ದೀಪಾವಳಿಯ ದಿನ ಮತ್ತೆ ಕಂಪಿಸಿದ ಭೂಮಿ ರಾತ್ರಿ 8.26 ಕ್ಕೆ ಮನೆಯಿಂದ ಹೊರಗೋಡಿ ಬಂದ ಜನ- ಎಲ್ಲಿ ಗೊತ್ತಾ?

ವಿಜಯಪುರ: ದೀಪಾವಳಿ ಹಬ್ಬದ ಸಂಭ್ರಮದಲ್ಲಿದ್ದ ಜನರಿಗೆ ಭೂಮಿ ಕಂಪಿಸುವ ಮೂಲಕ ಶಾಕ್ ನೀಡಿದ ಘಟನೆ ರಾತ್ರಿ 8.26 ಕ್ಕೆ ನಡೆದಿದೆ.

ವಿಜಯಪುರ ಜಿಲ್ಲೆಯ ತಿಕೋಟಾ  ತಾಲೂಕಿನ ಕಳ್ಳಕವಟಗಿ, ಘೋಣಸಗಿ, ಸೋಮದೇವರಹಟ್ಟಿ, ಮಲಕನದೇವರಹಟ್ಟಿ, ಹುಬನೂರ, ಟಕ್ಕಳಕಿ ಗ್ರಾಮಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ.

ಮೊದಲಿಗೆ ಜೋರಾಗಿ ಶಬ್ದ ಕೇಳಿ ಬಂದಿದ್ದು, ನಂತರ ಭೂಮಿ ಕಂಪಿಸಿದ ಅನುಭವವಾಗಿದೆ.  ಆಗ ಗಾಬರಿಯಾದ ಜನರು ಹೊರಗೆ ಓಡಿ ಬಂದಿದ್ದಾರೆ.  ಅತಿ ಹೆಚ್ಚು ಶಬ್ದ ಭೂಮಿಯಿಂದ ಬಂದ ಅನುಭವಾಗಿದ್ದು, ದೀಪಾವಳಿ ಸಂಭ್ರಮದಲ್ಲಿರುವ ಈ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

ಇದು ಭೂಕಂಪ ಹೌದೋ ಅಥವಾ ಅಲ್ಲ ಎಂಬುದನ್ನು ವಿಜಯಪುರ ಜಿಲ್ಲಾಡಳಿತ ಇನ್ನಷ್ಟೇ ಖಚಿತ ಪಡಿಸಬೇಕಿದೆ.

Leave a Reply

ಹೊಸ ಪೋಸ್ಟ್‌