ಯತ್ನಾಳ ಭೇಟಿ ಮಾಡಿದ ಮಾಜಿ ಸಚಿವ ರಮೇಶ ಜಾರಕಿಹೊಳಿ- ಬಿಟ್ ಕಾಯಿನ್ ಬಿಸಿ ಮಧ್ಯೆ ಕುತೂಹಲ ಕೆರಳಿಸಿದ ಸುಮಾರು ಒಂದು ಗಂಟೆ ಕಾಲ ನಡೆದ ಮಾತುಕತೆ

ವಿಜಯಪುರ: ಮಾಜಿ ಸಚಿವ ರಮೇಶ ಜಾರಕಿಹೊಳಿ ಬಿಟ್ ಕಾಯಿನ್ ಬಿಸಿಯ ಮಧ್ಯೆಯೇ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಭೇಟಿ ಮಾಡಿ ಸುಮಾರು ಒಂದು ಗಂಟೆಗಳ ಕಾಲ ಮಾತುಕತೆ ನಡೆಸಿದ್ದಾರೆ.

ವಿಜಯಪುರ ನಗರದ ಸಿಂದಗಿ ರಸ್ತೆಯಲ್ಲಿರುವ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮನೆಗೆ ಆಗಮಿಸಿದ ರಮೇಶ ಜಾರಕಿಹೊಳಿ ಯತ್ನಾಳ ಭೇಟಿಯಾಗಿರುವುದು ಸಾಕಷ್ಟು ಕುತೂಹಲ ಕೆರಳಿಸಿದೆ.

ರಾಜ್ಯ ಮತ್ತು ರಾಷ್ಟ್ರಾದ್ಯಂತ ಬಿಟ್ ಕಾಯಿನ್ ಬಿಸಿ ಹೆಚ್ಚಿರುವಾಗಲೇ ಮಾಜಿ ಸಚಿವ ಜಗದೀಶ ಶೆಟ್ಟರ್ ಈಗಾಗಲೇ ದೆಹಲಿಗೆ ತೆರಳಿದ್ದಾರೆ.  ಈ ಮಧ್ಯೆ, ಮಾಜಿ ಸಚಿವ ರಮೇಶ ಜಾರಕಿಹೊಳಿ ಶಾಸಕ ಯತ್ನಾಳ ಅವರನ್ನು ಭೇಟಿ ಮಾಡಿರುವುದು ತೀವ್ರ ಕುತೂಹಲ ಕೆರಳಿಸಿದೆ.

ಈ ಇಬ್ಬರ ಭೇಟಿಯ ಮಧ್ಯೆ ಏನೆಲ್ಲ ವಿಚಾರ ಚರ್ಚೆಯಾಗಿದೆ ಎಂಬುದರ ಕುರಿತು ಸಧ್ಯಕ್ಕೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

Leave a Reply

ಹೊಸ ಪೋಸ್ಟ್‌