ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ವಿಶೇಷ ಲೇಖನ

ಡಾ. ರವಿ ಎಸ್.ಕೋಟೆಣ್ಣವರ,  ಹೋಮಿಯೋಪಥಿ ಖ್ಯಾತ ತಜ್ಞರು. ವಿಜಯಪುರ: ಮಧುಮೇಹ ಅಥವಾ ಸಕ್ಕರೆ  ರೋಗ ಎನ್ನುವುದು ಬಹಳ. ಪುರಾತನವಾದ ಖಾಯಿಲೆ.  ಅತಿಯಾದ ಮೂತ್ರ ವಿಸರ್ಜಿಸುವ ರೋಗ ಎಂದು ಕೂಡ ಕರೆಯಲಾಗುವುದು. ಪ್ರಾಚೀನ ಭಾರತೀಯ ಚರಕ ಸಂಹಿತೆ, ಸುಶ್ರುತ ಸಂಹಿತೆಗಳಲ್ಲಿಯೂ ಈ ರೋಗದ ಸ್ಥಿತಿಯನ್ನು ಮಧುಮೇಹರೋಗ ಮತ್ತು ಸಿಹಿಮೂತ್ರ ರೋಗ ಎಂದು ಉತ್ತೇಜಿಸಲಾಗಿದೆ. ಇರುವೆಗಳನ್ನು ಆಕರ್ಷಿಸುವ ಮೂತ್ರ ಡಯಾಬಿಟಿಸ್ ಎಂಬ ಶಬ್ದವನ್ನು ಕ್ರಿ.ಶ. 2ನೇ ಶತಮಾನದಲ್ಲಿ ಗ್ರೀಸ್‍ನ ಅರಿಯೇಟಸ್ ಎಂಬ ವೈದ್ಯ ನೀಡಿದನು. ಕ್ರಿ.ಶ. 1600ರಲ್ಲಿ ಥೋಮಸ್ ವಿಲ್ಸನ್ […]

ವಿಧ್ಯಾರ್ಥಿಗಳು ಸಮಯಕ್ಕೆ ಬೆಲೆ ನೀಡಿದರೆ ಸಾಧನೆ ಮಾಡಲು ಸಾಧ್ಯ- ವಿಜಯಪುರ ಎಸ್ಪಿ ಎಚ್. ಡಿ. ಆನಂದ ಕುಮಾರ

ವಿಜಯಪುರ.: ಕನ್ನಡ ಮಾಧ್ಯಮದಲ್ಲಿ ಓದಿ ಇಂದು ಅಧಿಕಾರಯಾಗಿದ್ದೇನೆ.  ವಿಧ್ಯಾರ್ಥಿಗಳು ಜೀವನದಲ್ಲಿ ಯಶಸ್ವಿಯಾಗಲು ಸಮಯಕ್ಕೆ ಮೊದಲು ಗೌರವಿಸಬೇಕು.  ಸಮಯಕ್ಕೆ ಬೆಲೆ ನೀಡಿದರೆ ಮಾತ್ರ ನಾವು ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ವಿಜಯಪುರ ಎಸ್ಪಿ ಎಚ್. ಡಿ. ಆನಂದ ಕುಮಾರ ಹೇಳಿದ್ದಾರೆ. ವಿಜಯಪುರ ನಗರದ ಕಂದಗಲ್ ಹಣಮಂತರಾಯ ರಂಗ ಮಂದಿರದಲ್ಲಿ ಸಮಾಜ ಕಲ್ಯಾಣ ಇಲಾಖೆ, ದಲಿತ ವಿದ್ಯಾರ್ಥಿ ಪರಿಷತ ಹಾಗೂ ಡಾ. ಬಿ. ಆರ್. ಅಂಬೇಡ್ಕರ್ ಆಫಿಸರ್ಸ್ ಅಕಾಡೆಮಿ ಸಂಯುಕ್ತ ಆಶ್ರಯದಲ್ಲಿ ವಿಧ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಹೇಗೆ? […]

ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ರಮೇಶ ಜಾರಕಿಹೊಳಿ ನಾನು ಚರ್ಚಿಸಿದ್ದೇವೆ- ಯತ್ನಾಳ

ವಿಜಯಪುರ: ಮಾಜಿ ಸಚಿವ ರಮೇಶ ಜಾರಕಿಹೊಳಿ ತಮ್ಮನ್ನು ಭೇಟಿ ಮಾಡಿ ಪಕ್ಷ ಬಲಪಡಿಸುವ ಮತ್ತು ಮುಂದಿನ ಬಾರಿ ಮತ್ತೆ ಅಧಿಕಾರಕ್ಕೆ ತರುವ ಕುರಿತು ಚರ್ಚಿಸಿರುವುದಾಗಿ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ. ವಿಜಯಪುರದಲ್ಲಿ ದೂರವಾಣಿ ಮೂಲಕ ಬಸವ ನಾಡು ಜೊತೆ ಮಾತನಾಡಿದ ಅವರು, ಮಾಜಿ ಸಚಿವ ರಮೇಶ ಜಾರಕಿಹೊಳಿ ಮಹಾರಾಷ್ಟ್ರದ ಸಾಂಗಲಿಯಿಂದ ನೇರವಾಗಿ ನಮ್ಮ ಮನೆಗೆ ಬಂದಿದ್ದರು.  ಸುಮಾರು ಒಂದು ಗಂಟೆಗಳ ಕಾಲ ವಿಸ್ತೃತ ಚರ್ಚೆ ನಡೆಸಿದ್ದೇವೆ.  ಸಧ್ಯದ ರಾಜಕೀಯ ವಿದ್ಯಮಾನಗಳು, ರಾಜ್ಯದಲ್ಲಿ […]

ಯತ್ನಾಳ ಭೇಟಿ ಮಾಡಿದ ಮಾಜಿ ಸಚಿವ ರಮೇಶ ಜಾರಕಿಹೊಳಿ- ಬಿಟ್ ಕಾಯಿನ್ ಬಿಸಿ ಮಧ್ಯೆ ಕುತೂಹಲ ಕೆರಳಿಸಿದ ಸುಮಾರು ಒಂದು ಗಂಟೆ ಕಾಲ ನಡೆದ ಮಾತುಕತೆ

ವಿಜಯಪುರ: ಮಾಜಿ ಸಚಿವ ರಮೇಶ ಜಾರಕಿಹೊಳಿ ಬಿಟ್ ಕಾಯಿನ್ ಬಿಸಿಯ ಮಧ್ಯೆಯೇ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಭೇಟಿ ಮಾಡಿ ಸುಮಾರು ಒಂದು ಗಂಟೆಗಳ ಕಾಲ ಮಾತುಕತೆ ನಡೆಸಿದ್ದಾರೆ. ವಿಜಯಪುರ ನಗರದ ಸಿಂದಗಿ ರಸ್ತೆಯಲ್ಲಿರುವ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮನೆಗೆ ಆಗಮಿಸಿದ ರಮೇಶ ಜಾರಕಿಹೊಳಿ ಯತ್ನಾಳ ಭೇಟಿಯಾಗಿರುವುದು ಸಾಕಷ್ಟು ಕುತೂಹಲ ಕೆರಳಿಸಿದೆ. ರಾಜ್ಯ ಮತ್ತು ರಾಷ್ಟ್ರಾದ್ಯಂತ ಬಿಟ್ ಕಾಯಿನ್ ಬಿಸಿ ಹೆಚ್ಚಿರುವಾಗಲೇ ಮಾಜಿ ಸಚಿವ ಜಗದೀಶ ಶೆಟ್ಟರ್ ಈಗಾಗಲೇ […]

ಬಿಟ್ ಕಾಯಿನ್ ವಿಚಾರ- ಇದರಲ್ಲಿ ಭಾಗಿಯಾಗಿರುವವರನ್ನು ಬಲಿ ಹಾಕಲಾಗುವುದು- ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಬಿಟ್ ಕಾಯಿನ್ ಪ್ರಕರಣದಲ್ಲಿ ಭಾಗಿಯಾಗಿರುವವರನ್ನು ಮುಲಾಜಿಲ್ಲದೇ ಬಲಿ ಹಾಕಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಜಯಂತಿ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಈ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು. ನಮ್ಮ ಸರಕಾರ ಈ ವಿಚಾರದಲ್ಲಿ ಬಹಳ ಮುಕ್ತವಾಗಿದೆ.‌‌ ಈ ಪ್ರಕರಣವನ್ನು ಬಯಲಿಗೆಳೆದವರೇ ನಾವು. ಈಗಾಗಲೇ ತನಿಖೆ ಮಾಡಿದ್ದು, ಇಡಿ ಮತ್ತು ಸಿಬಿಐ ಗೆ ಶಿಫಾರಸ್ಸು […]

ವಿ. ಪ. ಚುನಾವಣೆ- ವಿಜಯಪುರದಿಂದ ಒಬ್ಬರನ್ನು ಕಣಕ್ಕಿಳಿಸುವಂತೆ ಈ ಹಿಂದೆ ಶಾಸಕರು ಒತ್ತಾಯಿಸಿದ್ದೇವೆ- ಇನ್ನೂ ನಿರ್ಣಯವಾಗಿಲ್ಲ- ಕಾಂಗ್ರೆಸ್ ಶಾಸಕ ಶಿವಾನಂದ ಪಾಟೀಲ

ವಿಜಯಪುರ: ವಿಜಯಪುರ ಮತಕ್ಶೇತ್ರದಿಂದ ವಿಧಾನ ಪರಿಷತ್ತಿನ ದ್ವಿಸದಸ್ಯ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ಸಿನಿಂದ ಓರ್ವ ಅಭ್ಯರ್ಥಿಯನ್ನು ಮಾತ್ರ ಕಣಕ್ಕಿಳಿಸುವಂತೆ ಎಲ್ಲ ಶಾಸಕರು ಈ ಹಿಂದೆ ಒತ್ತಾಯ ಮಾಡಿದ್ದೇವೆ.  ಆದರೆ ಇನ್ನೂ ನಿರ್ಣಯ ಆಗಿಲ್ಲ ಎಂದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಕಾಂಗ್ರೆಸ್ ಶಾಸಕ ಮತ್ತು ಮಾಜಿ ಶಾಸಕ ಶಿವಾನಂದ ಪಾಟೀಲ ತಿಳಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ ಚುನಾವಣೆಗೆ ಒಬ್ಬರನ್ನು ಅಥವಾ ಇಬ್ಬರನ್ನು ಕಣಕ್ಕಿಳಿಸುವ ಕುರಿತು ಕಾಂಗ್ರೆಸ್ ವರಿಷ್ಠರು ಇನ್ನೂ ನಿರ್ಧಾರ ಕೈಗೊಂಡಿಲ್ಲ.  ಈ ಕುರಿತು […]