ಶಿಕ್ಷಣ ನೀಡಿ ಬದುಕು ರೂಪಿಸಿದ ಬಿ ಎಲ್ ಡಿ ಇ ಸಂಸ್ಥೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಅರ್ಪಿಸಿದ ಖ್ಯಾತ ನೇತ್ರತಜ್ಞ ಡಾ. ಪ್ರಭುಗೌಡ ಪಾಟೀಲ ಲಿಂಗದಳ್ಳಿ

ವಿಜಯಪುರ: ಇದು ನಿಸ್ವಾರ್ಥ ಸೇವೆಗೆ ಸಂದ ಗೌರವವನ್ನು ತನಗೆ ವಿದ್ಯೆ ನೀಡಿ ಜೀವನ ರೂಪಿಸಲು ನೆರವಾದ ಸಂಸ್ಥೆಗೆ ಅರ್ಪಿಸಿದ ಖ್ಯಾತ ವೈದ್ಯರ ಸ್ಟೋರಿ. ಭಾರತದ ಸ್ವಾತಂತ್ರ್ಯೋತಸ್ವದ ಅಮೃತ ಮಹೋತ್ಸವದ ಸಂತಸದ ಘಳಿಗೆಯಲ್ಲಿ ರಾಜ್ಯ ಸರಕಾರ ಬಸವ ನಾಡು ವಿಜಯಪುರದ ಖ್ಯಾತ ನೇತ್ರ ತಜ್ಞ ಡಾ. ಪ್ರಭುಗೌಡ ಪಾಟೀಲ ಲಿಂಗದಳ್ಳಿ ಅವರು ಮುಖ್ಯಸ್ಥರಾಗಿರುವ ಅನುಗ್ರಹ ಕಣ್ಣಿನ ಆಸ್ಪತ್ರೆಗೆ 2020-21ನೇ ವರ್ಷದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ. ಡಾ. ಪ್ರಭುಗೌಡ ಪಾಟೀಲ ವಿಜಯಪುರ ಜಿಲ್ಲೆಯ ಅಷ್ಟೇ ಅಲ್ಲ, ರಾಜ್ಯಾದ್ಯಂತ […]