ಮಳೆಯಿಂದ ಹಾನಿಗೀಡಾದ ಬೆಳೆ ವೀಕ್ಷಣೆ ಮಾಡಿದ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ವಿಜಯಪುರ: ಹವಾಮಾನ ವೈಪರಿತ್ಯದಿಂದಾಗಿ ಉಂಟಾದ ಬೆಳೆ ಹಾನಿಯಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೆ. 8ಕ್ಕೆ ಬೆಳೆ ಹಾನಿ ವೀಕ್ಷಣೆಗೆ ತೆರಳಿದ ಜಿಲ್ಲಾಧಿಕಾರಿಗಳು ವಿಜಯಪುರ ತಾಲೂಕಿನ ಅರಕೇರಿ ಎಲ್. ಟಿ.-1, ಅಗಸನಾಳ, ಇಂಡಿ ತಾಲೂಕಿನ ಹೊರ್ತಿ, ಹಳಗುಣಕಿ ಮತ್ತು ಚಡಚಣ ತಾಲೂಕಿನ ನಾನಾ ಗ್ರಾಮಗಳ ಹೊಲಗಳಿಗೆ ಭೇಟಿ ನೀಡಿದರು.  ಅಲ್ಲದೇ, ದ್ರಾಕ್ಷಿ ಮತ್ತು ತೊಗರಿ ಬೆಳೆ ಹಾಳಾಗಿರುವುದನ್ನು ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ವಿಜಯಪುರ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಸಿದ್ಧರಾಮಯ್ಯ ಬರಗಿಮಠ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ. ರಾಜಶೇಖರ ವಿಲಿಯಮ್ಸ್ ಮುಂತಾದ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌