ ಸುತ್ತಿನಿಂದ ಐದನೇ ಸುತ್ತಿನವರೆಗೂ ಬಿಜೆಪಿ ಅಭ್ಯರ್ಥಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ-23314, ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ- 13563 ಹಾಗೂ ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿ ಜೆಡಿಎಸ್-710 […]