ಬಸವ ನಾಡಿನಲ್ಲಿ ಮತ್ತೆ ಭೂಕಂಪನ ಅನುಭವ- ಮನೆಯಿಂದ ಹೊರಬಂದ ಜನತೆ

ವಿಜಯಪುರ: ಬಸವ ನಾಡು ವಿಜಯಪುರ ಜಿಲ್ಲೆಯಲ್ಲಿ ರವಿವಾರ ರಾತ್ರಿ ಮತ್ತೆ ಭೂಮಿ ಕಂಪಿಸಿದೆ.

ರವಿವಾರ ರಾತ್ರಿ10.49ಕ್ಕರ ಭೂಕಂಪನದ ಅನುಭವವಾಗಿದೆ. ದ್ರಾಕ್ಷಿ ನಾಡು ತಿಕೋಟಾ ತಾಲೂಕಿನ ಕಳ್ಳಕವಟಗಿ, ಘೋಣಸಗಿ, ಸೋಮದೇವರಹಟ್ಟಿ, ಮಲಕನದೇವರಹಟ್ಟಿ, ಸಿದ್ದಾಪುರ ಕೆ., ಹುಬನೂರ ಭಾಗಗಳಲ್ಲಿ ಭೂಕಂಪನದ ಅನುಭವಾಗಿದೆ.

ಭೂಮಿಯಿಂದ ಜೋರಾದ ಶಬ್ದ ಕೇಳಿಬಂದ ಹಿನ್ನೆಲೆಯಲ್ಲಿ ಗಾಬರಿಗೊಂಡ ಜನತೆ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.

ಆದರೆ, ಇದು ಭೂಕಂಪನ ಹೌದು ಅಥವಾ ಅಲ್ಲ ಎಂಬುದನ್ನು ವಿಜಯಪುರ ಜಿಲ್ಲಾಡಳಿತ ಇನ್ನಷ್ಟೆ ಸ್ಪಷ್ಟಪಡಿಸಬೇಕಿದೆ.

Leave a Reply

ಹೊಸ ಪೋಸ್ಟ್‌