ಐತಿಹಾಸಿಗ ನಗರದಲ್ಲಿರುವ ಪ್ರಾಚೀನ ಸ್ಮಾರಕಗಳನ್ನು ವೀಕ್ಷಿಸಿದ ರಾಜ್ಯಪಾಲ ಥಾವರಚಂದ ಗೆಹ್ಲೋಟ

ವಿಜಯಪುರ: ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಎರಡು ದಿನಗಳ ವಿಜಯಪುರ ಜಿಲ್ಲಾ ಪ್ರವಾಸಕ್ಕೆ ಆಗಮಿಸಿದ್ದಾರೆ.

ಮಧ್ಯಾಹ್ನ ಐತಿಹಾಸಿಕ ವಿಜಯಪುರ ನಗರಕ್ಕೆ ಭೇಟಿ ನೀಡಿದ ಅವರು, ವಿಶ್ವವಿಖ್ಯಾತ ಗೋಳಗುಮ್ಮಟವನ್ನು ವೀಕ್ಷಿಸಿದರು.  ಗೋಳಗುಮ್ಮಟ ಆವರಣದಲ್ಲಿರುವ ವಸ್ತು ಸಂಗ್ರಹಾಲಯ ವೀಕ್ಷಿಸಿದ ಅವರು ಟೂರಿಸ್ಟ್ ಗೈಡ್ ರಾಜಶೇಖರ ಕಲ್ಯಾಣಮಠ ಅವರಿಂದ ಮಾಹಿತಿ ಪಡೆದರು.

ಬಳಿಕ ಬಾರಾ ಕಮಾನ್ ಸ್ಮಾರಕ್ಕೆ ಭೇಟಿ ನೀಡಿದ ಅವರು, ಈ ಸ್ಮಾರಕದ ಬಗ್ಗೆ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನಿಲ ಕುಮಾರ ಪಿ., ಎಸ್ಪಿ ಎಚ್. ಡಿ. ಆನಂದ ಕುಮಾರ, ಜಿ. ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ಸೇರಿದಂತೆ ನಾನಾ ಅಧಿಕಾರಿಗಳು ಉಪಸ್ಥಿತರಿದ್ದರು.

 

Leave a Reply

ಹೊಸ ಪೋಸ್ಟ್‌