ವಿಪ ಚುನಾವಣೆ: ವಿಜಯಪುರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಪಿ. ಎಚ್. ಪೂಜಾರ ನಾಮಪತ್ರ ಸಲ್ಲಿಕೆ

ವಿಜಯಪುರ: ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ವಿಜಯಪುರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಪಿ. ಎಚ್. ಪೂಜಾರ ನಾಮಪತ್ರ ಸಲ್ಲಿಸಿದ್ದಾರೆ.

 

ವಿಜಯಪುರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಅವರು, ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿಯೂ ಆಗಿರುವ ಪಿ. ಸುನೀಲ ಕುಮಾರ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ, ದೇವರ ಹಿಪ್ಪರಗಿ ಬಿಜೆಪಿ ಶಾಸಕ ಸೋಮನಗೌಡ ಪಾಟೀಲ, ಕರ್ನಾಟಕ ಬೀಜ ಪ್ರಮಾಣನ ಸಂಸ್ಥೆ ಅದ್ಯಕ್ಷ ವಿಜುಗೌಡ ಪಾಟೀಲ, ವಿಜಯಪುರ ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ ಉಪಸ್ಥಿತರಿದ್ದರು.

ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಅವರು, ಬಿಜೆಪಿ ಹೈಕಮಾಂಡ ವಿಜಯಪುರ ಮತ್ತು ಬಾಗಲಕೋಟೆ ಎರಡೂ ಜಿಲ್ಲೆಗಳ ಬಿಜೆಪಿ ಮುಖಂಡರ ಅಭಿಪ್ರಾಯ ಪಡೆದು ತಮಗೆ ಟಿಕೆಟ್ ನೀಡಿದೆ.  ತಾವು ಬಾಗಲಕೋಟೆ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಕೆಲಸ ಮಾಡಿದ್ದೇನೆ.  ಪಕ್ಷ ಸಂಘಟನೆಗೆ ಶ್ರಮಿಸಿದ್ದೇನೆ.  ಎರಡೂ ಜಿಲ್ಲೆಗಳ ಬಿಜೆಪಿ ನಾಯಕರ ವಿಶ್ವಾಸದೊಂದಿಗೆ ಚುನಾವಣೆ ಎದುರಿಸಿ ಜಯಗಳಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಮಗಿ, ಬಾಗಲಕೋಟೆ ಬಿಜೆಪಿ ಸಂಸದ ಪಿ. ಸಿ. ಗದ್ದಿಗೌಡರ, ದೇವರ ಹಿಪ್ಪರಗಿ ಬಿಜೆಪಿ ಶಾಸಕ ಸೋಮನಗೌಡ ಪಾಟೀಲ ಸಾಸನೂರ, ವಿಧಾನ ಪರಿಷತ ಬಿಜೆಪಿ ಸದಸ್ಯ ಹಣಮಂತ ನಿರಾಣಿ, ರಾಜ್ಯ ಸಾವಯವ ಬೀಜ ಪ್ರಮಾಣನ ಸಂಸ್ಥೆಯ ಅದ್ಯಕ್ಷ ವಿಜುಗೌಡ ಪಾಟೀಲ, ವಿಜಯಪುರ ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ ಮುಂತಾದವರು ಉಪಸ್ಥಿತರಿದ್ದರು.

 

Leave a Reply

ಹೊಸ ಪೋಸ್ಟ್‌