ಕಸಾಪ ವಿಜಯಪುರ ನೂತನ ಜಿಲ್ಲಾಧ್ಯಕ್ಷರಾಗಿ ಹಾಸಿಂಪೀರ ವಾಲಿಕಾರ ಭರ್ಜರಿ ಗೆಲುವು

ವಿಜಯಪುರ: ಕನ್ನಡ ಸಾಹಿತ್ಯ ಪರಿಷತ್ ವಿಜಯಪುರ ನೂತನ ಜಿಲ್ಲಾಧ್ಯಕ್ಷರಾಗಿ ಸಮಾಜ ಸೇವಕ ಹಾಸಿಂಪೀರ ವಾಲಿಕಾರ ಭರ್ಜರಿ ಜಯ ಗಳಿಸಿದ್ದಾರೆ.

 

ಹಾಸಿಂಪೀರ ವಾಲಿಕಾರ ಅವರು ನಿಕಟಪೂರ್ವ ಜಿಲ್ಲಾಧ್ಯಕ್ಷ ಮತ್ತು ಜೆಡಿಎಸ್ ವಿಜಯಪುರ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಯಂಡಿಗೇರಿ ಅವರನ್ನು ಸುಮಾರು 600ಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸಿದ್ದಾರೆ.

 

ನ್ಯಾಯವಾದಿ ಮಲ್ಲಿಕಾರ್ಜುನ ಭೃಂಗಿಮಠ ಮೂರನೇ ಸ್ಥಾನ ಪಡೆಸಿದ್ದಾರೆ.

ಈ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಹಾಸಿಂಪೀರ ವಾಲಿಕಾರ ಅವರನ್ನು ಹಿರಿಯ ಪತ್ರಕರ್ತ ಅಲ್ಲಮಪ್ರಭು ಜಿ. ಮಲ್ಲಿಕಾರ್ಜುನಮಠ ಸೇರಿದಂತೆ ನಾನಾ ಬೆಂಬಲಿಗರು ಮತ್ತು ಅಭಿಮಾನಿಗಳು ಅಭಿನಂದಿಸಿದ್ದಾರೆ.

Leave a Reply

ಹೊಸ ಪೋಸ್ಟ್‌