ಸಿಎಂ ಭೇಟಿ ಮಾಡಿದ ಸಿಂದಗಿ ಶಾಸಕ ರಮೇಶ ಭೂಸನೂರ

ಬೆಂಗಳೂರು: ವಿಜಯಪುರ ಜಿಲ್ಲೆಯ ಸಿಂದಗಿ ಶಾಸಕರಾಗಿ ಬೈ ಎಲೆಕ್ಷನ್ ನಲ್ಲಿ ಗೆಲುವು ಸಾಧಿಸಿದ ರಮೇಶ ಭೂಸನೂರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದ್ದಾರೆ.

ಬೆಂಗಳೂರಿಗೆ ತೆರಳಿದ ಅವರು, ಸಿಎಂ ನಿವಾಸದಲ್ಲಿ ಭೇಟಿ ಮಾಡಿ ತಮ್ಮ ಗೆಲುವಿಗೆ ಸಹಕರಿಸಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿದರು. ಅಲ್ಲದೇ, ಹನುಮಂತ ದೇವರ ಭಾವಚಿತ್ರ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಸಚಿವ ಕೆ. ಎಸ್. ಈಶ್ವರಪ್ಪ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಮತ್ತು ಇತರರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌